Homeಮುಖಪುಟಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

ಬಂಗಾಳ ಚುನಾವಣೆ: CPI(M) ನಿಂದ ಸ್ಪರ್ಧಿಸಲಿರುವ ಜೆಎನ್‌ಯು ನಾಯಕಿ ‘ಐಶೆ ಘೋಷ್‌’

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಹೆಚ್ಚುತ್ತಿದ್ದು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್‌ನ ಕಿತ್ತಾಟದ ನಡುವೆ ಎಡಪಕ್ಷಗಳು ಮತ್ತು ಕಾಂಗ್ರೆಸ್‌‌ನ ಮೈತ್ರಿ ಕೂಡಾ ಕೂಡಾ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸುತ್ತಿದೆ. ಎಡಪಕ್ಷಗಳು ಈ ಭಾರಿ ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವಜನರಿಗೆ ಮಣೆ ಹಾಕಿವೆ. ಅದರಂತೆ ಜೆಎನ್‌ಯು ವಿದ್ಯಾರ್ಥಿ ಸಂಘದ ನಾಯಕಿ 26 ವರ್ಷದ ಐಶೆ ಘೋಷ್‌ ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಸಿಪಿಐ(ಎಂ) ನಿಂದ ಆಯ್ಕೆಯಾಗಿದ್ದಾರೆ.

ಜೆಎನ್‌ಯುವಿನಲ್ಲಿ ಹಾಸ್ಟೆಲ್ ಫೀಸ್‌ ಹೆಚ್ಚಿಸುವುದರ ವಿರುದ್ದ ನಡೆದ ವಿದ್ಯಾರ್ಥಿ ಹೋರಾಟಕ್ಕೆ ಐಶೆ ಘೋಷ್‌ ನಾಯಕತ್ವ ನೀಡಿದ್ದರು. 2020 ರ ಜನವರಿಯಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಅವರ ಮೇಲೆ ಬಲ ಪಂಥೀಯ ವಿದ್ಯಾರ್ಥಿಗಳು ತೀವ್ರ ದಾಳಿ ನಡೆಸಿದ್ದರು.

ಸಿಪಿಐ(ಎಂ) ನ ವಿದ್ಯಾರ್ಥಿ ಘಟಕವಾದ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾದ(ಎಸ್‌ಎಫ್‌ಐ) ನಾಯಕಿಯು ಆಗಿರುವ ಐಶೆ ಘೋಷ್ ಪಶ್ಚಿಮ ಬುರ್ದ್ವಾನ್ ಜಿಲ್ಲೆಯ ಜಮುರಿಯಾದಿಂದ ಸ್ಪರ್ಧಿಸಲಿದ್ದಾರೆ. ಅವರು ಈ ಜಿಲ್ಲೆಯ ದುರ್ಗಾಪುರದವರಾಗಿದ್ದಾರೆ.

ಇದನ್ನೂ ಓದಿ: ‘ಶರ್ಟ್, ಪ್ಯಾಂಟ್ ಬಿಚ್ಚಲು ಕಾಂಗ್ರೆಸ್‌ನವರು ಹೇಳಿ ಕೊಟ್ಟಿದ್ರಾ?’ – ಡಿ.ಕೆ. ಶಿವಕುಮಾರ್‌‌

ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ವಿಧಾನಸಭಾ ಚುನಾವಣೆಗೆ ಹಲವು ಯುವ ನಾಯಕರನ್ನು ಕಣಕ್ಕಿಳಿಸಿದೆ. ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ಶ್ರೀಜನ್ ಭಟ್ಟಾಚಾರ್ಜಿ ಅವರು ಹೂಗ್ಲಿ ಜಿಲ್ಲೆಯ ಸಿಂಗೂರ್ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ.

