Homeಕರ್ನಾಟಕಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಅಗಾಗ ಒಳ್ಳೆಯ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಹಾಗೂ ಕ್ಯಾಂಪಸ್ ಡೆಮಾಕ್ರಸಿಯನ್ನು ಇನ್ನೂ ಉಳಿಸಿಕೊಂಡಿರುವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ಇದೀಗ ನೆಟ್ಟಿಗರು ಅವರನ್ನು ತರಾಟೆಗೆ ಪಡೆದಿದ್ದಾರೆ.

1966 ರ ವಿಶೇಷ ಕಾಯ್ದೆಯ ಪ್ರಕಾರ ಹಿಂದುಳಿದ ಪ್ರದೇಶದ ಮತ್ತು ವರ್ಗದ ಮಕ್ಕಳು ದೇಶದ ರಾಜಧಾನಿಯಲ್ಲಿದ್ದು ಅಧ್ಯಯನ ಮಾಡಬೇಕು ಎಂಬ ಉದ್ದೇಶದಿಂದ ಜವಾಹರಲಾಲ್ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಲಾಗಿತ್ತು. ಆರಂಭದಿಂದಲೇ ಜೆಎನ್‌‌ಯು ಪ್ರಭುತ್ವವನ್ನು ಪ್ರಶ್ನಿಸುತ್ತಲೆ ಬಂದಿರುವ ವಿಶ್ವವಿದ್ಯಾನಿಯಲವಾಗಿದ್ದು ದೇಶಕ್ಕೆ ಹಲವಾರು ಧೀಮಂತ ನಾಯಕರನ್ನು ನೀಡಿದೆ. ಅದರಂತೆ ಸಹಜವಾಗಿಯೆ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೂಡಾ ಈ ಬಾರಿ ಮಗ್ಗುಲ ಮುಳ್ಳಾಗಿ ಕಾಡಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಬೆಂಬಲಿತರಿಂದ ಅಲ್ಲಿ ಹಲವಾರು ದಾಳಿಗಳಾಗಿದೆ ಎಂದು ಹಲವಾರು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ಇದೀಗ ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಜೆಎನ್‌ಯು ಹೆಸರನ್ನು ಬದಲಾಯಿಸಬೇಕು ಎಂದು ವಿವಾದ ಮೈಗೆಳೆದಿದ್ದು ಟ್ವೀಟ್ಟರ್‌ನಲ್ಲಿ, “ಸ್ವಾಮಿ ವಿವೇಕಾನಂದರು ಭಾರತ ಎಂಬ ಪರಿಕಲ್ಷನೆಯ ಪರವಾಗಿ ನಿಂತರು. ಅವರ ತತ್ವಶಾಸ್ತ್ರ ಮತ್ತು ಮೌಲ್ಯಾದರ್ಶಗಳೇ ಭಾರತದ ಬಲ ಮತ್ತು ಶಕ್ತಿಯಾಗಿದೆ. ಜೆಎನ್‌ಯು ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ. ರಾಷ್ಟ್ರಪ್ರೇಮಿ ಸಂತನ ಜೀವನ ತಲೆಮಾರುಗಳ ತನಕ ಪ್ರೇರಣೆ ಆಗಲಿ” ಎಂದು ಬರೆದಿದ್ದಾರೆ.

ಆದರೆ ಅವರ ಟ್ವೀಟ್‌‌ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ಎಂಬವರು, “ನಿಮಗೆ ಸ್ವಂತಿಕೆ ಎನ್ನೋದು ಇಲ್ವಾ. ಇನ್ನೊಬ್ಬರ ಕೆಲಸವನ್ನು ತಿರುಚುವ ಪ್ರಯತ್ನ ಯಾಕೆ, ಈವಾಗ ನೀವು ಬದಲಾಯಿಸಿದರೆ ಮುಂದೆ ಅವರು ಅಧಿಕಾರಕ್ಕೆ ಬಂದಾಗ ಅವರು ಅದೇ ಮಾಡುತ್ತಾರೆ. ಹೊಸದಾಗಿ ಯೂನಿವರ್ಸಿಟಿ ಕಟ್ಟಿ ಅದಕ್ಕೆ ಹೆಸರಿಡಿ, ಸುಮ್ಮನೆ ಯಾವಾಗಲೂ ಬೆಂಕಿ ಹಚ್ಚುವ ಹೇಳಿಕೆ ಹಾಗೂ ಕೆಲಸಗಳು ಯಾಕೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಸಂಘ ಪರಿವಾರ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ

ಸೂರ್ಯ ಎಂಬವರು, “ಸಾರ್ ಹಾಗೆ ನಿಮ್ಮ ಹೆಸರನ್ನು, ನಿಮ್ಮ ಪಾರ್ಟಿ ಹೆಸರನ್ನು ಬದಲಾಯಿಸಿ ಕೊಂಡು ಬಿಡಿ. ನಮಗೆ ಇನ್ನೂ ಖುಷಿ ಆಗುತ್ತದೆ. ಆನಂತರ ಅಗಾಗ ಒಳ್ಳೆ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ” ಎಂದು ವ್ಯಂಗ್ಯವಾಡಿದ್ದಾರೆ.

ನವೀನ್ ಎಂಬವರು, “ಜವಾಹರ ಲಾಲ್ ನೆಹರು ಸಹ ದೇಶ ಕಟ್ಟಿದ್ದಾರೆ ದೇಶಕ್ಕಾಗಿ ದುಡಿದಿದ್ದಾರೆ. ಯಾಕೆ ಅವರ ಹೆಸರು ಹೇಳದೆ ನಿಮ್ಮಿಂದ ರಾಜಕಿಯ ಮಾಡಕ್ಕೆ ಯೋಗ್ಯತೆಯಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಸಂತೋಷ್ ಕುಮಾರ್‌, “ಬರಿ ಹೆಸರು ಬದಲಾಯಿಸುವುದಲ್ಲೇ ನಿಮ್ಮ ಜೀವನ ಕಳೆದು ಹೋಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...