Homeಮುಖಪುಟಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

ಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ಕಿತ್ತಾಟದ ನಡುವೆ ಎಡಪಕ್ಷಗಳು ಮತ್ತು ಕಾಂಗ್ರೆಸ್‌‌ನ ಮೈತ್ರಿ ಕೂಡಾ ಕೂಡಾ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸುತ್ತಿದೆ. ಎಡಪಕ್ಷಗಳು ಈ ಭಾರಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನರಿಗೆ ಮಣೆ ಹಾಕಿವೆ. ಅದರಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ನಾಯಕಿ 26 ವರ್ಷದ ಐಶೆ ಘೋಷ್‌ ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಿಪಿಐ(ಎಂ) ನಿಂದ ಆಯ್ಕೆಯಾಗಿದ್ದಾರೆ.

ಜೆಎನ್‌ಯುವಿನಲ್ಲಿ ಹಾಸ್ಟೆಲ್ ಫೀಸ್‌ ಹೆಚ್ಚಿಸುವುದರ ವಿರುದ್ದ ನಡೆದ ವಿದ್ಯಾರ್ಥಿ ಹೋರಾಟಕ್ಕೆ ಐಶೆ ಘೋಷ್‌ ನಾಯಕತ್ವ ನೀಡಿದ್ದರು. 2020 ರ ಜನವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಅವರ ಮೇಲೆ ಬಲ ಪಂಥೀಯ ವಿದ್ಯಾರ್ಥಿಗಳು ತೀವ್ರ ದಾಳಿ ನಡೆಸಿದ್ದರು.

ಸಿಪಿಐ(ಎಂ) ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ(ಎಸ್‌ಎಫ್‌ಐ) ನಾಯಕಿಯು ಆಗಿರುವ ಐಶೆ ಘೋಷ್ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಜಮುರಿಯಾದಿಂದ ಸ್ಪರ್ಧಿಸಲಿದ್ದಾರೆ. ಅವರು ಈ ಜಿಲ್ಲೆಯ ದುರ್ಗಾಪುರದವರಾಗಿದ್ದಾರೆ.

ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ವಿಧಾನಸಭಾ ಚುನಾವಣೆಗೆ ಹಲವು ಯುವ ನಾಯಕರನ್ನು ಕಣಕ್ಕಿಳಿಸಿದೆ. ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಜಿ ಅವರು ಹೂಗ್ಲಿ ಜಿಲ್ಲೆಯ ಸಿಂಗೂರ್ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

ಸಿಪಿಐ(ಎಂ) ಯುವಜನ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ)ದ ರಾಜ್ಯ ಅಧ್ಯಕ್ಷೆ ಮಿನಾಕ್ಷಿ ಮುಖರ್ಜಿ ನಂದಿಗ್ರಾಮದಲ್ಲಿ ಸ್ಪರ್ಧಿಸಲಿದ್ದಾರೆ. ಅಲ್ಲಿ ಟಿಎಂಸಿಯಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯಿಂದ ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಸುವೆಂದು ಅವರು ಮಮತಾ ಬ್ಯಾನರ್ಜಿಯ ಆಪ್ತರಾಗಿದ್ದರು, ಇತ್ತೀಚೆಗಷ್ಟೇ ಅವರು ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದರು.

ಅಷ್ಟೇ ಅಲ್ಲದೆ, ಜೆಎನ್‌ಯುನ ಮತ್ತೊಬ್ಬ ವಿದ್ಯಾರ್ಥಿ ನಾಯಕಿ, ದೀಪ್ಸಿತಾ ಧರ್ ಅವರಿಗೂ ಪಶ್ಚಿಮ‌ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಲು ಸಿಪಿಐ(ಎಂ) ಟಿಕೆಟ್ ನೀಡಿದೆ.

ಆರು ಹಂತಗಳಲ್ಲಿ ಎಡಪಕ್ಷಗಳು ಸ್ಪರ್ಧಿಸಲಿರುವ ಹೆಚ್ಚಿನ ಸ್ಥಾನಗಳ ಹೆಸರನ್ನು ಬಂಗಾಳ ಎಡರಂಗದ ಅಧ್ಯಕ್ಷ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಬಿಮನ್ ಬೋಸ್ ಬುಧವಾರ ಬಿಡುಗಡೆ ಮಾಡಿದ್ದಾರೆ. ಬಂಗಾಳದ 294 ಸ್ಥಾನಗಳಲ್ಲಿ, ಮೊದಲ ಮತ್ತು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 60 ರ ಎಡ ಅಭ್ಯರ್ಥಿಗಳ ಹೆಸರನ್ನು ಕಳೆದ ವಾರ ಘೋಷಿಸಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಅಬ್ಬಾಸುದ್ದೀನ್ ಸಿದ್ದಿಕಿ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಕೂಡಾ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. “ಕಾಂಗ್ರೆಸ್ ಮತ್ತು ಐಎಸ್ಎಫ್‌ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡುತ್ತವೆ. ಮಾತುಕತೆ ಇನ್ನೂ ನಡೆಯುತ್ತಿದೆ” ಎಂದು ಬೋಸ್ ಹೇಳಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತು. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆದ್ದಿರಲಿಲ್ಲ.

ಇದನ್ನೂ ಓದಿ: ‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ವಿಡಿಯೋ ನೋಡಿ►► ‘ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...