HomeಚಳವಳಿJNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

JNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

- Advertisement -
- Advertisement -

ನಾವು ಆತ್ಮಾರ್ಥವಾಗಿ ಏನಾನ್ನಾದರು ಸಾಧಿಸಬೇಕೆಂದು ಬಯಸಿದರೆ ಇಡೀ ಬ್ರಹ್ಮಾಂಡವೇ ಸಂಚುಹೂಡಿ ನಮ್ಮ ಜೊತೆ ನಿಲ್ಲುತ್ತದೆ’ ಎಂಬ ಮಾತಿದೆ. ಅಂತೆಯೇ ಛಲಬಿಡದೆ ಸಾಧಿಸುವ ಹಾದಿಯಲ್ಲಿ ಮುನ್ನೆಡೆಯುವವರಿಗೆ ಯಶಸ್ಸು ಸಿಕ್ಕೇ ಸಿಗುತ್ತದೆ. ಅಂತಹದ್ದೇ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಯುವಕ 34ರ ಹರೆಯದ ರಂಜಾಲ್ ಮೀನಾ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ (ಜೆಎನ್‌ಯು) ಭದ್ರತಾ ಸಿಬ್ಬಂದಿಯಾಗಿ 2014ರಲ್ಲಿ ಸೇರಿದ ರಂಜಾಲ್ ಮೀನಾ ಅವರಿಗೆ ಅದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿ ದಾಖಲಾಗುತ್ತೇನೆಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ ಊಹೆಗೂ ಮೀರಿ ಸಾಧನೆ ಮಾಡಿರುವ ಇವರು ತಮ್ಮ ಕುಟುಂಬದಲ್ಲಿ ಕಲಿಯುತ್ತಿರುವ ಮೊದಲ ಪೀಳಿಗೆಯವರಾಗಿದ್ದಾರೆ. ರಾಜಸ್ಥಾನದ ಕರೌಲಿ ಎಂಬ ಗ್ರಾಮೀಣ ಪ್ರದೇಶದಿಂದ ಬಂದಿರುವ ರಂಜಾಲ್ ಜೆಎನ್‌ಯುವಿನ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಭೇದಿಸಿ ಪಾಸುಮಾಡಿದ್ದಾರೆ.

ಮೀನಾ ದಿನಗೂಲಿ ಕೆಲಸಗಾರನ ಮಗನಾಗಿದ್ದು, ತನ್ನ ಹಳ್ಳಿ ಭಜೇರಾದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯ ವಿದ್ಯಾಭ್ಯಾಸ ಮುಗಿದ ನಂತರ ಕಾಲೇಜು ವಿದ್ಯಾಭ್ಯಾಸಕ್ಕೆ ತಮ್ಮ ಹಳ್ಳಿಯಿಂದ 25 ರಿಂದ 30km ದೂರ ಹೋಗಬೇಕಾದ ಕಾರಣದಿಂದ ಹಾಗೂ ಕುಟುಂಬದ ಪರಿಸ್ಥಿತಿ ಕಷ್ಟದಲ್ಲಿದ್ದರಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಸಿ ತಂದೆಯ ಕೆಲಸದಲ್ಲಿ ಸಹಾಯ ಮಾಡಲು ಆರಂಭಿಸಿದ್ದರು.

ಆದರೆ ಕಲಿಯುವ ಆಸಕ್ತಿ ಕಳೆದುಕೊಳ್ಳದ ಅವರು ರಾಜಸ್ಥಾನ ವಿಶ್ವನಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ, ಇತಿಹಾಸ ಮತ್ತು ಹಿಂದಿ ವಿಷಯಗಳಲ್ಲಿ ಕರೆಸ್ಪಾಂಡಿಂಗ್ನಲ್ಲಿ ಬಿಎ ಪದವಿ ಪಡೆದರು. ನಂತರ ತನ್ನ ಹೆಂಡತಿ ಮತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ದೆಹಲಿಗೆ ಬಂದು ಒಂದು ಚಿಕ್ಕ ಮನೆಯಲ್ಲಿ ವಾಸಿಸುತ್ತಿರುವ ರಂಜಾಲ್, ತನ್ನ ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಜೆಎನ್‌ಯುನಲ್ಲಿ ಸೆಕ್ಯೂರಿಟಿಯಾಗಿ ಕೆಸಲಕ್ಕೆ ಸೇರಿದರು. ಈ ಕಾರಣದಿಂದಾಗಿ ದಿನನಿತ್ಯ ಕಾಲೇಜಿಗೆ ಹೋಗಿ ಅಭ್ಯಾಸ ಮಾಡುವ ಅವಕಾಶ ಅವರಿಗೆ ಇರಲಿಲ್ಲ. ಆದರೆ ಜೆಎನ್‌ಯುವಿನ ಶೈಕ್ಷಣಿಕ ವಾತಾವರಣವನ್ನು ನೋಡಿದ ಮೇಲೆ ಅವರ ವಿದ್ಯಾಭ್ಯಾಸದ ಕನಸು ಮರುಕಳಿಸಿ, ಓದಿನ ಮೇಲಿನ ಆಸಕ್ತಿ ತೆರೆದುಕೊಂಡಿದೆ. ಓದಿನ ಮೇಲಿನ ಪ್ರೀತಿಯಿಂದ ಕೆಲಸದ ನಂತರ ಬಿಡುವಿನ ಸಮಯದಲ್ಲಿ ಪ್ರವೇಶ ಪರೀಕ್ಷೆ ತಯಾರಿ ನಡೆಸಲು ಆರಂಭಿಸಿದರು.

ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಮೀನಾ ಕುಟುಂಬದಲ್ಲಿ ಅವರೊಬ್ಬರೇ ದುಡಿಯುತ್ತಿದ್ದು, ತಿಂಗಳಿಗೆ 15,000 ಸಂಪಾದಿಸುತ್ತಿದ್ದಾರೆ. ಈ ಹಣದಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಗಿದ್ದು, ದಿನಪತ್ರಿಕೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಇವರು ತಮ್ಮ ಮೊಬೈಲ್ ಫೋನ್ ಮೂಲಕವೇ ಪತ್ರಿಕೆಗಳ ಸುದ್ದಿಗಳನ್ನು ಓದುವುದು ಮತ್ತು ವಿದ್ಯಾರ್ಥಿಗಳಿಂದ ಪಿಡಿಎಫ್ ನೋಟ್ಸ್ ಗಳನ್ನು ಪಡೆದುಕೊಂಡು ಅಭ್ಯಾಸ ಮಾಡಿದ್ದಾರೆ.

ವಿದೇಶಿ ಭಾಷೆಗಳನ್ನು ಕಲಿಯುವವರು ವಿದೇಶಗಳಿಗೆ ಭೇಟಿಕೊಡುತ್ತಾರೆಂದು ಕೇಳಿದ್ದ ರಂಜಾಲ್ ಮೀನಾ ವಿದೇಶಿ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡರು ಹಾಗೂ ನಾಗರೀಕ ಸೇವೆಗಳಿಗೆ ಸೇರಬೇಕೆಂಬ ಇಚ್ಛೆಯಿಂದ ಅದರಲ್ಲಿಯೂ ತಮ್ಮ ಅದೃಷ್ಡ ಪರೀಕ್ಷಿಸಲು ಬಯಸಿದ್ದರು. ಆದರೆ ಜೆಎನ್‌ಯು ವಿಶ್ವನಿದ್ಯಾನಿಲಯದಲ್ಲಿ ಉದ್ಯೋಗ ಮಾಡಿಕೊಂಡು ನಿಯಮಿತ ಶಿಕ್ಷಣವನ್ನು ದಿನನಿತ್ಯ ಪಡೆಯಲು ಸಾಧ್ಯವಿಲ್ಲ ಎಂಬ ನಿಯಮವಿದೆ. ಹಾಗಾಗಿ ಈಗ ರಾತ್ರಿ ವೇಳೆಯ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಇವರ ಶ್ರಮ ಮತ್ತು ಸಾಧನೆಯನ್ನು ನೋಡಿದ ಭದ್ರತಾ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ‘ನಮಗೆ ಆತನ ಬಗ್ಗೆ ಹೆಮ್ಮೆ ಇದೆ. ಆದರೆ ರಾತ್ರಿ ವೇಳೆ ಕೆಲಸ ಮಾಡಿ ದಿನನಿತ್ಯ ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತದೆ. ಎಷ್ಟು ಸಾಧ್ಯವೋ ಅಷ್ಟು ಆತನಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಜೆಎನ್‌ಯು ಎಂದರೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿರುವ ವಿಶ್ವವಿದ್ಯಾನಿಲಯ. ಇಲ್ಲಿ ಯಾರೂ ಜಾತಿ ಮತ್ತು ಸಾಮಾಜಿಕ ಶ್ರೇಣಿ ವ್ಯವಸ್ಥೆಗೆ ಆಸ್ಪದ ನೀಡುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಮತ್ತು ಪ್ರಧ್ಯಾಪಕರು ಪ್ರೋತ್ಸಾಹ ನೀಡಿದರು. ಇವರೆಲ್ಲರ ಪ್ರೋತ್ಸಾಹದಿಂದ ನಾನು ರಾತ್ರೋರಾತ್ರಿ ಪ್ರಸಿದ್ದನಾಗಿದ್ದೇನೆ. ಆದರೆ ಇತ್ತೀಚೆಗೆ ಜೆಎನ್‌ಯು ಬಗ್ಗೆ ತಪ್ಪು ಕಲ್ಪನೆಗಳು ಹೆಚ್ಚಾಗಿವೆ. 2016ರ ಫೆಬ್ರವರಿ ಘಟನೆಯ ನಂತರ ವಿವಿಯ ಬಗ್ಗೆ ಹಲವು ವಂದತಿಗಳು ಕೇಳಿ ಬರುತ್ತಿವೆ. ಆದರೆ ವಿದ್ಯಾರ್ಥಿಗಳು ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿಲ್ಲ. ಹಲವಾರು ವಿದ್ವಾಂಸರು ಈ ವಿವಿಯಿಂದ ಬಂದಿದ್ದಾರೆ. ನಾನೂ ಕೂಡ ಏನನ್ನಾದರು ಸಾಧಿಸುತ್ತೇನೆ ಎಂದು ಮೀನಾ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತ ಮಂಡಳಿಯಿಂದ ಮೀನಾಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಒಂದು ವಿಶಿಷ್ಟವಾದ ಪ್ರಕರಣವಾದ್ದರಿಂದ, ಏನು ಮಾಡಬಹುದೆಂದು ನಾವು ನೋಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿ ಹೇಳಿದ್ದಾರೆ

ಕೃಪೆ: ಹಿಂದೂಸ್ತಾನ್ ಟೈಮ್ಸ್

ಅನುವಾದ: ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...