HomeಚಳವಳಿJNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

JNUನಲ್ಲಿ ಸೆಕ್ಯುರಿಟಿಯಾಗಿದ್ದುಕೊಂಡು ಅಲ್ಲಿಯೇ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಪಾಸು ಮಾಡಿದ ಯುವಕನ ಸ್ಫೂರ್ತಿಯುತ ಯಶೋಗಾಥೆ.

- Advertisement -
- Advertisement -

ನಾವು ಆತ್ಮಾರ್ಥವಾಗಿ ಏನಾನ್ನಾದರು ಸಾಧಿಸಬೇಕೆಂದು ಬಯಸಿದರೆ ಇಡೀ ಬ್ರಹ್ಮಾಂಡವೇ ಸಂಚುಹೂಡಿ ನಮ್ಮ ಜೊತೆ ನಿಲ್ಲುತ್ತದೆ’ ಎಂಬ ಮಾತಿದೆ. ಅಂತೆಯೇ ಛಲಬಿಡದೆ ಸಾಧಿಸುವ ಹಾದಿಯಲ್ಲಿ ಮುನ್ನೆಡೆಯುವವರಿಗೆ ಯಶಸ್ಸು ಸಿಕ್ಕೇ ಸಿಗುತ್ತದೆ. ಅಂತಹದ್ದೇ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಯುವಕ 34ರ ಹರೆಯದ ರಂಜಾಲ್ ಮೀನಾ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ (ಜೆಎನ್‌ಯು) ಭದ್ರತಾ ಸಿಬ್ಬಂದಿಯಾಗಿ 2014ರಲ್ಲಿ ಸೇರಿದ ರಂಜಾಲ್ ಮೀನಾ ಅವರಿಗೆ ಅದೇ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಯಾಗಿ ದಾಖಲಾಗುತ್ತೇನೆಂದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಆದರೆ ಊಹೆಗೂ ಮೀರಿ ಸಾಧನೆ ಮಾಡಿರುವ ಇವರು ತಮ್ಮ ಕುಟುಂಬದಲ್ಲಿ ಕಲಿಯುತ್ತಿರುವ ಮೊದಲ ಪೀಳಿಗೆಯವರಾಗಿದ್ದಾರೆ. ರಾಜಸ್ಥಾನದ ಕರೌಲಿ ಎಂಬ ಗ್ರಾಮೀಣ ಪ್ರದೇಶದಿಂದ ಬಂದಿರುವ ರಂಜಾಲ್ ಜೆಎನ್‌ಯುವಿನ ಬಿಎ ರಷ್ಯನ್ ಪ್ರವೇಶ ಪರೀಕ್ಷೆಯನ್ನು ಭೇದಿಸಿ ಪಾಸುಮಾಡಿದ್ದಾರೆ.

ಮೀನಾ ದಿನಗೂಲಿ ಕೆಲಸಗಾರನ ಮಗನಾಗಿದ್ದು, ತನ್ನ ಹಳ್ಳಿ ಭಜೇರಾದ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯ ವಿದ್ಯಾಭ್ಯಾಸ ಮುಗಿದ ನಂತರ ಕಾಲೇಜು ವಿದ್ಯಾಭ್ಯಾಸಕ್ಕೆ ತಮ್ಮ ಹಳ್ಳಿಯಿಂದ 25 ರಿಂದ 30km ದೂರ ಹೋಗಬೇಕಾದ ಕಾರಣದಿಂದ ಹಾಗೂ ಕುಟುಂಬದ ಪರಿಸ್ಥಿತಿ ಕಷ್ಟದಲ್ಲಿದ್ದರಿಂದ ವಿದ್ಯಾಭ್ಯಾಸವನ್ನು ಮೊಟಕುಗೊಳಸಿ ತಂದೆಯ ಕೆಲಸದಲ್ಲಿ ಸಹಾಯ ಮಾಡಲು ಆರಂಭಿಸಿದ್ದರು.

