HomeಚಳವಳಿJNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

JNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

- Advertisement -
- Advertisement -

ನಾವು ಆತ್ಮಾರ್ಥವಾಗಿ ಏನಾನ್ನಾದರು ಸಾಧಿಸಬೇಕೆಂದು ಬಯಸಿದರೆ ಇಡೀ ಬ್ರಹ್ಮಾಂಡವೇ ಸಂಚುಹೂಡಿ ನಮ್ಮ ಜೊತೆ ನಿಲ್ಲುತ್ತದೆ’ ಎಂಬ ಮಾತಿದೆ. ಅಂತೆಯೇ ಛಲಬಿಡದೆ ಸಾಧಿಸುವ ಹಾದಿಯಲ್ಲಿ ಮುನ್ನೆಡೆಯುವವರಿಗೆ ಯಶಸ್ಸು ಸಿಕ್ಕೇ ಸಿಗುತ್ತದೆ. ಅಂತಹದ್ದೇ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಯುವಕ 34ರ ಹರೆಯದ ರಂಜಾಲ್ ಮೀನಾ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ (ಜೆಎನ್‌ಯು) ಭದ್ರತಾ ಸಿಬ್ಬಂದಿಯಾಗಿ 2014ರಲ್ಲಿ ಸೇರಿದ ರಂಜಾಲ್ ಮೀನಾ ಅವರಿಗೆ ಅದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿ ದಾಖಲಾಗುತ್ತೇನೆಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ ಊಹೆಗೂ ಮೀರಿ ಸಾಧನೆ ಮಾಡಿರುವ ಇವರು ತಮ್ಮ ಕುಟುಂಬದಲ್ಲಿ ಕಲಿಯುತ್ತಿರುವ ಮೊದಲ ಪೀಳಿಗೆಯವರಾಗಿದ್ದಾರೆ. ರಾಜಸ್ಥಾನದ ಕರೌಲಿ ಎಂಬ ಗ್ರಾಮೀಣ ಪ್ರದೇಶದಿಂದ ಬಂದಿರುವ ರಂಜಾಲ್ ಜೆಎನ್‌ಯುವಿನ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಭೇದಿಸಿ ಪಾಸುಮಾಡಿದ್ದಾರೆ.

ಮೀನಾ ದಿನಗೂಲಿ ಕೆಲಸಗಾರನ ಮಗನಾಗಿದ್ದು, ತನ್ನ ಹಳ್ಳಿ ಭಜೇರಾದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯ ವಿದ್ಯಾಭ್ಯಾಸ ಮುಗಿದ ನಂತರ ಕಾಲೇಜು ವಿದ್ಯಾಭ್ಯಾಸಕ್ಕೆ ತಮ್ಮ ಹಳ್ಳಿಯಿಂದ 25 ರಿಂದ 30km ದೂರ ಹೋಗಬೇಕಾದ ಕಾರಣದಿಂದ ಹಾಗೂ ಕುಟುಂಬದ ಪರಿಸ್ಥಿತಿ ಕಷ್ಟದಲ್ಲಿದ್ದರಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಸಿ ತಂದೆಯ ಕೆಲಸದಲ್ಲಿ ಸಹಾಯ ಮಾಡಲು ಆರಂಭಿಸಿದ್ದರು.

ಆದರೆ ಕಲಿಯುವ ಆಸಕ್ತಿ ಕಳೆದುಕೊಳ್ಳದ ಅವರು ರಾಜಸ್ಥಾನ ವಿಶ್ವನಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ, ಇತಿಹಾಸ ಮತ್ತು ಹಿಂದಿ ವಿಷಯಗಳಲ್ಲಿ ಕರೆಸ್ಪಾಂಡಿಂಗ್ನಲ್ಲಿ ಬಿಎ ಪದವಿ ಪಡೆದರು. ನಂತರ ತನ್ನ ಹೆಂಡತಿ ಮತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ದೆಹಲಿಗೆ ಬಂದು ಒಂದು ಚಿಕ್ಕ ಮನೆಯಲ್ಲಿ ವಾಸಿಸುತ್ತಿರುವ ರಂಜಾಲ್, ತನ್ನ ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಜೆಎನ್‌ಯುನಲ್ಲಿ ಸೆಕ್ಯೂರಿಟಿಯಾಗಿ ಕೆಸಲಕ್ಕೆ ಸೇರಿದರು. ಈ ಕಾರಣದಿಂದಾಗಿ ದಿನನಿತ್ಯ ಕಾಲೇಜಿಗೆ ಹೋಗಿ ಅಭ್ಯಾಸ ಮಾಡುವ ಅವಕಾಶ ಅವರಿಗೆ ಇರಲಿಲ್ಲ. ಆದರೆ ಜೆಎನ್‌ಯುವಿನ ಶೈಕ್ಷಣಿಕ ವಾತಾವರಣವನ್ನು ನೋಡಿದ ಮೇಲೆ ಅವರ ವಿದ್ಯಾಭ್ಯಾಸದ ಕನಸು ಮರುಕಳಿಸಿ, ಓದಿನ ಮೇಲಿನ ಆಸಕ್ತಿ ತೆರೆದುಕೊಂಡಿದೆ. ಓದಿನ ಮೇಲಿನ ಪ್ರೀತಿಯಿಂದ ಕೆಲಸದ ನಂತರ ಬಿಡುವಿನ ಸಮಯದಲ್ಲಿ ಪ್ರವೇಶ ಪರೀಕ್ಷೆ ತಯಾರಿ ನಡೆಸಲು ಆರಂಭಿಸಿದರು.

ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಮೀನಾ ಕುಟುಂಬದಲ್ಲಿ ಅವರೊಬ್ಬರೇ ದುಡಿಯುತ್ತಿದ್ದು, ತಿಂಗಳಿಗೆ 15,000 ಸಂಪಾದಿಸುತ್ತಿದ್ದಾರೆ. ಈ ಹಣದಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಗಿದ್ದು, ದಿನಪತ್ರಿಕೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಇವರು ತಮ್ಮ ಮೊಬೈಲ್ ಫೋನ್ ಮೂಲಕವೇ ಪತ್ರಿಕೆಗಳ ಸುದ್ದಿಗಳನ್ನು ಓದುವುದು ಮತ್ತು ವಿದ್ಯಾರ್ಥಿಗಳಿಂದ ಪಿಡಿಎಫ್ ನೋಟ್ಸ್ ಗಳನ್ನು ಪಡೆದುಕೊಂಡು ಅಭ್ಯಾಸ ಮಾಡಿದ್ದಾರೆ.

ವಿದೇಶಿ ಭಾಷೆಗಳನ್ನು ಕಲಿಯುವವರು ವಿದೇಶಗಳಿಗೆ ಭೇಟಿಕೊಡುತ್ತಾರೆಂದು ಕೇಳಿದ್ದ ರಂಜಾಲ್ ಮೀನಾ ವಿದೇಶಿ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡರು ಹಾಗೂ ನಾಗರೀಕ ಸೇವೆಗಳಿಗೆ ಸೇರಬೇಕೆಂಬ ಇಚ್ಛೆಯಿಂದ ಅದರಲ್ಲಿಯೂ ತಮ್ಮ ಅದೃಷ್ಡ ಪರೀಕ್ಷಿಸಲು ಬಯಸಿದ್ದರು. ಆದರೆ ಜೆಎನ್‌ಯು ವಿಶ್ವನಿದ್ಯಾನಿಲಯದಲ್ಲಿ ಉದ್ಯೋಗ ಮಾಡಿಕೊಂಡು ನಿಯಮಿತ ಶಿಕ್ಷಣವನ್ನು ದಿನನಿತ್ಯ ಪಡೆಯಲು ಸಾಧ್ಯವಿಲ್ಲ ಎಂಬ ನಿಯಮವಿದೆ. ಹಾಗಾಗಿ ಈಗ ರಾತ್ರಿ ವೇಳೆಯ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಇವರ ಶ್ರಮ ಮತ್ತು ಸಾಧನೆಯನ್ನು ನೋಡಿದ ಭದ್ರತಾ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ‘ನಮಗೆ ಆತನ ಬಗ್ಗೆ ಹೆಮ್ಮೆ ಇದೆ. ಆದರೆ ರಾತ್ರಿ ವೇಳೆ ಕೆಲಸ ಮಾಡಿ ದಿನನಿತ್ಯ ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತದೆ. ಎಷ್ಟು ಸಾಧ್ಯವೋ ಅಷ್ಟು ಆತನಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಜೆಎನ್‌ಯು ಎಂದರೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿರುವ ವಿಶ್ವವಿದ್ಯಾನಿಲಯ. ಇಲ್ಲಿ ಯಾರೂ ಜಾತಿ ಮತ್ತು ಸಾಮಾಜಿಕ ಶ್ರೇಣಿ ವ್ಯವಸ್ಥೆಗೆ ಆಸ್ಪದ ನೀಡುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಮತ್ತು ಪ್ರಧ್ಯಾಪಕರು ಪ್ರೋತ್ಸಾಹ ನೀಡಿದರು. ಇವರೆಲ್ಲರ ಪ್ರೋತ್ಸಾಹದಿಂದ ನಾನು ರಾತ್ರೋರಾತ್ರಿ ಪ್ರಸಿದ್ದನಾಗಿದ್ದೇನೆ. ಆದರೆ ಇತ್ತೀಚೆಗೆ ಜೆಎನ್‌ಯು ಬಗ್ಗೆ ತಪ್ಪು ಕಲ್ಪನೆಗಳು ಹೆಚ್ಚಾಗಿವೆ. 2016ರ ಫೆಬ್ರವರಿ ಘಟನೆಯ ನಂತರ ವಿವಿಯ ಬಗ್ಗೆ ಹಲವು ವಂದತಿಗಳು ಕೇಳಿ ಬರುತ್ತಿವೆ. ಆದರೆ ವಿದ್ಯಾರ್ಥಿಗಳು ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿಲ್ಲ. ಹಲವಾರು ವಿದ್ವಾಂಸರು ಈ ವಿವಿಯಿಂದ ಬಂದಿದ್ದಾರೆ. ನಾನೂ ಕೂಡ ಏನನ್ನಾದರು ಸಾಧಿಸುತ್ತೇನೆ ಎಂದು ಮೀನಾ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತ ಮಂಡಳಿಯಿಂದ ಮೀನಾಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಒಂದು ವಿಶಿಷ್ಟವಾದ ಪ್ರಕರಣವಾದ್ದರಿಂದ, ಏನು ಮಾಡಬಹುದೆಂದು ನಾವು ನೋಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿ ಹೇಳಿದ್ದಾರೆ

ಕೃಪೆ: ಹಿಂದೂಸ್ತಾನ್ ಟೈಮ್ಸ್

ಅನುವಾದ: ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...