Homeಕರ್ನಾಟಕಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಜೆಎನ್‌ಯು ಮರುನಾಮಕರಣವಾಗಲಿ ಎಂದ ಸಿ.ಟಿ. ರವಿಯನ್ನು ತರಾಟೆಗೆ ಪಡೆದ ನೆಟ್ಟಿಗರು!

ಅಗಾಗ ಒಳ್ಳೆಯ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

- Advertisement -
- Advertisement -

ದೇಶದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ ಹಾಗೂ ಕ್ಯಾಂಪಸ್ ಡೆಮಾಕ್ರಸಿಯನ್ನು ಇನ್ನೂ ಉಳಿಸಿಕೊಂಡಿರುವ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ (ಜೆಎನ್‌ಯು) ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದು, ಇದೀಗ ನೆಟ್ಟಿಗರು ಅವರನ್ನು ತರಾಟೆಗೆ ಪಡೆದಿದ್ದಾರೆ.

1966 ರ ವಿಶೇಷ ಕಾಯ್ದೆಯ ಪ್ರಕಾರ ಹಿಂದುಳಿದ ಪ್ರದೇಶದ ಮತ್ತು ವರ್ಗದ ಮಕ್ಕಳು ದೇಶದ ರಾಜಧಾನಿಯಲ್ಲಿದ್ದು ಅಧ್ಯಯನ ಮಾಡಬೇಕು ಎಂಬ ಉದ್ದೇಶದಿಂದ ಜವಾಹರಲಾಲ್ ವಿಶ್ವವಿದ್ಯಾನಿಲಯವನ್ನು ಪ್ರಾರಂಭಿಸಲಾಗಿತ್ತು. ಆರಂಭದಿಂದಲೇ ಜೆಎನ್‌‌ಯು ಪ್ರಭುತ್ವವನ್ನು ಪ್ರಶ್ನಿಸುತ್ತಲೆ ಬಂದಿರುವ ವಿಶ್ವವಿದ್ಯಾನಿಯಲವಾಗಿದ್ದು ದೇಶಕ್ಕೆ ಹಲವಾರು ಧೀಮಂತ ನಾಯಕರನ್ನು ನೀಡಿದೆ. ಅದರಂತೆ ಸಹಜವಾಗಿಯೆ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೂಡಾ ಈ ಬಾರಿ ಮಗ್ಗುಲ ಮುಳ್ಳಾಗಿ ಕಾಡಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಬೆಂಬಲಿತರಿಂದ ಅಲ್ಲಿ ಹಲವಾರು ದಾಳಿಗಳಾಗಿದೆ ಎಂದು ಹಲವಾರು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಒಲ್ಲದ ಮನಸ್ಸಿನಿಂದ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ಸಿ.ಟಿ.ರವಿ?

ಇದೀಗ ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಜೆಎನ್‌ಯು ಹೆಸರನ್ನು ಬದಲಾಯಿಸಬೇಕು ಎಂದು ವಿವಾದ ಮೈಗೆಳೆದಿದ್ದು ಟ್ವೀಟ್ಟರ್‌ನಲ್ಲಿ, “ಸ್ವಾಮಿ ವಿವೇಕಾನಂದರು ಭಾರತ ಎಂಬ ಪರಿಕಲ್ಷನೆಯ ಪರವಾಗಿ ನಿಂತರು. ಅವರ ತತ್ವಶಾಸ್ತ್ರ ಮತ್ತು ಮೌಲ್ಯಾದರ್ಶಗಳೇ ಭಾರತದ ಬಲ ಮತ್ತು ಶಕ್ತಿಯಾಗಿದೆ. ಜೆಎನ್‌ಯು ಹೆಸರನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಯಲ ಎಂದು ಬದಲಿಸುವುದೆ ಸರಿಯಾಗಿದೆ. ರಾಷ್ಟ್ರಪ್ರೇಮಿ ಸಂತನ ಜೀವನ ತಲೆಮಾರುಗಳ ತನಕ ಪ್ರೇರಣೆ ಆಗಲಿ” ಎಂದು ಬರೆದಿದ್ದಾರೆ.

