HomeಚಳವಳಿJNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

JNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

- Advertisement -
- Advertisement -

ನಾವು ಆತ್ಮಾರ್ಥವಾಗಿ ಏನಾನ್ನಾದರು ಸಾಧಿಸಬೇಕೆಂದು ಬಯಸಿದರೆ ಇಡೀ ಬ್ರಹ್ಮಾಂಡವೇ ಸಂಚುಹೂಡಿ ನಮ್ಮ ಜೊತೆ ನಿಲ್ಲುತ್ತದೆ’ ಎಂಬ ಮಾತಿದೆ. ಅಂತೆಯೇ ಛಲಬಿಡದೆ ಸಾಧಿಸುವ ಹಾದಿಯಲ್ಲಿ ಮುನ್ನೆಡೆಯುವವರಿಗೆ ಯಶಸ್ಸು ಸಿಕ್ಕೇ ಸಿಗುತ್ತದೆ. ಅಂತಹದ್ದೇ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಯುವಕ 34ರ ಹರೆಯದ ರಂಜಾಲ್ ಮೀನಾ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ (ಜೆಎನ್‌ಯು) ಭದ್ರತಾ ಸಿಬ್ಬಂದಿಯಾಗಿ 2014ರಲ್ಲಿ ಸೇರಿದ ರಂಜಾಲ್ ಮೀನಾ ಅವರಿಗೆ ಅದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿ ದಾಖಲಾಗುತ್ತೇನೆಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ ಊಹೆಗೂ ಮೀರಿ ಸಾಧನೆ ಮಾಡಿರುವ ಇವರು ತಮ್ಮ ಕುಟುಂಬದಲ್ಲಿ ಕಲಿಯುತ್ತಿರುವ ಮೊದಲ ಪೀಳಿಗೆಯವರಾಗಿದ್ದಾರೆ. ರಾಜಸ್ಥಾನದ ಕರೌಲಿ ಎಂಬ ಗ್ರಾಮೀಣ ಪ್ರದೇಶದಿಂದ ಬಂದಿರುವ ರಂಜಾಲ್ ಜೆಎನ್‌ಯುವಿನ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಭೇದಿಸಿ ಪಾಸುಮಾಡಿದ್ದಾರೆ.

ಮೀನಾ ದಿನಗೂಲಿ ಕೆಲಸಗಾರನ ಮಗನಾಗಿದ್ದು, ತನ್ನ ಹಳ್ಳಿ ಭಜೇರಾದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯ ವಿದ್ಯಾಭ್ಯಾಸ ಮುಗಿದ ನಂತರ ಕಾಲೇಜು ವಿದ್ಯಾಭ್ಯಾಸಕ್ಕೆ ತಮ್ಮ ಹಳ್ಳಿಯಿಂದ 25 ರಿಂದ 30km ದೂರ ಹೋಗಬೇಕಾದ ಕಾರಣದಿಂದ ಹಾಗೂ ಕುಟುಂಬದ ಪರಿಸ್ಥಿತಿ ಕಷ್ಟದಲ್ಲಿದ್ದರಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಸಿ ತಂದೆಯ ಕೆಲಸದಲ್ಲಿ ಸಹಾಯ ಮಾಡಲು ಆರಂಭಿಸಿದ್ದರು.

ಆದರೆ ಕಲಿಯುವ ಆಸಕ್ತಿ ಕಳೆದುಕೊಳ್ಳದ ಅವರು ರಾಜಸ್ಥಾನ ವಿಶ್ವನಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ, ಇತಿಹಾಸ ಮತ್ತು ಹಿಂದಿ ವಿಷಯಗಳಲ್ಲಿ ಕರೆಸ್ಪಾಂಡಿಂಗ್ನಲ್ಲಿ ಬಿಎ ಪದವಿ ಪಡೆದರು. ನಂತರ ತನ್ನ ಹೆಂಡತಿ ಮತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ದೆಹಲಿಗೆ ಬಂದು ಒಂದು ಚಿಕ್ಕ ಮನೆಯಲ್ಲಿ ವಾಸಿಸುತ್ತಿರುವ ರಂಜಾಲ್, ತನ್ನ ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಜೆಎನ್‌ಯುನಲ್ಲಿ ಸೆಕ್ಯೂರಿಟಿಯಾಗಿ ಕೆಸಲಕ್ಕೆ ಸೇರಿದರು. ಈ ಕಾರಣದಿಂದಾಗಿ ದಿನನಿತ್ಯ ಕಾಲೇಜಿಗೆ ಹೋಗಿ ಅಭ್ಯಾಸ ಮಾಡುವ ಅವಕಾಶ ಅವರಿಗೆ ಇರಲಿಲ್ಲ. ಆದರೆ ಜೆಎನ್‌ಯುವಿನ ಶೈಕ್ಷಣಿಕ ವಾತಾವರಣವನ್ನು ನೋಡಿದ ಮೇಲೆ ಅವರ ವಿದ್ಯಾಭ್ಯಾಸದ ಕನಸು ಮರುಕಳಿಸಿ, ಓದಿನ ಮೇಲಿನ ಆಸಕ್ತಿ ತೆರೆದುಕೊಂಡಿದೆ. ಓದಿನ ಮೇಲಿನ ಪ್ರೀತಿಯಿಂದ ಕೆಲಸದ ನಂತರ ಬಿಡುವಿನ ಸಮಯದಲ್ಲಿ ಪ್ರವೇಶ ಪರೀಕ್ಷೆ ತಯಾರಿ ನಡೆಸಲು ಆರಂಭಿಸಿದರು.

ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಮೀನಾ ಕುಟುಂಬದಲ್ಲಿ ಅವರೊಬ್ಬರೇ ದುಡಿಯುತ್ತಿದ್ದು, ತಿಂಗಳಿಗೆ 15,000 ಸಂಪಾದಿಸುತ್ತಿದ್ದಾರೆ. ಈ ಹಣದಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಗಿದ್ದು, ದಿನಪತ್ರಿಕೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಇವರು ತಮ್ಮ ಮೊಬೈಲ್ ಫೋನ್ ಮೂಲಕವೇ ಪತ್ರಿಕೆಗಳ ಸುದ್ದಿಗಳನ್ನು ಓದುವುದು ಮತ್ತು ವಿದ್ಯಾರ್ಥಿಗಳಿಂದ ಪಿಡಿಎಫ್ ನೋಟ್ಸ್ ಗಳನ್ನು ಪಡೆದುಕೊಂಡು ಅಭ್ಯಾಸ ಮಾಡಿದ್ದಾರೆ.

ವಿದೇಶಿ ಭಾಷೆಗಳನ್ನು ಕಲಿಯುವವರು ವಿದೇಶಗಳಿಗೆ ಭೇಟಿಕೊಡುತ್ತಾರೆಂದು ಕೇಳಿದ್ದ ರಂಜಾಲ್ ಮೀನಾ ವಿದೇಶಿ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡರು ಹಾಗೂ ನಾಗರೀಕ ಸೇವೆಗಳಿಗೆ ಸೇರಬೇಕೆಂಬ ಇಚ್ಛೆಯಿಂದ ಅದರಲ್ಲಿಯೂ ತಮ್ಮ ಅದೃಷ್ಡ ಪರೀಕ್ಷಿಸಲು ಬಯಸಿದ್ದರು. ಆದರೆ ಜೆಎನ್‌ಯು ವಿಶ್ವನಿದ್ಯಾನಿಲಯದಲ್ಲಿ ಉದ್ಯೋಗ ಮಾಡಿಕೊಂಡು ನಿಯಮಿತ ಶಿಕ್ಷಣವನ್ನು ದಿನನಿತ್ಯ ಪಡೆಯಲು ಸಾಧ್ಯವಿಲ್ಲ ಎಂಬ ನಿಯಮವಿದೆ. ಹಾಗಾಗಿ ಈಗ ರಾತ್ರಿ ವೇಳೆಯ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಇವರ ಶ್ರಮ ಮತ್ತು ಸಾಧನೆಯನ್ನು ನೋಡಿದ ಭದ್ರತಾ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ‘ನಮಗೆ ಆತನ ಬಗ್ಗೆ ಹೆಮ್ಮೆ ಇದೆ. ಆದರೆ ರಾತ್ರಿ ವೇಳೆ ಕೆಲಸ ಮಾಡಿ ದಿನನಿತ್ಯ ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತದೆ. ಎಷ್ಟು ಸಾಧ್ಯವೋ ಅಷ್ಟು ಆತನಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಜೆಎನ್‌ಯು ಎಂದರೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿರುವ ವಿಶ್ವವಿದ್ಯಾನಿಲಯ. ಇಲ್ಲಿ ಯಾರೂ ಜಾತಿ ಮತ್ತು ಸಾಮಾಜಿಕ ಶ್ರೇಣಿ ವ್ಯವಸ್ಥೆಗೆ ಆಸ್ಪದ ನೀಡುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಮತ್ತು ಪ್ರಧ್ಯಾಪಕರು ಪ್ರೋತ್ಸಾಹ ನೀಡಿದರು. ಇವರೆಲ್ಲರ ಪ್ರೋತ್ಸಾಹದಿಂದ ನಾನು ರಾತ್ರೋರಾತ್ರಿ ಪ್ರಸಿದ್ದನಾಗಿದ್ದೇನೆ. ಆದರೆ ಇತ್ತೀಚೆಗೆ ಜೆಎನ್‌ಯು ಬಗ್ಗೆ ತಪ್ಪು ಕಲ್ಪನೆಗಳು ಹೆಚ್ಚಾಗಿವೆ. 2016ರ ಫೆಬ್ರವರಿ ಘಟನೆಯ ನಂತರ ವಿವಿಯ ಬಗ್ಗೆ ಹಲವು ವಂದತಿಗಳು ಕೇಳಿ ಬರುತ್ತಿವೆ. ಆದರೆ ವಿದ್ಯಾರ್ಥಿಗಳು ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿಲ್ಲ. ಹಲವಾರು ವಿದ್ವಾಂಸರು ಈ ವಿವಿಯಿಂದ ಬಂದಿದ್ದಾರೆ. ನಾನೂ ಕೂಡ ಏನನ್ನಾದರು ಸಾಧಿಸುತ್ತೇನೆ ಎಂದು ಮೀನಾ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತ ಮಂಡಳಿಯಿಂದ ಮೀನಾಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಒಂದು ವಿಶಿಷ್ಟವಾದ ಪ್ರಕರಣವಾದ್ದರಿಂದ, ಏನು ಮಾಡಬಹುದೆಂದು ನಾವು ನೋಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿ ಹೇಳಿದ್ದಾರೆ

ಕೃಪೆ: ಹಿಂದೂಸ್ತಾನ್ ಟೈಮ್ಸ್

ಅನುವಾದ: ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...