Homeಮುಖಪುಟಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ...

ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ  ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಲಾಗಿಲ್ಲ.

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಈ ಟ್ವಿಟರ್‌ ಖಾತೆಯಿಂದ ದೇಶದ್ರೋಹದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಜೆಎನ್‌ಯುನ ಪಿಎಚ್‌ಡಿ ಸಂಶೋಧನಾರ್ಥಿ ಶರ್ಜೀಲ್ ಇಮಾಮ್ ಅವರನ್ನು “ಐಐಟಿ-ಬಿ ಮತ್ತು ಜೆಎನ್‌ಯು ನಿರ್ಮಿಸಿದ ಜಿಹಾದಿ” ಎಂದು ಟ್ವೀಟ್‌ ಒಂದರಲ್ಲಿ ಉಲ್ಲೇಖಿಸಲಾಗಿತ್ತು. 2020 ರಲ್ಲಿ ಪೋಸ್ಟ್ ಮಾಡಲಾದ ಟ್ವೀಟ್‌ಗಳಲ್ಲಿ JNU ವಿದ್ಯಾರ್ಥಿಗಳನ್ನು “ಸೋತವರು” ಎಂದು ಹೇಳಿದ್ದರು. ಮತ್ತೊಂದು ಟ್ವೀಟ್‌ನಲ್ಲಿ “ಜಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್” ನಂತಹ ಸಂಸ್ಥೆಗಳಿಗೆ ಧನಸಹಾಯವನ್ನು ನೀಡದಂತೆ ಕರೆ ನೀಡಲಾಗಿದೆ.

ಈ ಖಾತೆಯ ಬಹುತೇಕ ಟ್ವೀಟ್‌ಗLಳು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್, ಎಡಪಂಥೀಯರು ಮತ್ತು  ಬುದ್ಧಿಜೀವಿಗಳ ಬಗೆಗಿನ ಟೀಕೆಗಳೆ ಆಗಿವೆ.

ಇನ್ನು ರೈತ ಹೋರಾಟವನ್ನು ವಿರೋಧಿಸಿ ಹಲವು ಟ್ವೀಟ್‌ಗಳನ್ನು ಮಾಡಲಾಗಿದೆ. 2021 ರಲ್ಲಿ ಲೇಖಕಿ ಶೆಫಾಲಿ ವೈದ್ಯ, ರೈತ ನಾಯಕ ರಾಕೇಶ್ ಟಿಕೈತ್ ಅವರ ಹೇಳಿಕೆಯನ್ನು ಹಂಚಿಕೊಂಡು, “ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ” ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನ ಟ್ವಿಟರ್ ಹ್ಯಾಂಡಲ್‌ನಿಂದ “ಅವರಿಗೆ ನೇಣು ಹಾಕಿಕೊಳ್ಳಲು ನಾನು ಹಗ್ಗ ಕೊಡುತ್ತೇನೆ” ಎಂದು ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಈ ಖಾತೆಯ ಹಳೆಯ ಹಲವು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಿಕ್ಷಣ ಸಚಿವಾಲಯ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಿಸಿ ಸೋಮವಾರ ಆದೇಶಿಸಿದೆ. ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿರುವ 59 ವರ್ಷ ವಯಸ್ಸಿನ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಜೆಎನ್‌ಯುನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇಲ್ಲಿಯೇ ಅವರು ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...