ಆದರೆ ಕಲಿಯುವ ಆಸಕ್ತಿ ಕಳೆದುಕೊಳ್ಳದ ಅವರು ರಾಜಸ್ಥಾನ ವಿಶ್ವನಿದ್ಯಾನಿಲಯದಲ್ಲಿ ರಾಜ್ಯಶಾಸ್ತ್ರ, ಇತಿಹಾಸ ಮತ್ತು ಹಿಂದಿ ವಿಷಯಗಳಲ್ಲಿ ಕರೆಸ್ಪಾಂಡಿಂಗ್ನಲ್ಲಿ ಬಿಎ ಪದವಿ ಪಡೆದರು. ನಂತರ ತನ್ನ ಹೆಂಡತಿ ಮತ್ತು ಮೂವರು ಹೆಣ್ಣು ಮಕ್ಕಳೊಂದಿಗೆ ದೆಹಲಿಗೆ ಬಂದು ಒಂದು ಚಿಕ್ಕ ಮನೆಯಲ್ಲಿ ವಾಸಿಸುತ್ತಿರುವ ರಂಜಾಲ್, ತನ್ನ ಕುಟುಂಬದ ಆರ್ಥಿಕ ನಿರ್ವಹಣೆಗಾಗಿ ಜೆಎನ್‌ಯುನಲ್ಲಿ ಸೆಕ್ಯೂರಿಟಿಯಾಗಿ ಕೆಸಲಕ್ಕೆ ಸೇರಿದರು. ಈ ಕಾರಣದಿಂದಾಗಿ ದಿನನಿತ್ಯ ಕಾಲೇಜಿಗೆ ಹೋಗಿ ಅಭ್ಯಾಸ ಮಾಡುವ ಅವಕಾಶ ಅವರಿಗೆ ಇರಲಿಲ್ಲ. ಆದರೆ ಜೆಎನ್‌ಯುವಿನ ಶೈಕ್ಷಣಿಕ ವಾತಾವರಣವನ್ನು ನೋಡಿದ ಮೇಲೆ ಅವರ ವಿದ್ಯಾಭ್ಯಾಸದ ಕನಸು ಮರುಕಳಿಸಿ, ಓದಿನ ಮೇಲಿನ ಆಸಕ್ತಿ ತೆರೆದುಕೊಂಡಿದೆ. ಓದಿನ ಮೇಲಿನ ಪ್ರೀತಿಯಿಂದ ಕೆಲಸದ ನಂತರ ಬಿಡುವಿನ ಸಮಯದಲ್ಲಿ ಪ್ರವೇಶ ಪರೀಕ್ಷೆ ತಯಾರಿ ನಡೆಸಲು ಆರಂಭಿಸಿದರು.

ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿರುವ ಮೀನಾ ಕುಟುಂಬದಲ್ಲಿ ಅವರೊಬ್ಬರೇ ದುಡಿಯುತ್ತಿದ್ದು, ತಿಂಗಳಿಗೆ 15,000 ಸಂಪಾದಿಸುತ್ತಿದ್ದಾರೆ. ಈ ಹಣದಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಗಿದ್ದು, ದಿನಪತ್ರಿಕೆಗಳನ್ನು ಕೊಂಡುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದ ಇವರು ತಮ್ಮ ಮೊಬೈಲ್ ಫೋನ್ ಮೂಲಕವೇ ಪತ್ರಿಕೆಗಳ ಸುದ್ದಿಗಳನ್ನು ಓದುವುದು ಮತ್ತು ವಿದ್ಯಾರ್ಥಿಗಳಿಂದ ಪಿಡಿಎಫ್ ನೋಟ್ಸ್ ಗಳನ್ನು ಪಡೆದುಕೊಂಡು ಅಭ್ಯಾಸ ಮಾಡಿದ್ದಾರೆ.

ವಿದೇಶಿ ಭಾಷೆಗಳನ್ನು ಕಲಿಯುವವರು ವಿದೇಶಗಳಿಗೆ ಭೇಟಿಕೊಡುತ್ತಾರೆಂದು ಕೇಳಿದ್ದ ರಂಜಾಲ್ ಮೀನಾ ವಿದೇಶಿ ಭಾಷೆಯನ್ನು ಕಲಿಯಲು ಆಯ್ಕೆ ಮಾಡಿಕೊಂಡರು ಹಾಗೂ ನಾಗರೀಕ ಸೇವೆಗಳಿಗೆ ಸೇರಬೇಕೆಂಬ ಇಚ್ಛೆಯಿಂದ ಅದರಲ್ಲಿಯೂ ತಮ್ಮ ಅದೃಷ್ಡ ಪರೀಕ್ಷಿಸಲು ಬಯಸಿದ್ದರು. ಆದರೆ ಜೆಎನ್‌ಯು ವಿಶ್ವನಿದ್ಯಾನಿಲಯದಲ್ಲಿ ಉದ್ಯೋಗ ಮಾಡಿಕೊಂಡು ನಿಯಮಿತ ಶಿಕ್ಷಣವನ್ನು ದಿನನಿತ್ಯ ಪಡೆಯಲು ಸಾಧ್ಯವಿಲ್ಲ ಎಂಬ ನಿಯಮವಿದೆ. ಹಾಗಾಗಿ ಈಗ ರಾತ್ರಿ ವೇಳೆಯ ಕೆಲಸಕ್ಕಾಗಿ ಪ್ರಯತ್ನಿಸುತ್ತಿದ್ದಾರೆ.

