Homeಮುಖಪುಟಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

ಜೆಎನ್‌ಯು: ತಮಿಳು ವಿದ್ಯಾರ್ಥಿಗಳ ಮೇಲಿನ ಎಬಿವಿಪಿ ದಾಳಿ ಖಂಡಿಸಿ ಪ್ರತಿಭಟನೆ

- Advertisement -
- Advertisement -

ಕಳೆದ ವಾರ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ತಮಿಳು ವಿದ್ಯಾರ್ಥಿಗಳ ಮೇಲೆ ಎಬಿವಿಪಿ ನಡೆಸಿದ ಹಲ್ಲೆಯನ್ನು ಖಂಡಿಸಿ, ಫೆಬ್ರವರಿ 25, ಶನಿವಾರದಂದು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲ ಭಾರತ ವಿದ್ಯಾರ್ಥಿಗಳ ಸಂಘದ (ಎಐಎಸ್‌ಎ) ಜೆಎನ್‌ಯು ವಿಭಾಗವು ‘ರಿಕ್ಲೈಮ್ ಜೆಎನ್‌ಯು’ ಎಂಬ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸಿತು.

ದಾಳಿಯ ವೇಳೆ ಗಾಯಗೊಂಡಿದ್ದ ಪಿಎಚ್‌ಡಿ ಸ್ಕಾಲರ್ ನಾಜರ್ ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿದ್ದು, ”ಕ್ಯಾಂಪಸ್‌ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುವವರನ್ನು ಎಬಿವಿಪಿ ಗುರಿಯಾಗಿಸುತ್ತದೆ. ಈ ಬಾರಿ ಅದು ತಮಿಳರನ್ನು ಗುರಿಯಾಗಿಸಿಕೊಂಡಿದೆ” ಎಂದು ಹೇಳಿದ್ದಾರೆ.

ಫೆಬ್ರವರಿ 19ರಂದು ”ಜಾನೆ ಭಿ ದೋ ಯಾರೋ” ಎನ್ನುವ ವಿಡಂಬನಾತ್ಮಕ ಹಿಂದಿ ಚಲನಚಿತ್ರ ಪ್ರದರ್ಶನದ ವೇಳೆ ವಿದ್ಯಾರ್ಥಿಗಳ ಮೇಲೆ ಆರ್‌ಎಸ್‌ಎಸ್ ವಿದ್ಯಾರ್ಥಿ ಘಟಕವಾದ ಎಬಿವಿಪಿ ಹಲ್ಲೆ ನಡೆಸಿತು. ಆರ್‌ಎಸ್‌ಎಸ್-ಅಂಗಸಂಸ್ಥೆಯು ಶಿವಾಜಿಯ ಭಾವಚಿತ್ರದ ಬಗ್ಗೆ ತಕರಾರು ತೆಗೆದಿದೆ ಎಂದು ಆರೋಪಿಸಲಾಗಿದೆ. ಎಬಿವಿಪಿಯ ದಾಳಿಯಲ್ಲಿ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗಳಿಗೆ ಸಾಗಿಸುವ ಆಂಬ್ಯುಲೆನ್ಸ್‌ಗಳನ್ನು ಸಹ ನಿರ್ಬಂಧಿಸಲಾಗಿದೆ. ಇದಲ್ಲದೆ, ಹಿಂಸಾಚಾರ ನಡೆಯುತ್ತಿದ್ದರೂ ದೆಹಲಿ ಪೊಲೀಸರು ಮಾತ್ರ ಮಧ್ಯಪ್ರವೇಶಿಸಲು ನಿರಾಕರಿಸಿದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಎಬಿವಿಪಿಯು ಡಾ ಬಿಆರ್ ಅಂಬೇಡ್ಕರ್, ಪೆರಿಯಾರ್, ಭಗತ್ ಸಿಂಗ್ ಮತ್ತು ಕಾರ್ಲ್ ಮಾರ್ಕ್ಸ್ ಅವರ ಭಾವಚಿತ್ರಗಳನ್ನು ಧ್ವಂಸಗೊಳಿಸಿದೆ ಎನ್ನುವ ಆರೋಪಗಳು ಕೇಳಿಬಂದಿವೆ.

