HomeಚಳವಳಿJNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

JNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

- Advertisement -
- Advertisement -

ನಾವು ಆತ್ಮಾರ್ಥವಾಗಿ ಏನಾನ್ನಾದರು ಸಾಧಿಸಬೇಕೆಂದು ಬಯಸಿದರೆ ಇಡೀ ಬ್ರಹ್ಮಾಂಡವೇ ಸಂಚುಹೂಡಿ ನಮ್ಮ ಜೊತೆ ನಿಲ್ಲುತ್ತದೆ’ ಎಂಬ ಮಾತಿದೆ. ಅಂತೆಯೇ ಛಲಬಿಡದೆ ಸಾಧಿಸುವ ಹಾದಿಯಲ್ಲಿ ಮುನ್ನೆಡೆಯುವವರಿಗೆ ಯಶಸ್ಸು ಸಿಕ್ಕೇ ಸಿಗುತ್ತದೆ. ಅಂತಹದ್ದೇ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಯುವಕ 34ರ ಹರೆಯದ ರಂಜಾಲ್ ಮೀನಾ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ (ಜೆಎನ್‌ಯು) ಭದ್ರತಾ ಸಿಬ್ಬಂದಿಯಾಗಿ 2014ರಲ್ಲಿ ಸೇರಿದ ರಂಜಾಲ್ ಮೀನಾ ಅವರಿಗೆ ಅದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿ ದಾಖಲಾಗುತ್ತೇನೆಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ ಊಹೆಗೂ ಮೀರಿ ಸಾಧನೆ ಮಾಡಿರುವ ಇವರು ತಮ್ಮ ಕುಟುಂಬದಲ್ಲಿ ಕಲಿಯುತ್ತಿರುವ ಮೊದಲ ಪೀಳಿಗೆಯವರಾಗಿದ್ದಾರೆ. ರಾಜಸ್ಥಾನದ ಕರೌಲಿ ಎಂಬ ಗ್ರಾಮೀಣ ಪ್ರದೇಶದಿಂದ ಬಂದಿರುವ ರಂಜಾಲ್ ಜೆಎನ್‌ಯುವಿನ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಭೇದಿಸಿ ಪಾಸುಮಾಡಿದ್ದಾರೆ.

ಮೀನಾ ದಿನಗೂಲಿ ಕೆಲಸಗಾರನ ಮಗನಾಗಿದ್ದು, ತನ್ನ ಹಳ್ಳಿ ಭಜೇರಾದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯ ವಿದ್ಯಾಭ್ಯಾಸ ಮುಗಿದ ನಂತರ ಕಾಲೇಜು ವಿದ್ಯಾಭ್ಯಾಸಕ್ಕೆ ತಮ್ಮ ಹಳ್ಳಿಯಿಂದ 25 ರಿಂದ 30km ದೂರ ಹೋಗಬೇಕಾದ ಕಾರಣದಿಂದ ಹಾಗೂ ಕುಟುಂಬದ ಪರಿಸ್ಥಿತಿ ಕಷ್ಟದಲ್ಲಿದ್ದರಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಸಿ ತಂದೆಯ ಕೆಲಸದಲ್ಲಿ ಸಹಾಯ ಮಾಡಲು ಆರಂಭಿಸಿದ್ದರು.

ಆದರೆ ಕಲಿಯುವ ಆಸಕ್ತಿ ಕಳೆದುಕೊಳ್ಳದ ಅವರು ರಾಜಸ್ಥಾನ ವಿಶ್ವನಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ, ಇತಿಹಾಸ ಮತ್ತು ಹಿಂದಿ ವಿಷಯಗಳಲ್ಲಿ ಕರೆಸ್ಪಾಂಡಿಂಗ್ನಲ್ಲಿ ಬಿಎ ಪದವಿ ಪಡೆದರು. ನಂತರ ತನ್ನ ಹೆಂಡತಿ ಮತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ದೆಹಲಿಗೆ ಬಂದು ಒಂದು ಚಿಕ್ಕ ಮನೆಯಲ್ಲಿ ವಾಸಿಸುತ್ತಿರುವ ರಂಜಾಲ್, ತನ್ನ ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಜೆಎನ್‌ಯುನಲ್ಲಿ ಸೆಕ್ಯೂರಿಟಿಯಾಗಿ ಕೆಸಲಕ್ಕೆ ಸೇರಿದರು. ಈ ಕಾರಣದಿಂದಾಗಿ ದಿನನಿತ್ಯ ಕಾಲೇಜಿಗೆ ಹೋಗಿ ಅಭ್ಯಾಸ ಮಾಡುವ ಅವಕಾಶ ಅವರಿಗೆ ಇರಲಿಲ್ಲ. ಆದರೆ ಜೆಎನ್‌ಯುವಿನ ಶೈಕ್ಷಣಿಕ ವಾತಾವರಣವನ್ನು ನೋಡಿದ ಮೇಲೆ ಅವರ ವಿದ್ಯಾಭ್ಯಾಸದ ಕನಸು ಮರುಕಳಿಸಿ, ಓದಿನ ಮೇಲಿನ ಆಸಕ್ತಿ ತೆರೆದುಕೊಂಡಿದೆ. ಓದಿನ ಮೇಲಿನ ಪ್ರೀತಿಯಿಂದ ಕೆಲಸದ ನಂತರ ಬಿಡುವಿನ ಸಮಯದಲ್ಲಿ ಪ್ರವೇಶ ಪರೀಕ್ಷೆ ತಯಾರಿ ನಡೆಸಲು ಆರಂಭಿಸಿದರು.

ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಮೀನಾ ಕುಟುಂಬದಲ್ಲಿ ಅವರೊಬ್ಬರೇ ದುಡಿಯುತ್ತಿದ್ದು, ತಿಂಗಳಿಗೆ 15,000 ಸಂಪಾದಿಸುತ್ತಿದ್ದಾರೆ. ಈ ಹಣದಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಗಿದ್ದು, ದಿನಪತ್ರಿಕೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಇವರು ತಮ್ಮ ಮೊಬೈಲ್ ಫೋನ್ ಮೂಲಕವೇ ಪತ್ರಿಕೆಗಳ ಸುದ್ದಿಗಳನ್ನು ಓದುವುದು ಮತ್ತು ವಿದ್ಯಾರ್ಥಿಗಳಿಂದ ಪಿಡಿಎಫ್ ನೋಟ್ಸ್ ಗಳನ್ನು ಪಡೆದುಕೊಂಡು ಅಭ್ಯಾಸ ಮಾಡಿದ್ದಾರೆ.

ವಿದೇಶಿ ಭಾಷೆಗಳನ್ನು ಕಲಿಯುವವರು ವಿದೇಶಗಳಿಗೆ ಭೇಟಿಕೊಡುತ್ತಾರೆಂದು ಕೇಳಿದ್ದ ರಂಜಾಲ್ ಮೀನಾ ವಿದೇಶಿ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡರು ಹಾಗೂ ನಾಗರೀಕ ಸೇವೆಗಳಿಗೆ ಸೇರಬೇಕೆಂಬ ಇಚ್ಛೆಯಿಂದ ಅದರಲ್ಲಿಯೂ ತಮ್ಮ ಅದೃಷ್ಡ ಪರೀಕ್ಷಿಸಲು ಬಯಸಿದ್ದರು. ಆದರೆ ಜೆಎನ್‌ಯು ವಿಶ್ವನಿದ್ಯಾನಿಲಯದಲ್ಲಿ ಉದ್ಯೋಗ ಮಾಡಿಕೊಂಡು ನಿಯಮಿತ ಶಿಕ್ಷಣವನ್ನು ದಿನನಿತ್ಯ ಪಡೆಯಲು ಸಾಧ್ಯವಿಲ್ಲ ಎಂಬ ನಿಯಮವಿದೆ. ಹಾಗಾಗಿ ಈಗ ರಾತ್ರಿ ವೇಳೆಯ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಇವರ ಶ್ರಮ ಮತ್ತು ಸಾಧನೆಯನ್ನು ನೋಡಿದ ಭದ್ರತಾ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ‘ನಮಗೆ ಆತನ ಬಗ್ಗೆ ಹೆಮ್ಮೆ ಇದೆ. ಆದರೆ ರಾತ್ರಿ ವೇಳೆ ಕೆಲಸ ಮಾಡಿ ದಿನನಿತ್ಯ ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತದೆ. ಎಷ್ಟು ಸಾಧ್ಯವೋ ಅಷ್ಟು ಆತನಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಜೆಎನ್‌ಯು ಎಂದರೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿರುವ ವಿಶ್ವವಿದ್ಯಾನಿಲಯ. ಇಲ್ಲಿ ಯಾರೂ ಜಾತಿ ಮತ್ತು ಸಾಮಾಜಿಕ ಶ್ರೇಣಿ ವ್ಯವಸ್ಥೆಗೆ ಆಸ್ಪದ ನೀಡುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಮತ್ತು ಪ್ರಧ್ಯಾಪಕರು ಪ್ರೋತ್ಸಾಹ ನೀಡಿದರು. ಇವರೆಲ್ಲರ ಪ್ರೋತ್ಸಾಹದಿಂದ ನಾನು ರಾತ್ರೋರಾತ್ರಿ ಪ್ರಸಿದ್ದನಾಗಿದ್ದೇನೆ. ಆದರೆ ಇತ್ತೀಚೆಗೆ ಜೆಎನ್‌ಯು ಬಗ್ಗೆ ತಪ್ಪು ಕಲ್ಪನೆಗಳು ಹೆಚ್ಚಾಗಿವೆ. 2016ರ ಫೆಬ್ರವರಿ ಘಟನೆಯ ನಂತರ ವಿವಿಯ ಬಗ್ಗೆ ಹಲವು ವಂದತಿಗಳು ಕೇಳಿ ಬರುತ್ತಿವೆ. ಆದರೆ ವಿದ್ಯಾರ್ಥಿಗಳು ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿಲ್ಲ. ಹಲವಾರು ವಿದ್ವಾಂಸರು ಈ ವಿವಿಯಿಂದ ಬಂದಿದ್ದಾರೆ. ನಾನೂ ಕೂಡ ಏನನ್ನಾದರು ಸಾಧಿಸುತ್ತೇನೆ ಎಂದು ಮೀನಾ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತ ಮಂಡಳಿಯಿಂದ ಮೀನಾಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಒಂದು ವಿಶಿಷ್ಟವಾದ ಪ್ರಕರಣವಾದ್ದರಿಂದ, ಏನು ಮಾಡಬಹುದೆಂದು ನಾವು ನೋಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿ ಹೇಳಿದ್ದಾರೆ

ಕೃಪೆ: ಹಿಂದೂಸ್ತಾನ್ ಟೈಮ್ಸ್

ಅನುವಾದ: ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...