Homeಮುಖಪುಟಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ...

ಗೋಡ್ಸೆ- ಬಿಜೆಪಿ ಪರ, ಜೆಎನ್‌ಯು- ರೈತ ವಿರೋಧಿ ಟ್ವೀಟ್‌ಗಳು ವೈರಲ್‌: ಜೆಎನ್‌ಯು ನೂತನ ಉಪಕುಲಪತಿ ಹೆಸರಿನಲ್ಲಿದ್ದ ಖಾತೆ ಡಿಲೀಟ್

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ನೂತನ ಉಪಕುಲಪತಿಯಾಗಿ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಕ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ಘೋಷಿಸಿತ್ತು. ಈ ಬೆನ್ನಲ್ಲೇ, ಅವರ ಹೆಸರಿನಲ್ಲಿದ್ದ ಟ್ವಿಟರ್‌ ಖಾತೆಯಿಂದ ಜೆಎನ್‌ಯು ವಿದ್ಯಾರ್ಥಿಗಳನ್ನು ಟೀಕಿಸುವ, ರೈತರನ್ನು ದಲ್ಲಾಳಿಗಳು ಎಂದಿದ್ದ ಮತ್ತು ಬಿಜೆಪಿ ಸರ್ಕಾರವನ್ನು, ಗೋಡ್ಸೆಯನ್ನು ಬೆಂಬಲಿಸುವ  ಹಳೆಯ ಟ್ವೀಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಟ್ವೀಟ್‌ಗಳು ವೈರಲ್‌ ಆಗುತ್ತಿದ್ದ ಹಾಗೆಯೇ ಈ ಖಾತೆಯನ್ನು ಡಿಲೀಟ್ ಮಾಡಲಾಗಿದೆ. ಈ ಖಾತೆಯು ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರದ್ದೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಈ ಟ್ವೀಟ್‌ಗಳು @SantishreeD ಹ್ಯಾಂಡಲ್‌ನಿಂದ ಪೋಸ್ಟ್ ಮಾಡಲಾಗಿದೆ. ಈ ಅಕೌಂಟ್ ಪ್ರೊಫೆಸರ್ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಎಂದು ಅವರ ಪೂರ್ಣ ಹೆಸರಿನಿಂದ ಇತ್ತು. ಪ್ರೋಫೈಲ್ ಫೋಟೋ ಮಾತ್ರ ದೇವರ ಚಿತ್ರವಾಗಿತ್ತು. ಜೊತೆಗೆ ಮೇ 2021 ರಿಂದ ಈ ಖಾತೆಯಿಂದ ಯಾವುದೇ ಟ್ವೀಟ್‌ಗಳನ್ನು ಮಾಡಲಾಗಿಲ್ಲ.

ಸೋಮವಾರ ಅವರ ಹಳೆಯ ಟ್ವೀಟ್‌ಗಳು ವೈರಲ್ ಆದ ಕೆಲವೇ ಗಂಟೆಗಳ ನಂತರ ಈ ಖಾತೆಯನ್ನು ಅಳಿಸಲಾಗಿದೆ. ಆದರೆ ಈ ಮೊದಲೇ ತೆಗೆದುಕೊಳ್ಳಲಾಗಿದ್ದ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳು ಇನ್ನೂ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ.

ಇದನ್ನೂ ಓದಿ: ಜೆಎನ್‌ಯುಗೆ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಮೊದಲ ಮಹಿಳಾ ಉಪಕುಲಪತಿ, ಪರ ವಿರೋಧ ಚರ್ಚೆ

