Homeಕರ್ನಾಟಕಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಅಗಾಗ ಒಳ್ಳೆಯ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಹಾಗೂ ಕ್ಯಾಂಪಸ್ ಡೆಮಾಕ್ರಸಿಯನ್ನು ಇನ್ನೂ ಉಳಿಸಿಕೊಂಡಿರುವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ಇದೀಗ ನೆಟ್ಟಿಗರು ಅವರನ್ನು ತರಾಟೆಗೆ ಪಡೆದಿದ್ದಾರೆ.

1966 ರ ವಿಶೇಷ ಕಾಯ್ದೆಯ ಪ್ರಕಾರ ಹಿಂದುಳಿದ ಪ್ರದೇಶದ ಮತ್ತು ವರ್ಗದ ಮಕ್ಕಳು ದೇಶದ ರಾಜಧಾನಿಯಲ್ಲಿದ್ದು ಅಧ್ಯಯನ ಮಾಡಬೇಕು ಎಂಬ ಉದ್ದೇಶದಿಂದ ಜವಾಹರಲಾಲ್ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಲಾಗಿತ್ತು. ಆರಂಭದಿಂದಲೇ ಜೆಎನ್‌‌ಯು ಪ್ರಭುತ್ವವನ್ನು ಪ್ರಶ್ನಿಸುತ್ತಲೆ ಬಂದಿರುವ ವಿಶ್ವವಿದ್ಯಾನಿಯಲವಾಗಿದ್ದು ದೇಶಕ್ಕೆ ಹಲವಾರು ಧೀಮಂತ ನಾಯಕರನ್ನು ನೀಡಿದೆ. ಅದರಂತೆ ಸಹಜವಾಗಿಯೆ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೂಡಾ ಈ ಬಾರಿ ಮಗ್ಗುಲ ಮುಳ್ಳಾಗಿ ಕಾಡಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಬೆಂಬಲಿತರಿಂದ ಅಲ್ಲಿ ಹಲವಾರು ದಾಳಿಗಳಾಗಿದೆ ಎಂದು ಹಲವಾರು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ಇದೀಗ ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಜೆಎನ್‌ಯು ಹೆಸರನ್ನು ಬದಲಾಯಿಸಬೇಕು ಎಂದು ವಿವಾದ ಮೈಗೆಳೆದಿದ್ದು ಟ್ವೀಟ್ಟರ್‌ನಲ್ಲಿ, “ಸ್ವಾಮಿ ವಿವೇಕಾನಂದರು ಭಾರತ ಎಂಬ ಪರಿಕಲ್ಷನೆಯ ಪರವಾಗಿ ನಿಂತರು. ಅವರ ತತ್ವಶಾಸ್ತ್ರ ಮತ್ತು ಮೌಲ್ಯಾದರ್ಶಗಳೇ ಭಾರತದ ಬಲ ಮತ್ತು ಶಕ್ತಿಯಾಗಿದೆ. ಜೆಎನ್‌ಯು ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ. ರಾಷ್ಟ್ರಪ್ರೇಮಿ ಸಂತನ ಜೀವನ ತಲೆಮಾರುಗಳ ತನಕ ಪ್ರೇರಣೆ ಆಗಲಿ” ಎಂದು ಬರೆದಿದ್ದಾರೆ.

ಆದರೆ ಅವರ ಟ್ವೀಟ್‌‌ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ಎಂಬವರು, “ನಿಮಗೆ ಸ್ವಂತಿಕೆ ಎನ್ನೋದು ಇಲ್ವಾ. ಇನ್ನೊಬ್ಬರ ಕೆಲಸವನ್ನು ತಿರುಚುವ ಪ್ರಯತ್ನ ಯಾಕೆ, ಈವಾಗ ನೀವು ಬದಲಾಯಿಸಿದರೆ ಮುಂದೆ ಅವರು ಅಧಿಕಾರಕ್ಕೆ ಬಂದಾಗ ಅವರು ಅದೇ ಮಾಡುತ್ತಾರೆ. ಹೊಸದಾಗಿ ಯೂನಿವರ್ಸಿಟಿ ಕಟ್ಟಿ ಅದಕ್ಕೆ ಹೆಸರಿಡಿ, ಸುಮ್ಮನೆ ಯಾವಾಗಲೂ ಬೆಂಕಿ ಹಚ್ಚುವ ಹೇಳಿಕೆ ಹಾಗೂ ಕೆಲಸಗಳು ಯಾಕೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಸಂಘ ಪರಿವಾರ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ

ಸೂರ್ಯ ಎಂಬವರು, “ಸಾರ್ ಹಾಗೆ ನಿಮ್ಮ ಹೆಸರನ್ನು, ನಿಮ್ಮ ಪಾರ್ಟಿ ಹೆಸರನ್ನು ಬದಲಾಯಿಸಿ ಕೊಂಡು ಬಿಡಿ. ನಮಗೆ ಇನ್ನೂ ಖುಷಿ ಆಗುತ್ತದೆ. ಆನಂತರ ಅಗಾಗ ಒಳ್ಳೆ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ” ಎಂದು ವ್ಯಂಗ್ಯವಾಡಿದ್ದಾರೆ.

ನವೀನ್ ಎಂಬವರು, “ಜವಾಹರ ಲಾಲ್ ನೆಹರು ಸಹ ದೇಶ ಕಟ್ಟಿದ್ದಾರೆ ದೇಶಕ್ಕಾಗಿ ದುಡಿದಿದ್ದಾರೆ. ಯಾಕೆ ಅವರ ಹೆಸರು ಹೇಳದೆ ನಿಮ್ಮಿಂದ ರಾಜಕಿಯ ಮಾಡಕ್ಕೆ ಯೋಗ್ಯತೆಯಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಸಂತೋಷ್ ಕುಮಾರ್‌, “ಬರಿ ಹೆಸರು ಬದಲಾಯಿಸುವುದಲ್ಲೇ ನಿಮ್ಮ ಜೀವನ ಕಳೆದು ಹೋಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...