‘ರಿಕ್ಲೈಮ್ JNU’ ರ್ಯಾಲಿಯು ಹಲವಾರು ಬೇಡಿಕೆಗಳನ್ನು ಮುಂದಿಟ್ಟಿದೆ. ಅದರಲ್ಲಿ ಮೊದಲನೆಯದು ABVP ವಿರುದ್ಧ ಕ್ರಮ. ಈ ಬಗ್ಗೆ ತನಿಖೆ ನಡೆಸಲು ವಿಶ್ವವಿದ್ಯಾನಿಲಯ ಆಡಳಿತ ರಚಿಸಿರುವ ವಿಚಾರಣಾ ಸಮಿತಿಯನ್ನು ಪುನರ್ ರಚಿಸುವಂತೆ ಪ್ರತಿಭಟನಾನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು. ”ಪ್ರಸ್ತುತ ಸಮಿತಿಯಲ್ಲಿರುವ ಪ್ರಾಧ್ಯಾಪಕರು ಆಡಳಿತ ಮಂಡಳಿಗೆ ಹತ್ತಿರವಾಗಿದ್ದಾರೆ ಎಂದು ಮಧುರಿಮಾ ಕುಂದು ಹೇಳಿದ್ದಾರೆ. ಆ ಸಮಿತಿಯು ಜೆಎನ್‌ಯು-ವಿದ್ಯಾರ್ಥಿ ಸಂಘ (ಜೆಎನ್‌ಯು-ಎಸ್‌ಯು) ಮತ್ತು ಜೆಎನ್‌ಯು ಶಿಕ್ಷಕರ ಸಂಘದ ಪ್ರತಿನಿಧಿಗಳನ್ನು ಒಳಗೊಂಡಿರಬೇಕೆಂದು ನಾವು ಬಯಸುತ್ತೇವೆ” ಎಂದು ಅವರು ಹೇಳಿದರು.

ಫೆಬ್ರವರಿ 20ರಂದು ವಿದ್ಯಾರ್ಥಿಗಳ ಡೀನ್ ಸುಧೀರ್ ಪಿ ಸಿಂಗ್ ಹೊರಡಿಸಿದ ಸುತ್ತೋಲೆ ಪ್ರಕಾರ, ”ಎಲ್ಲಾ ಹಾಸ್ಟೆಲ್‌ಗಳು, ವಿದ್ಯಾರ್ಥಿಗಳ ಚಟುವಟಿಕೆ ಕೇಂದ್ರ (ಟೆಫ್ಲಾಸ್) ಮತ್ತು ಕ್ರೀಡಾ ಮೈದಾನಗಳು ಸೇರಿದಂತೆ ಇಂಟರ್-ಹಾಲ್-ಆಡಳಿತದ ಆವರಣದಲ್ಲಿ ವಿದ್ಯಾರ್ಥಿಗಳ ಏನೇ ಚಟುವಟಿಕೆ ನಡೆಸಿದರೂ ಡೀನ್ ಅವರಿಂದ ಔಪಚಾರಿಕ ಅನುಮತಿ ಅಗತ್ಯವಿರುತ್ತದೆ.” ಜೆಎನ್‌ಯು-ಎಸ್‌ಯು ಕಚೇರಿಯನ್ನು ಈಗ ಮುಚ್ಚಲಾಗಿದೆ. ಅವರ ಕಚೇರಿಗೆ ಹೋಗುವುದು ವಿದ್ಯಾರ್ಥಿ ಒಕ್ಕೂಟದ ಹಕ್ಕು. ಒಕ್ಕೂಟದ ಚುನಾಯಿತ ಅಧ್ಯಕ್ಷರನ್ನು ಅವರ ಕಚೇರಿಯಿಂದ ಹೊರಹಾಕಲಾಗಿದೆ ಮತ್ತು ಈಗ ಅದನ್ನು ಪ್ರವೇಶಿಸಲು ಬೇರೊಬ್ಬರ ಅನುಮತಿ ಅಗತ್ಯವಿದೆ ಎಂದು ನಾಜರ್ ಹೇಳಿದರು.