ಇವರ ಶ್ರಮ ಮತ್ತು ಸಾಧನೆಯನ್ನು ನೋಡಿದ ಭದ್ರತಾ ವಿಭಾಗದ ಮುಖ್ಯಸ್ಥ ನವೀನ್ ಕುಮಾರ್ ‘ನಮಗೆ ಆತನ ಬಗ್ಗೆ ಹೆಮ್ಮೆ ಇದೆ. ಆದರೆ ರಾತ್ರಿ ವೇಳೆ ಕೆಲಸ ಮಾಡಿ ದಿನನಿತ್ಯ ವಿದ್ಯಾಭ್ಯಾಸ ಮಾಡಲು ಕಷ್ಟವಾಗುತ್ತದೆ. ಎಷ್ಟು ಸಾಧ್ಯವೋ ಅಷ್ಟು ಆತನಿಗೆ ಸಹಾಯ ಮಾಡಲು ಪ್ರಯತ್ನಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಜೆಎನ್‌ಯು ಎಂದರೆ ಹಲವಾರು ವಿಶೇಷತೆಗಳಿಗೆ ಹೆಸರುವಾಸಿಯಾಗಿರುವ ವಿಶ್ವವಿದ್ಯಾನಿಲಯ. ಇಲ್ಲಿ ಯಾರೂ ಜಾತಿ ಮತ್ತು ಸಾಮಾಜಿಕ ಶ್ರೇಣಿ ವ್ಯವಸ್ಥೆಗೆ ಆಸ್ಪದ ನೀಡುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಮತ್ತು ಪ್ರಧ್ಯಾಪಕರು ಪ್ರೋತ್ಸಾಹ ನೀಡಿದರು. ಇವರೆಲ್ಲರ ಪ್ರೋತ್ಸಾಹದಿಂದ ನಾನು ರಾತ್ರೋರಾತ್ರಿ ಪ್ರಸಿದ್ದನಾಗಿದ್ದೇನೆ. ಆದರೆ ಇತ್ತೀಚೆಗೆ ಜೆಎನ್‌ಯು ಬಗ್ಗೆ ತಪ್ಪು ಕಲ್ಪನೆಗಳು ಹೆಚ್ಚಾಗಿವೆ. 2016ರ ಫೆಬ್ರವರಿ ಘಟನೆಯ ನಂತರ ವಿವಿಯ ಬಗ್ಗೆ ಹಲವು ವಂದತಿಗಳು ಕೇಳಿ ಬರುತ್ತಿವೆ. ಆದರೆ ವಿದ್ಯಾರ್ಥಿಗಳು ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿಲ್ಲ. ಹಲವಾರು ವಿದ್ವಾಂಸರು ಈ ವಿವಿಯಿಂದ ಬಂದಿದ್ದಾರೆ. ನಾನೂ ಕೂಡ ಏನನ್ನಾದರು ಸಾಧಿಸುತ್ತೇನೆ ಎಂದು ಮೀನಾ ಅಭಿಪ್ರಾಯಪಟ್ಟಿದ್ದಾರೆ.

ಆಡಳಿತ ಮಂಡಳಿಯಿಂದ ಮೀನಾಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ಒಂದು ವಿಶಿಷ್ಟವಾದ ಪ್ರಕರಣವಾದ್ದರಿಂದ, ಏನು ಮಾಡಬಹುದೆಂದು ನಾವು ನೋಡಬೇಕಾಗಿದೆ” ಎಂದು ಹೆಸರು ಹೇಳಲು ಇಚ್ಚಿಸದ ಅಧಿಕಾರಿ ಹೇಳಿದ್ದಾರೆ

ಕೃಪೆ: ಹಿಂದೂಸ್ತಾನ್ ಟೈಮ್ಸ್

ಅನುವಾದ: ಸೋಮಶೇಖರ್ ಚಲ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...