Homeಚಳವಳಿಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ : JNU ವಿದ್ಯಾರ್ಥಿ ಹೋರಾಟಕ್ಕೆ ಮೊದಲ ಗೆಲುವು..

- Advertisement -
- Advertisement -

ಶುಲ್ಕ ಹೆಚ್ಚಳದ ವಿರುದ್ಧ ಕಳೆದ 10 ದಿನಗಳಿಂದ ಭಾರೀ ಹೋರಾಟದ ಕಾರಣಕ್ಕೆ ದೇಶದ ಗಮನ ಸೆಳೆದಿರುವ ಜೆಎನ್‌ಯುನಲ್ಲಿ ಪರಿಹಾರ ಭರವಸೆ ದೊರಕಿದೆ. ಶುಲ್ಕ ಹೆಚ್ಚಳದ ಆದೇಶ ಮರುಪರಿಶೀಲನೆಗೆ ಒಪ್ಪಿದ ಕೇಂದ್ರ ಕೇಂದ್ರ ಸರ್ಕಾರವು ಅದಕ್ಕೊಂದು ಸಮಿತಿಯನ್ನು ರಚಿಸಿದೆ. ಸಮಿತಿಯು ಈಗಾಗಲೇ ವಿವಿಯ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಅವರ ಹಕ್ಕೊತ್ತಾಯಗಳ ಕುರಿತು ಚರ್ಚೆ ನಡೆಸಿದೆ.

ಇದು ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಸಿಕ್ಕ ಮೊದಲ ಗೆಲುವಾಗಿದೆ. ಮುಂದಿನ ಒಂದು ವಾರದಲ್ಲಿ ಜೆಎನ್‌ಯು ಶುಲ್ಕ ಹೆಚ್ಚಳದಲ್ಲಿ ವಿಚಾರದಲ್ಲಿ ಸಮಿತಿಯು ತನ್ನ ವರದಿಯನ್ನು ಸಲ್ಲಿಸಲಿದೆ.

ಯುಜಿಸಿ ಮಾಜಿ ಅಧ್ಯಕ್ಷ ವಿ.ಎಸ್.ಚೌಹಾನ್, ಎಐಸಿಟಿಇ ಅಧ್ಯಕ್ಷ ಅನಿಲ್ ಸಹಸ್ರಬುದ್ಧೆ ಮತ್ತು ಯುಜಿಸಿ ಕಾರ್ಯದರ್ಶಿ ರಜನೀಶ್ ಜೈನ್ ಸೇರಿದಂತೆ ಮೂವರು ಸದಸ್ಯರ ಸಮಿತಿಯು ಶುಕ್ರವಾರ ಜೆಎನ್‌ಯು ಕ್ಯಾಂಪಸ್‌ಗೆ ಭೇಟಿ ನೀಡಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದೆ.

ಇದನ್ನೂ ಓದಿ: JNU ವಿದ್ಯಾರ್ಥಿಗಳ ಮೇಲಿನ ದಾಳಿ ಖಂಡಿಸಿ ರಾಜ್ಯದ್ಯಂತ ವಿದ್ಯಾರ್ಥಿಗಳಿಂದ ಪ್ರತಿಭಟನೆ..

ವಿದ್ಯಾರ್ಥಿಗಳು ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದರಿಂದ ಸಂಧಾನಕ್ಕಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಮೂರು ಸದಸ್ಯರ ಸಮಿತಿಯನ್ನು ನೇಮಿಸಿದೆ.

“ನಾವು ವಿದ್ಯಾರ್ಥಿ ಸಂಘದ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದೇವೆ ಮತ್ತು ಅವರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡಿದ್ದೇವೆ. ಸಭೆ ಎರಡು ಗಂಟೆಗಳ ಕಾಲ ನಡೆಯಿತು, ಅಲ್ಲಿ ವಿವಿ ಆಡಳಿತ ಮತ್ತು ವಿದ್ಯಾರ್ಥಿಗಳ ನಡುವಿನ ಭಿನ್ನಾಭಿಪ್ರಾಯದ ಹಿಂದಿನ ಕಾರಣಗಳನ್ನು ನಾವು ತಿಳಿದುಕೊಂಡಿದ್ದೇವೆ” ಎಂದು ಸಮಿತಿಯ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

“ಇದು ಅಂತಿಮ ಸಭೆಯಾಗಿದ್ದು ನಾವು ಎಲ್ಲಾ ದೃಷ್ಟಿಕೋನಗಳಿಂದಲೂ ಆಲಿಸಿದ್ದೇವೆ. ನಾವು ಈಗ ನಮ್ಮ ಶಿಫಾರಸುಗಳನ್ನು ಒಂದು ವಾರದೊಳಗೆ ಸಲ್ಲಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

“ನಮ್ಮ ಚರ್ಚೆಯು ಸಕಾರಾತ್ಮಕವಾಗಿದೆ ಆದರೆ ಅಂತಿಮ ನಿರ್ಧಾರವನ್ನು ಜೆಎನ್‌ಯು ಆಡಳಿತವು ತೆಗೆದುಕೊಳ್ಳುತ್ತದೆ. ನಾವು ಶೀಘ್ರದಲ್ಲೇ ಶಿಫಾರಸುಗಳನ್ನು ಸಲ್ಲಿಸುತ್ತೇವೆ” ಎಂದು ವಿ.ಎಸ್. ಚೌಹಾನ್ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಹಾಗಾಗಿ ವಿದ್ಯಾರ್ಥಿಗಳು ಸಂಪೂರ್ಣ ಶುಲ್ಕ ಹೆಚ್ಚಳದ ಆದೇಶ ವಾಪಸಾತಿ ಆಗುವವರೆಗೂ ತಮ್ಮ ಹೋರಾಟವನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಅವರ ಹೋರಾಟಕ್ಕೆ JNU ಹಿರಿಯ ವಿದ್ಯಾರ್ಥಿಗಳು ಸಹ ಸಾಥ್‌ ನೀಡಿದ್ದು ಇಂದು ದೆಹಲಿಯ ಮಂಡಿಹೌಸ್‌ನಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ.

ಜೊತೆಗೆ ಏಮ್ಸ್‌ (All india Institute of medical science) ವಿದ್ಯಾರ್ಥಿ ಸಂಘವು ಕೂಡ ಪತ್ರಿಕಾ ಹೇಳಿಕೆ ನೀಡಿದ್ದು JNU ವಿದ್ಯಾರ್ಥಿಗಳ ಹೋರಾಟಕ್ಕೆ ಪೂರ್ಣ ಬೆಂಬಲ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...