ಸಿಪಿಐ(ಎಂ) ಯುವಜನ ಸಂಘಟನೆಯಾದ ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (ಡಿವೈಎಫ್‌ಐ)ದ ರಾಜ್ಯ ಅಧ್ಯಕ್ಷೆ ಮಿನಾಕ್ಷಿ ಮುಖರ್ಜಿ ನಂದಿಗ್ರಾಮದಲ್ಲಿ ಸ್ಪರ್ಧಿಸಲಿದ್ದಾರೆ. ಅಲ್ಲಿ ಟಿಎಂಸಿಯಿಂದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯಿಂದ ಸುವೆಂದು ಅಧಿಕಾರಿ ಸ್ಪರ್ಧಿಸುತ್ತಿದ್ದಾರೆ. ಸುವೆಂದು ಅವರು ಮಮತಾ ಬ್ಯಾನರ್ಜಿಯ ಆಪ್ತರಾಗಿದ್ದರು, ಇತ್ತೀಚೆಗಷ್ಟೇ ಅವರು ಟಿಎಂಸಿಯಿಂದ ಬಿಜೆಪಿಗೆ ಪಕ್ಷಾಂತರವಾಗಿದ್ದರು.

ಅಷ್ಟೇ ಅಲ್ಲದೆ, ಜೆಎನ್‌ಯುನ ಮತ್ತೊಬ್ಬ ವಿದ್ಯಾರ್ಥಿ ನಾಯಕಿ, ದೀಪ್ಸಿತಾ ಧರ್ ಅವರಿಗೂ ಪಶ್ಚಿಮ‌ ಬಂಗಾಳ ಚುನಾವಣೆಯಲ್ಲಿ ಸ್ಪರ್ಧಿಸಲು ಸಿಪಿಐ(ಎಂ) ಟಿಕೆಟ್ ನೀಡಿದೆ.

ಆರು ಹಂತಗಳಲ್ಲಿ ಎಡಪಕ್ಷಗಳು ಸ್ಪರ್ಧಿಸಲಿರುವ ಹೆಚ್ಚಿನ ಸ್ಥಾನಗಳ ಹೆಸರನ್ನು ಬಂಗಾಳ ಎಡರಂಗದ ಅಧ್ಯಕ್ಷ ಮತ್ತು ಹಿರಿಯ ಸಿಪಿಐ(ಎಂ) ನಾಯಕ ಬಿಮನ್ ಬೋಸ್ ಬುಧವಾರ ಬಿಡುಗಡೆ ಮಾಡಿದ್ದಾರೆ. ಬಂಗಾಳದ 294 ಸ್ಥಾನಗಳಲ್ಲಿ, ಮೊದಲ ಮತ್ತು ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ 60 ರ ಎಡ ಅಭ್ಯರ್ಥಿಗಳ ಹೆಸರನ್ನು ಕಳೆದ ವಾರ ಘೋಷಿಸಲಾಗಿತ್ತು.

ಇದನ್ನೂ ಓದಿ: ಧಾರ್ಮಿಕ ಕೇಂದ್ರಗಳ ಮೇಲಿನ ದಾಳಿ ಕುರಿತು ಅಂಕಿಅಂಶಗಳಿಲ್ಲ: ಕೇಂದ್ರ ಸರ್ಕಾರ

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಅಬ್ಬಾಸುದ್ದೀನ್ ಸಿದ್ದಿಕಿ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಕೂಡಾ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದೆ. “ಕಾಂಗ್ರೆಸ್ ಮತ್ತು ಐಎಸ್ಎಫ್‌ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡುತ್ತವೆ. ಮಾತುಕತೆ ಇನ್ನೂ ನಡೆಯುತ್ತಿದೆ” ಎಂದು ಬೋಸ್ ಹೇಳಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತು. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆದ್ದಿರಲಿಲ್ಲ.

ಇದನ್ನೂ ಓದಿ: ‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ವಿಡಿಯೋ ನೋಡಿ►► ‘ಲೈಂಗಿಕ ಕಾರ್ಯಕರ್ತರು ಮನುಷ್ಯರಲ್ಲವೇ?’- ಬೆಂಗಳೂರಿನಲ್ಲಿ ಲೈಂಗಿಕ ಕಾರ್ಯಕರ್ತರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...