ಇದನ್ನೂ ಓದಿ: ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

”ಕೆಲವು ವರ್ಷಗಳ ಹಿಂದೆ, ಊಟದ ಹಾಲ್‌ಗಳನ್ನು ವಿದ್ಯಾರ್ಥಿಗಳು ಒಟ್ಟುಸೇರಲು ಮತ್ತು ಚರ್ಚೆ ನಡೆಸಲು ಬಳಸಲಾಗುತ್ತಿತ್ತು ಎಂದು ಮಧುರಿಮಾ ನೆನಪಿಸಿಕೊಂಡರು. ಈಗ ವಿದ್ಯಾರ್ಥಿ ಸಂಘದ ಕಚೇರಿ ಹೊರತುಪಡಿಸಿ, ಕ್ಯಾಂಪಸ್‌ನಲ್ಲಿ ಪ್ರಜಾಪ್ರಭುತ್ವದ ಜಾಗಗಳು ನಾಶವಾಗುತ್ತಿವೆ. ಇದು ಅಧಿಕಾರದ ವ್ಯವಸ್ಥಿತ ದುರುಪಯೋಗ ಮತ್ತು ಹಿಂಸಾಚಾರಕ್ಕೆ ಒಂದು ಮಾದರಿಯಾಗಿದೆ. ಪ್ರತಿ ಬಾರಿ ಎಬಿವಿಪಿ ದಾಳಿ ನಡೆದಾಗ ಈಗಿನಂತೆ ಸಮಿತಿ ರಚನೆಯಾಗುತ್ತದೆ. ಇದರಿಂದ ಯಾವ ಕ್ರಮವೂ ಜರಗುವುದಿಲ್ಲ ಅವರು ಹೀಗೆ ನಿರ್ಭೀತಿಯಿಂದ ದಾಳಿ ನಡೆಸುತ್ತಲೇ ಬರುತ್ತಿದ್ದಾರೆ” ಎಂದರು.

ಫೆಬ್ರವರಿ 19ರ ದಾಳಿಯು ಕ್ಯಾಂಪಸ್‌ನಲ್ಲಿ ನಡೆದ ಮೊದಲ ಘಟನೆಯಲ್ಲ, 2020ರಲ್ಲಿ, ಹೊರಗಿನವರು ಮುಸುಕುಧಾರಿಗಳಾಗಿ ಬಂದು, ವಿಶ್ವವಿದ್ಯಾಲಯದ ಸಬರಮತಿ ಹಾಸ್ಟೆಲ್‌ನ ವಿದ್ಯಾರ್ಥಿಗಳ ಮೇಲೆ ಕೋಲು ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದರು. ಅದೇ ವರ್ಷ ಪೆರಿಯಾರ್ ಹಾಸ್ಟೆಲ್‌ನಲ್ಲಿ ಮತ್ತೊಂದು ದಾಳಿ ಸಂಭವಿಸಿದೆ ಮತ್ತು ಕಳೆದ ವರ್ಷ ಡಿಸೆಂಬರ್‌ನಲ್ಲಿ ನಿಷೇಧಿತ BBC ಸಾಕ್ಷ್ಯಚಿತ್ರ ಇಂಡಿಯಾ: ದಿ ಮೋದಿ ಕ್ವೆಶ್ಚನ್ ವೀಕ್ಷಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ಮಧುರಿಮಾ ಅವರ ಮಾತುಗಳಿಗೆ ಧ್ವನಿಗೂಡಿಸಿದ ನಾಜರ್, ”ಇತ್ತೀಚಿನ ಅನೇಕ ಘಟನೆಗಳಲ್ಲಿ ಇದು ಕೂಡ ಒಂದು, ಇಂತಹ ದಾಳಿಗಳು ಹೆಚ್ಚಾಗುತ್ತಲೇ ಇವೆ. ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ಕಾರಣಕ್ಕೆ ಅವರು ನಿರ್ಭಯದಿಂದ ದಾಳಿ ನಡೆಸುವುದನ್ನು ಮುಂದುವರೆಸಿದ್ದಾರೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಕೇಂದ್ರ ಸರ್ಕಾರವನ್ನು ವಿರೋಧಿಸುವವರನ್ನು ಟಾರ್ಗೆಟ್ ಮಾಡುವುದು ಕ್ಯಾಂಪಸ್‌ನಲ್ಲಿ ವಾಡಿಕೆಯಾಗಿದೆ” ಎಂದು ಅವರು ಹೇಳಿದರು.

