Homeಮುಖಪುಟಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

ಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ಕಿತ್ತಾಟದ ನಡುವೆ ಎಡಪಕ್ಷಗಳು ಮತ್ತು ಕಾಂಗ್ರೆಸ್‌‌ನ ಮೈತ್ರಿ ಕೂಡಾ ಕೂಡಾ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸುತ್ತಿದೆ. ಎಡಪಕ್ಷಗಳು ಈ ಭಾರಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನರಿಗೆ ಮಣೆ ಹಾಕಿವೆ. ಅದರಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ನಾಯಕಿ 26 ವರ್ಷದ ಐಶೆ ಘೋಷ್‌ ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಿಪಿಐ(ಎಂ) ನಿಂದ ಆಯ್ಕೆಯಾಗಿದ್ದಾರೆ.

ಜೆಎನ್‌ಯುವಿನಲ್ಲಿ ಹಾಸ್ಟೆಲ್ ಫೀಸ್‌ ಹೆಚ್ಚಿಸುವುದರ ವಿರುದ್ದ ನಡೆದ ವಿದ್ಯಾರ್ಥಿ ಹೋರಾಟಕ್ಕೆ ಐಶೆ ಘೋಷ್‌ ನಾಯಕತ್ವ ನೀಡಿದ್ದರು. 2020 ರ ಜನವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಅವರ ಮೇಲೆ ಬಲ ಪಂಥೀಯ ವಿದ್ಯಾರ್ಥಿಗಳು ತೀವ್ರ ದಾಳಿ ನಡೆಸಿದ್ದರು.

ಸಿಪಿಐ(ಎಂ) ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ(ಎಸ್‌ಎಫ್‌ಐ) ನಾಯಕಿಯು ಆಗಿರುವ ಐಶೆ ಘೋಷ್ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಜಮುರಿಯಾದಿಂದ ಸ್ಪರ್ಧಿಸಲಿದ್ದಾರೆ. ಅವರು ಈ ಜಿಲ್ಲೆಯ ದುರ್ಗಾಪುರದವರಾಗಿದ್ದಾರೆ.

ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ವಿಧಾನಸಭಾ ಚುನಾವಣೆಗೆ ಹಲವು ಯುವ ನಾಯಕರನ್ನು ಕಣಕ್ಕಿಳಿಸಿದೆ. ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಜಿ ಅವರು ಹೂಗ್ಲಿ ಜಿಲ್ಲೆಯ ಸಿಂಗೂರ್ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

ಸಿಪಿಐ(ಎಂ) ಯುವಜನ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ)ದ ರಾಜ್ಯ ಅಧ್ಯಕ್ಷೆ ಮಿನಾಕ್ಷಿ ಮುಖರ್ಜಿ ನಂದಿಗ್ರಾಮದಲ್ಲಿ ಸ್ಪರ್ಧಿಸಲಿದ್ದಾರೆ. ಅಲ್ಲಿ ಟಿಎಂಸಿಯಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯಿಂದ ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಸುವೆಂದು ಅವರು ಮಮತಾ ಬ್ಯಾನರ್ಜಿಯ ಆಪ್ತರಾಗಿದ್ದರು, ಇತ್ತೀಚೆಗಷ್ಟೇ ಅವರು ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದರು.

ಅಷ್ಟೇ ಅಲ್ಲದೆ, ಜೆಎನ್‌ಯುನ ಮತ್ತೊಬ್ಬ ವಿದ್ಯಾರ್ಥಿ ನಾಯಕಿ, ದೀಪ್ಸಿತಾ ಧರ್ ಅವರಿಗೂ ಪಶ್ಚಿಮ‌ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಲು ಸಿಪಿಐ(ಎಂ) ಟಿಕೆಟ್ ನೀಡಿದೆ.

ಆರು ಹಂತಗಳಲ್ಲಿ ಎಡಪಕ್ಷಗಳು ಸ್ಪರ್ಧಿಸಲಿರುವ ಹೆಚ್ಚಿನ ಸ್ಥಾನಗಳ ಹೆಸರನ್ನು ಬಂಗಾಳ ಎಡರಂಗದ ಅಧ್ಯಕ್ಷ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಬಿಮನ್ ಬೋಸ್ ಬುಧವಾರ ಬಿಡುಗಡೆ ಮಾಡಿದ್ದಾರೆ. ಬಂಗಾಳದ 294 ಸ್ಥಾನಗಳಲ್ಲಿ, ಮೊದಲ ಮತ್ತು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 60 ರ ಎಡ ಅಭ್ಯರ್ಥಿಗಳ ಹೆಸರನ್ನು ಕಳೆದ ವಾರ ಘೋಷಿಸಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಅಬ್ಬಾಸುದ್ದೀನ್ ಸಿದ್ದಿಕಿ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಕೂಡಾ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. “ಕಾಂಗ್ರೆಸ್ ಮತ್ತು ಐಎಸ್ಎಫ್‌ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡುತ್ತವೆ. ಮಾತುಕತೆ ಇನ್ನೂ ನಡೆಯುತ್ತಿದೆ” ಎಂದು ಬೋಸ್ ಹೇಳಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತು. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆದ್ದಿರಲಿಲ್ಲ.

ಇದನ್ನೂ ಓದಿ: ‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ವಿಡಿಯೋ ನೋಡಿ►► ‘ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...