Homeಮುಖಪುಟಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ...

ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ  ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಲಾಗಿಲ್ಲ.

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಈ ಟ್ವಿಟರ್‌ ಖಾತೆಯಿಂದ ದೇಶದ್ರೋಹದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಜೆಎನ್‌ಯುನ ಪಿಎಚ್‌ಡಿ ಸಂಶೋಧನಾರ್ಥಿ ಶರ್ಜೀಲ್ ಇಮಾಮ್ ಅವರನ್ನು “ಐಐಟಿ-ಬಿ ಮತ್ತು ಜೆಎನ್‌ಯು ನಿರ್ಮಿಸಿದ ಜಿಹಾದಿ” ಎಂದು ಟ್ವೀಟ್‌ ಒಂದರಲ್ಲಿ ಉಲ್ಲೇಖಿಸಲಾಗಿತ್ತು. 2020 ರಲ್ಲಿ ಪೋಸ್ಟ್ ಮಾಡಲಾದ ಟ್ವೀಟ್‌ಗಳಲ್ಲಿ JNU ವಿದ್ಯಾರ್ಥಿಗಳನ್ನು “ಸೋತವರು” ಎಂದು ಹೇಳಿದ್ದರು. ಮತ್ತೊಂದು ಟ್ವೀಟ್‌ನಲ್ಲಿ “ಜಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್” ನಂತಹ ಸಂಸ್ಥೆಗಳಿಗೆ ಧನಸಹಾಯವನ್ನು ನೀಡದಂತೆ ಕರೆ ನೀಡಲಾಗಿದೆ.

ಈ ಖಾತೆಯ ಬಹುತೇಕ ಟ್ವೀಟ್‌ಗLಳು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್, ಎಡಪಂಥೀಯರು ಮತ್ತು  ಬುದ್ಧಿಜೀವಿಗಳ ಬಗೆಗಿನ ಟೀಕೆಗಳೆ ಆಗಿವೆ.

ಇನ್ನು ರೈತ ಹೋರಾಟವನ್ನು ವಿರೋಧಿಸಿ ಹಲವು ಟ್ವೀಟ್‌ಗಳನ್ನು ಮಾಡಲಾಗಿದೆ. 2021 ರಲ್ಲಿ ಲೇಖಕಿ ಶೆಫಾಲಿ ವೈದ್ಯ, ರೈತ ನಾಯಕ ರಾಕೇಶ್ ಟಿಕೈತ್ ಅವರ ಹೇಳಿಕೆಯನ್ನು ಹಂಚಿಕೊಂಡು, “ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ” ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನ ಟ್ವಿಟರ್ ಹ್ಯಾಂಡಲ್‌ನಿಂದ “ಅವರಿಗೆ ನೇಣು ಹಾಕಿಕೊಳ್ಳಲು ನಾನು ಹಗ್ಗ ಕೊಡುತ್ತೇನೆ” ಎಂದು ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಈ ಖಾತೆಯ ಹಳೆಯ ಹಲವು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಿಕ್ಷಣ ಸಚಿವಾಲಯ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಿಸಿ ಸೋಮವಾರ ಆದೇಶಿಸಿದೆ. ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿರುವ 59 ವರ್ಷ ವಯಸ್ಸಿನ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಜೆಎನ್‌ಯುನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇಲ್ಲಿಯೇ ಅವರು ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...