ಈ ಟ್ವಿಟರ್‌ ಖಾತೆಯಿಂದ ದೇಶದ್ರೋಹದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿರುವ ಜೆಎನ್‌ಯುನ ಪಿಎಚ್‌ಡಿ ಸಂಶೋಧನಾರ್ಥಿ ಶರ್ಜೀಲ್ ಇಮಾಮ್ ಅವರನ್ನು “ಐಐಟಿ-ಬಿ ಮತ್ತು ಜೆಎನ್‌ಯು ನಿರ್ಮಿಸಿದ ಜಿಹಾದಿ” ಎಂದು ಟ್ವೀಟ್‌ ಒಂದರಲ್ಲಿ ಉಲ್ಲೇಖಿಸಲಾಗಿತ್ತು. 2020 ರಲ್ಲಿ ಪೋಸ್ಟ್ ಮಾಡಲಾದ ಟ್ವೀಟ್‌ಗಳಲ್ಲಿ JNU ವಿದ್ಯಾರ್ಥಿಗಳನ್ನು “ಸೋತವರು” ಎಂದು ಹೇಳಿದ್ದರು. ಮತ್ತೊಂದು ಟ್ವೀಟ್‌ನಲ್ಲಿ “ಜಾಮಿಯಾ ಮತ್ತು ಸೇಂಟ್ ಸ್ಟೀಫನ್ಸ್” ನಂತಹ ಸಂಸ್ಥೆಗಳಿಗೆ ಧನಸಹಾಯವನ್ನು ನೀಡದಂತೆ ಕರೆ ನೀಡಲಾಗಿದೆ.

ಈ ಖಾತೆಯ ಬಹುತೇಕ ಟ್ವೀಟ್‌ಗLಳು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್, ಎಡಪಂಥೀಯರು ಮತ್ತು  ಬುದ್ಧಿಜೀವಿಗಳ ಬಗೆಗಿನ ಟೀಕೆಗಳೆ ಆಗಿವೆ.

ಇನ್ನು ರೈತ ಹೋರಾಟವನ್ನು ವಿರೋಧಿಸಿ ಹಲವು ಟ್ವೀಟ್‌ಗಳನ್ನು ಮಾಡಲಾಗಿದೆ. 2021 ರಲ್ಲಿ ಲೇಖಕಿ ಶೆಫಾಲಿ ವೈದ್ಯ, ರೈತ ನಾಯಕ ರಾಕೇಶ್ ಟಿಕೈತ್ ಅವರ ಹೇಳಿಕೆಯನ್ನು ಹಂಚಿಕೊಂಡು, “ಕೃಷಿ ಕಾನೂನುಗಳನ್ನು ರದ್ದುಗೊಳಿಸದಿದ್ದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ” ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರ ಹೆಸರಿನ ಟ್ವಿಟರ್ ಹ್ಯಾಂಡಲ್‌ನಿಂದ “ಅವರಿಗೆ ನೇಣು ಹಾಕಿಕೊಳ್ಳಲು ನಾನು ಹಗ್ಗ ಕೊಡುತ್ತೇನೆ” ಎಂದು ಟ್ವೀಟ್‌ ಮಾಡಲಾಗಿತ್ತು.

ಇದನ್ನೂ ಓದಿ: ವಿದ್ಯಾರ್ಥಿಗಳಲ್ಲಿ ಕೋಮುವಾದದ ವಿಷಬೀಜ ಬಿತ್ತಿ ಒಡೆದು ಆಳುತ್ತಿರುವ ಸರ್ಕಾರ: SFI ಆಕ್ರೋಶ

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ಈ ಖಾತೆಯ ಹಳೆಯ ಹಲವು ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಮೊದಲ ಮಹಿಳಾ ಉಪಕುಲಪತಿಯಾಗಿ ಶಿಕ್ಷಣ ಸಚಿವಾಲಯ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರನ್ನು ನೇಮಿಸಿ ಸೋಮವಾರ ಆದೇಶಿಸಿದೆ. ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯದ ಉಪಕುಲಪತಿಯಾಗಿರುವ 59 ವರ್ಷ ವಯಸ್ಸಿನ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು ಜೆಎನ್‌ಯುನ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಇಲ್ಲಿಯೇ ಅವರು ತಮ್ಮ ಎಂಫಿಲ್ ಮತ್ತು ಪಿಎಚ್‌ಡಿ ಮುಗಿಸಿದ್ದಾರೆ.


ಇದನ್ನೂ ಓದಿ: ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...