HomeಚಳವಳಿJNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

JNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

- Advertisement -
- Advertisement -

ನಾವು ಆತ್ಮಾರ್ಥವಾಗಿ ಏನಾನ್ನಾದರು ಸಾಧಿಸಬೇಕೆಂದು ಬಯಸಿದರೆ ಇಡೀ ಬ್ರಹ್ಮಾಂಡವೇ ಸಂಚುಹೂಡಿ ನಮ್ಮ ಜೊತೆ ನಿಲ್ಲುತ್ತದೆ’ ಎಂಬ ಮಾತಿದೆ. ಅಂತೆಯೇ ಛಲಬಿಡದೆ ಸಾಧಿಸುವ ಹಾದಿಯಲ್ಲಿ ಮುನ್ನೆಡೆಯುವವರಿಗೆ ಯಶಸ್ಸು ಸಿಕ್ಕೇ ಸಿಗುತ್ತದೆ. ಅಂತಹದ್ದೇ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಯುವಕ 34ರ ಹರೆಯದ ರಂಜಾಲ್ ಮೀನಾ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ (ಜೆಎನ್‌ಯು) ಭದ್ರತಾ ಸಿಬ್ಬಂದಿಯಾಗಿ 2014ರಲ್ಲಿ ಸೇರಿದ ರಂಜಾಲ್ ಮೀನಾ ಅವರಿಗೆ ಅದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿ ದಾಖಲಾಗುತ್ತೇನೆಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ ಊಹೆಗೂ ಮೀರಿ ಸಾಧನೆ ಮಾಡಿರುವ ಇವರು ತಮ್ಮ ಕುಟುಂಬದಲ್ಲಿ ಕಲಿಯುತ್ತಿರುವ ಮೊದಲ ಪೀಳಿಗೆಯವರಾಗಿದ್ದಾರೆ. ರಾಜಸ್ಥಾನದ ಕರೌಲಿ ಎಂಬ ಗ್ರಾಮೀಣ ಪ್ರದೇಶದಿಂದ ಬಂದಿರುವ ರಂಜಾಲ್ ಜೆಎನ್‌ಯುವಿನ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಭೇದಿಸಿ ಪಾಸುಮಾಡಿದ್ದಾರೆ.

ಮೀನಾ ದಿನಗೂಲಿ ಕೆಲಸಗಾರನ ಮಗನಾಗಿದ್ದು, ತನ್ನ ಹಳ್ಳಿ ಭಜೇರಾದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯ ವಿದ್ಯಾಭ್ಯಾಸ ಮುಗಿದ ನಂತರ ಕಾಲೇಜು ವಿದ್ಯಾಭ್ಯಾಸಕ್ಕೆ ತಮ್ಮ ಹಳ್ಳಿಯಿಂದ 25 ರಿಂದ 30km ದೂರ ಹೋಗಬೇಕಾದ ಕಾರಣದಿಂದ ಹಾಗೂ ಕುಟುಂಬದ ಪರಿಸ್ಥಿತಿ ಕಷ್ಟದಲ್ಲಿದ್ದರಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಸಿ ತಂದೆಯ ಕೆಲಸದಲ್ಲಿ ಸಹಾಯ ಮಾಡಲು ಆರಂಭಿಸಿದ್ದರು.

ಆದರೆ ಕಲಿಯುವ ಆಸಕ್ತಿ ಕಳೆದುಕೊಳ್ಳದ ಅವರು ರಾಜಸ್ಥಾನ ವಿಶ್ವನಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ, ಇತಿಹಾಸ ಮತ್ತು ಹಿಂದಿ ವಿಷಯಗಳಲ್ಲಿ ಕರೆಸ್ಪಾಂಡಿಂಗ್ನಲ್ಲಿ ಬಿಎ ಪದವಿ ಪಡೆದರು. ನಂತರ ತನ್ನ ಹೆಂಡತಿ ಮತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ದೆಹಲಿಗೆ ಬಂದು ಒಂದು ಚಿಕ್ಕ ಮನೆಯಲ್ಲಿ ವಾಸಿಸುತ್ತಿರುವ ರಂಜಾಲ್, ತನ್ನ ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಜೆಎನ್‌ಯುನಲ್ಲಿ ಸೆಕ್ಯೂರಿಟಿಯಾಗಿ ಕೆಸಲಕ್ಕೆ ಸೇರಿದರು. ಈ ಕಾರಣದಿಂದಾಗಿ ದಿನನಿತ್ಯ ಕಾಲೇಜಿಗೆ ಹೋಗಿ ಅಭ್ಯಾಸ ಮಾಡುವ ಅವಕಾಶ ಅವರಿಗೆ ಇರಲಿಲ್ಲ. ಆದರೆ ಜೆಎನ್‌ಯುವಿನ ಶೈಕ್ಷಣಿಕ ವಾತಾವರಣವನ್ನು ನೋಡಿದ ಮೇಲೆ ಅವರ ವಿದ್ಯಾಭ್ಯಾಸದ ಕನಸು ಮರುಕಳಿಸಿ, ಓದಿನ ಮೇಲಿನ ಆಸಕ್ತಿ ತೆರೆದುಕೊಂಡಿದೆ. ಓದಿನ ಮೇಲಿನ ಪ್ರೀತಿಯಿಂದ ಕೆಲಸದ ನಂತರ ಬಿಡುವಿನ ಸಮಯದಲ್ಲಿ ಪ್ರವೇಶ ಪರೀಕ್ಷೆ ತಯಾರಿ ನಡೆಸಲು ಆರಂಭಿಸಿದರು.

ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಮೀನಾ ಕುಟುಂಬದಲ್ಲಿ ಅವರೊಬ್ಬರೇ ದುಡಿಯುತ್ತಿದ್ದು, ತಿಂಗಳಿಗೆ 15,000 ಸಂಪಾದಿಸುತ್ತಿದ್ದಾರೆ. ಈ ಹಣದಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಗಿದ್ದು, ದಿನಪತ್ರಿಕೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಇವರು ತಮ್ಮ ಮೊಬೈಲ್ ಫೋನ್ ಮೂಲಕವೇ ಪತ್ರಿಕೆಗಳ ಸುದ್ದಿಗಳನ್ನು ಓದುವುದು ಮತ್ತು ವಿದ್ಯಾರ್ಥಿಗಳಿಂದ ಪಿಡಿಎಫ್ ನೋಟ್ಸ್ ಗಳನ್ನು ಪಡೆದುಕೊಂಡು ಅಭ್ಯಾಸ ಮಾಡಿದ್ದಾರೆ.

ವಿದೇಶಿ ಭಾಷೆಗಳನ್ನು ಕಲಿಯುವವರು ವಿದೇಶಗಳಿಗೆ ಭೇಟಿಕೊಡುತ್ತಾರೆಂದು ಕೇಳಿದ್ದ ರಂಜಾಲ್ ಮೀನಾ ವಿದೇಶಿ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡರು ಹಾಗೂ ನಾಗರೀಕ ಸೇವೆಗಳಿಗೆ ಸೇರಬೇಕೆಂಬ ಇಚ್ಛೆಯಿಂದ ಅದರಲ್ಲಿಯೂ ತಮ್ಮ ಅದೃಷ್ಡ ಪರೀಕ್ಷಿಸಲು ಬಯಸಿದ್ದರು. ಆದರೆ ಜೆಎನ್‌ಯು ವಿಶ್ವನಿದ್ಯಾನಿಲಯದಲ್ಲಿ ಉದ್ಯೋಗ ಮಾಡಿಕೊಂಡು ನಿಯಮಿತ ಶಿಕ್ಷಣವನ್ನು ದಿನನಿತ್ಯ ಪಡೆಯಲು ಸಾಧ್ಯವಿಲ್ಲ ಎಂಬ ನಿಯಮವಿದೆ. ಹಾಗಾಗಿ ಈಗ ರಾತ್ರಿ ವೇಳೆಯ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಇವರ ಶ್ರಮ ಮತ್ತು ಸಾಧನೆಯನ್ನು ನೋಡಿದ ಭದ್ರತಾ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ‘ನಮಗೆ ಆತನ ಬಗ್ಗೆ ಹೆಮ್ಮೆ ಇದೆ. ಆದರೆ ರಾತ್ರಿ ವೇಳೆ ಕೆಲಸ ಮಾಡಿ ದಿನನಿತ್ಯ ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತದೆ. ಎಷ್ಟು ಸಾಧ್ಯವೋ ಅಷ್ಟು ಆತನಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಜೆಎನ್‌ಯು ಎಂದರೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿರುವ ವಿಶ್ವವಿದ್ಯಾನಿಲಯ. ಇಲ್ಲಿ ಯಾರೂ ಜಾತಿ ಮತ್ತು ಸಾಮಾಜಿಕ ಶ್ರೇಣಿ ವ್ಯವಸ್ಥೆಗೆ ಆಸ್ಪದ ನೀಡುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಮತ್ತು ಪ್ರಧ್ಯಾಪಕರು ಪ್ರೋತ್ಸಾಹ ನೀಡಿದರು. ಇವರೆಲ್ಲರ ಪ್ರೋತ್ಸಾಹದಿಂದ ನಾನು ರಾತ್ರೋರಾತ್ರಿ ಪ್ರಸಿದ್ದನಾಗಿದ್ದೇನೆ. ಆದರೆ ಇತ್ತೀಚೆಗೆ ಜೆಎನ್‌ಯು ಬಗ್ಗೆ ತಪ್ಪು ಕಲ್ಪನೆಗಳು ಹೆಚ್ಚಾಗಿವೆ. 2016ರ ಫೆಬ್ರವರಿ ಘಟನೆಯ ನಂತರ ವಿವಿಯ ಬಗ್ಗೆ ಹಲವು ವಂದತಿಗಳು ಕೇಳಿ ಬರುತ್ತಿವೆ. ಆದರೆ ವಿದ್ಯಾರ್ಥಿಗಳು ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿಲ್ಲ. ಹಲವಾರು ವಿದ್ವಾಂಸರು ಈ ವಿವಿಯಿಂದ ಬಂದಿದ್ದಾರೆ. ನಾನೂ ಕೂಡ ಏನನ್ನಾದರು ಸಾಧಿಸುತ್ತೇನೆ ಎಂದು ಮೀನಾ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತ ಮಂಡಳಿಯಿಂದ ಮೀನಾಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಒಂದು ವಿಶಿಷ್ಟವಾದ ಪ್ರಕರಣವಾದ್ದರಿಂದ, ಏನು ಮಾಡಬಹುದೆಂದು ನಾವು ನೋಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿ ಹೇಳಿದ್ದಾರೆ

ಕೃಪೆ: ಹಿಂದೂಸ್ತಾನ್ ಟೈಮ್ಸ್

ಅನುವಾದ: ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...