Homeಮುಖಪುಟಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ...

ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ  ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಲಾಗಿಲ್ಲ.

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಈ ಟ್ವಿಟರ್‌ ಖಾತೆಯಿಂದ ದೇಶದ್ರೋಹದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಜೆಎನ್‌ಯುನ ಪಿಎಚ್‌ಡಿ ಸಂಶೋಧನಾರ್ಥಿ ಶರ್ಜೀಲ್ ಇಮಾಮ್ ಅವರನ್ನು “ಐಐಟಿ-ಬಿ ಮತ್ತು ಜೆಎನ್‌ಯು ನಿರ್ಮಿಸಿದ ಜಿಹಾದಿ” ಎಂದು ಟ್ವೀಟ್‌ ಒಂದರಲ್ಲಿ ಉಲ್ಲೇಖಿಸಲಾಗಿತ್ತು. 2020 ರಲ್ಲಿ ಪೋಸ್ಟ್ ಮಾಡಲಾದ ಟ್ವೀಟ್‌ಗಳಲ್ಲಿ JNU ವಿದ್ಯಾರ್ಥಿಗಳನ್ನು “ಸೋತವರು” ಎಂದು ಹೇಳಿದ್ದರು. ಮತ್ತೊಂದು ಟ್ವೀಟ್‌ನಲ್ಲಿ “ಜಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್” ನಂತಹ ಸಂಸ್ಥೆಗಳಿಗೆ ಧನಸಹಾಯವನ್ನು ನೀಡದಂತೆ ಕರೆ ನೀಡಲಾಗಿದೆ.

ಈ ಖಾತೆಯ ಬಹುತೇಕ ಟ್ವೀಟ್‌ಗLಳು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್, ಎಡಪಂಥೀಯರು ಮತ್ತು  ಬುದ್ಧಿಜೀವಿಗಳ ಬಗೆಗಿನ ಟೀಕೆಗಳೆ ಆಗಿವೆ.

ಇನ್ನು ರೈತ ಹೋರಾಟವನ್ನು ವಿರೋಧಿಸಿ ಹಲವು ಟ್ವೀಟ್‌ಗಳನ್ನು ಮಾಡಲಾಗಿದೆ. 2021 ರಲ್ಲಿ ಲೇಖಕಿ ಶೆಫಾಲಿ ವೈದ್ಯ, ರೈತ ನಾಯಕ ರಾಕೇಶ್ ಟಿಕೈತ್ ಅವರ ಹೇಳಿಕೆಯನ್ನು ಹಂಚಿಕೊಂಡು, “ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ” ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನ ಟ್ವಿಟರ್ ಹ್ಯಾಂಡಲ್‌ನಿಂದ “ಅವರಿಗೆ ನೇಣು ಹಾಕಿಕೊಳ್ಳಲು ನಾನು ಹಗ್ಗ ಕೊಡುತ್ತೇನೆ” ಎಂದು ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಈ ಖಾತೆಯ ಹಳೆಯ ಹಲವು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಿಕ್ಷಣ ಸಚಿವಾಲಯ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಿಸಿ ಸೋಮವಾರ ಆದೇಶಿಸಿದೆ. ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿರುವ 59 ವರ್ಷ ವಯಸ್ಸಿನ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಜೆಎನ್‌ಯುನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇಲ್ಲಿಯೇ ಅವರು ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...