ಆದರೆ ಅವರ ಟ್ವೀಟ್‌‌ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಜಯ್ ಎಂಬವರು, “ನಿಮಗೆ ಸ್ವಂತಿಕೆ ಎನ್ನೋದು ಇಲ್ವಾ. ಇನ್ನೊಬ್ಬರ ಕೆಲಸವನ್ನು ತಿರುಚುವ ಪ್ರಯತ್ನ ಯಾಕೆ, ಈವಾಗ ನೀವು ಬದಲಾಯಿಸಿದರೆ ಮುಂದೆ ಅವರು ಅಧಿಕಾರಕ್ಕೆ ಬಂದಾಗ ಅವರು ಅದೇ ಮಾಡುತ್ತಾರೆ. ಹೊಸದಾಗಿ ಯೂನಿವರ್ಸಿಟಿ ಕಟ್ಟಿ ಅದಕ್ಕೆ ಹೆಸರಿಡಿ, ಸುಮ್ಮನೆ ಯಾವಾಗಲೂ ಬೆಂಕಿ ಹಚ್ಚುವ ಹೇಳಿಕೆ ಹಾಗೂ ಕೆಲಸಗಳು ಯಾಕೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರ ವಿರುದ್ಧ ಪೋಸ್ಟ್‌ ಹಾಕಿದ ಸಂಘ ಪರಿವಾರ ಕಾರ್ಯಕರ್ತನ ಬಂಧನ: ಆರೋಪಿ ಪರ ನಿಂತ ಸಚಿವ ಸಿ.ಟಿ ರವಿ

ಸೂರ್ಯ ಎಂಬವರು, “ಸಾರ್ ಹಾಗೆ ನಿಮ್ಮ ಹೆಸರನ್ನು, ನಿಮ್ಮ ಪಾರ್ಟಿ ಹೆಸರನ್ನು ಬದಲಾಯಿಸಿ ಕೊಂಡು ಬಿಡಿ. ನಮಗೆ ಇನ್ನೂ ಖುಷಿ ಆಗುತ್ತದೆ. ಆನಂತರ ಅಗಾಗ ಒಳ್ಳೆ ಕಾಮಿಡಿ ಮಾಡುತ್ತೀರಿ, ಹೀಗೆ ನಿಮ್ಮ ಕಾಮಿಡಿ ಮುಂದುವರೆಸಿ, ಇನ್ನಷ್ಟು ಮನರಂಜನೆ ಕೊಡಿ” ಎಂದು ವ್ಯಂಗ್ಯವಾಡಿದ್ದಾರೆ.

ನವೀನ್ ಎಂಬವರು, “ಜವಾಹರ ಲಾಲ್ ನೆಹರು ಸಹ ದೇಶ ಕಟ್ಟಿದ್ದಾರೆ ದೇಶಕ್ಕಾಗಿ ದುಡಿದಿದ್ದಾರೆ. ಯಾಕೆ ಅವರ ಹೆಸರು ಹೇಳದೆ ನಿಮ್ಮಿಂದ ರಾಜಕಿಯ ಮಾಡಕ್ಕೆ ಯೋಗ್ಯತೆಯಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಸಂತೋಷ್ ಕುಮಾರ್‌, “ಬರಿ ಹೆಸರು ಬದಲಾಯಿಸುವುದಲ್ಲೇ ನಿಮ್ಮ ಜೀವನ ಕಳೆದು ಹೋಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಟ್ವಿಟ್ಟರ್‌ನಲ್ಲಿ ಭೀಫ್‌ ಖಾದ್ಯದ ಫೋಟೊ ಷೇರ್‌ ಮಾಡಿದ ಸಚಿವ ಸಿ.ಟಿ ರವಿ ; ನೆಟ್ಟಿಗರಿಂದ ಫುಲ್‌ ಟ್ರೋಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...