”ಕೇರಳ ಮತ್ತು ತಮಿಳುನಾಡಿನ ವಿದ್ಯಾರ್ಥಿಗಳು ಇಲ್ಲಿ ಅಲ್ಪಸಂಖ್ಯಾತರು ಎಂದು ಎಬಿವಿಪಿ ಹೇಳುವುದನ್ನು ನಾವು ಕೇಳಿದ್ದೇವೆ. ನಾವೇ ಬಹುಸಂಖ್ಯಾತರು, ನಾವು ಹೇಳಿದಂತೆ ನೀವು ಮಾಡಬೇಕು” ಎಂದು ಅವರು ಹೇಳುತ್ತಾರೆ ಎಂದರು.

ಬಿರ್ಸಾ ಅಂಬೇಡ್ಕರ್ ಫುಲೆ ಸ್ಟೂಡೆಂಟ್ಸ್ ಅಸೋಸಿಯೇಶನ್ (ಬಾಪ್ಸಾ) ಅಧ್ಯಕ್ಷ ಅಜಿಂಕ್ಯ ಸೋನಾವಾನೆ ಟಿಎನ್‌ಎಂ ಜೊತೆ ಮಾತನಾಡುತ್ತಾ, ”ದರ್ಶನ್ ಸೋಲಂಕಿ ಅವರ ಸಾವಿನಂತಹ ದೊಡ್ಡ ಸಮಸ್ಯೆಯ ಮೇಲಿನ ಗಮನವನ್ನು ಬೇರೆಡೆ ಸೆಳೆಯಲು ಇಂತಹ ಘಟನೆಗಳನ್ನು ಎಬಿವಿಪಿ ಸೃಷ್ಟಿ ಮಾಡಿದೆ ಎಂದು ಹೇಳಿದರು. ಹಿಂಸಾಚಾರ ನಡೆಯುವ ಮೊದಲು ನಾವು ಸಮಸ್ಯೆಯನ್ನು ಕೈಗೆತ್ತಿಕೊಂಡಿದ್ದೇವೆ. ಈಗ ಅವರ ಸಾವು, ಸಾಂಸ್ಥಿಕ ಕೊಲೆಯೇ ಹೊರತು, ಐಐಟಿ ಬಾಂಬೆ ಹೇಳುವಂತೆ ರ್ಯಾಗಿಂಗ್‌ನಿಂದ ಆತ್ಮಹತ್ಯೆಯಲ್ಲ. ದರ್ಶನ್ ಸಾವು ಒಂದು ಪ್ರತ್ಯೇಕ ಪ್ರಕರಣವಲ್ಲ. ಇದು ರೋಹಿತ್ ವೇಮುಲಾ ಮತ್ತು ಪಾಯಲ್ ತದ್ವಿ ಅವರ ಸಾವಿನಂತಹ ಸಾಂಸ್ಥಿಕ ಜಾತಿ ಆಧಾರಿತ ತಾರತಮ್ಯದ ಪರಿಣಾಮವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...