Homeಚಳವಳಿಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ...

ಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆಯಾಗಿ ಮೂರು ವರ್ಷಗಳ ನಂತರವೂ, ಆತನ ತಾಯಿ ಫಾತಿಮಾ ನಫೀಸ್ ತನ್ನ ಮಗನ ಹುಡುಕಾಟವನ್ನು ಮುಂದುವರೆಸಿದ್ದಾರೆ. ಪತ್ರಿಭಟನೆಯ ಅಂಗವಾಗಿ ತನ್ನ ಮಗ ಕಳೆದುಹೋದ ದಿನವಾದ ಅಕ್ಟೋಬರ್ 15 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬುಲಂದ್‌ಶಹರ್‌ನಲ್ಲಿ ಜನಸಮೂಹದಿಂದ ಕೊಲ್ಲಲ್ಪಟ್ಟ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ರಜನಿ ಸಿಂಗ್ ಸಹ ಹೆಜ್ಜೆ ಹಾಕಲಿದ್ದಾರೆ.

ನಾಗರಿಕ ಹಕ್ಕುಗಳ ಸಂಘಟನೆಯಾದ ಯುನೈಟೆಡ್ ಎಗೇನ್ಸ್ಟ್ ಹೇಟ್ (ಯುಎಹೆಚ್) ನ ಕಾರ್ಯಕರ್ತ ನದೀಮ್ ಖಾನ್ ಮಾತನಾಡಿ ಈ ವರ್ಷದ ಜೂನ್‌ನಲ್ಲಿ ಜಾರ್ಖಂಡ್‌ನಲ್ಲಿ ಹತ್ಯೆಗೀಡಾದ ತಬ್ರೆಜ್ ಅನ್ಸಾರಿ ಅವರ ಕುಟುಂಬ ಮತ್ತು 2017ರ ಸೆಪ್ಟೆಂಬರ್‌ನಲ್ಲಿ ಕೊಲೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಂಬಂಧಿಕರೂ ಮೆರವಣಿಗೆಯಲ್ಲಿ ಜೊತೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಜೀಬ್‌ ತಾಯಿ ಫಾತಿಮಾ ನಫೀಸ್

ನವದೆಹಲಿಯ ಪತ್ರಿಕಾ ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಜೀಬ್‌ ತಾಯಿ ಫಾತಿಮಾ  “ನನ್ನ ಎಲ್ಲಾ ಹಣಕಾಸಿನ ಉಳಿತಾಯಗಳು ಬರಿದಾಗಿವೆ, ಆದರೆ ನನ್ನ ಮಗ ಇನ್ನೋ ನನಗೆ ಸಿಕ್ಕಿಲ್ಲ” ಎಂದು ನೊಂದು ನುಡಿದಿದ್ದಾರೆ. ತನ್ನ ಮಗನಿಗಾಗಿ ಮೂರು ವರ್ಷದಿಂದ ಫಾತಿಮಾ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಹೈಕೋರ್ಟ್‌ನ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದಾಗ ದೆಹಲಿ ಪೊಲೀಸರಿಂದ 2017ರ ಅಕ್ಟೋಬರ್‌ನಲ್ಲಿ ಬಂಧನಕ್ಕೂ ಒಳಗಾಗಿದ್ದರು.

ತನ್ನ ಮಗನ ಪ್ರಕರಣವನ್ನು ಪೊಲೀಸರು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ, ಮೊದಲ ದಿನದಿಂದ ಪೊಲೀಸರು ನಮಗೆ ಮೋಸ ಮಾಡಿದ್ದಾರೆ ಎಂದು  ನಜೀಬ್ ಅವರ ತಾಯಿ ಫಾತಿಮಾ ಆರೋಪಿಸಿದ್ದಾರೆ.

ತಬ್ರೇಜ್ ಅನ್ಸಾರಿ ಕುಟುಂಬ

ನಜೀಬ್ ನಾಪತ್ತೆಯಾಗುವ ಒಂದು ದಿನದ ಮೊದಲು ರಾತ್ರಿ ವೇಳೆ ಅವನಿಗೂ ಮತ್ತು ಎಬಿವಿಪಿ ಸದಸ್ಯರ ನಡುವೆ ಜಗಳವಾಗಿತ್ತು. ತರುವಾಯ, ಜೆಎನ್‌ಯುವಿನ ಎ.ಪಿ.ದಿಮ್ರಿಯವರು ಎಬಿವಿಪಿ ವಿದ್ಯಾರ್ಥಿಗಳು ನಜೀಬ್‌ ಮೇಲೆ ಹಲ್ಲೆ ಮಾಡಿದ್ದನ್ನು ದೃಢಪಡಿಸಿದ್ದರು.

ಆತನನ್ನು ಒಂಬತ್ತು ಎಬಿವಿಪಿ ವಿದ್ಯಾರ್ಥಿಗಳು ಅಪಹರಿಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಆದರೆ ಅವರು ತನಿಖೆಯಲ್ಲಿ ವಿಫಲವಾದ ನಂತರ, ದೆಹಲಿ ಹೈಕೋರ್ಟ್ ಈ ಪ್ರಕರಣವನ್ನು ಮೇ 2017 ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಮಾರು ಒಂದೂವರೆ ವರ್ಷದ ನಂತರ, ಕೇಂದ್ರ ತನಿಖಾ ಸಂಸ್ಥೆ ಕೂಡ ಯಾವುದೇ ಪುರಾವೆಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಜೊತೆಗೆ ಅಕ್ಟೋಬರ್ 2018 ರಲ್ಲಿ ಪ್ರಕರಣವನ್ನು ಮುಚ್ಚುವ ವರದಿಯನ್ನು ಸಲ್ಲಿಸಿದೆ.

ಸುಭೋದ್‌ ಕುಮಾರ್‌ ಕುಟುಂಬ

“ಸಿಬಿಐನಿಂದ ಈ ಮಟ್ಟದ ಆಘಾತವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮಾನವ ಹಕ್ಕುಗಳ ಕಾನೂನು ಜಾಲದ ಸಂಸ್ಥಾಪಕ, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದ್ದಾರೆ. ಯುಎಹೆಚ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಅವರು ಹಲವು ತಿಂಗಳುಗಳ ನಂತರ ದೆಹಲಿ ಹೈಕೋರ್ಟ್‌ಗೆ ಬಂದು ಅಪರಾಧಿಗಳು ನಮಗೆ ಗೊತ್ತಿಲ್ಲ ಎಂದು ಹೇಳುವುದು ನಾಚಿಗೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕೆಂದು ಹೈಕೋರ್ಟ್ ಆದೇಶಿಸದಿರುವುದು ಹೆಚ್ಚು ದುಃಖಕರವಾಗಿದೆ” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ

ಗೌರಿ ಲಂಕೇಶ್ ಕುಟುಂಬ

ಸುದ್ದಿ ಮಾಧ್ಯಮ ಮತ್ತು ಬಿಜೆಪಿಯ ಕಪಿಲ್ ಮಿಶ್ರಾ ವಿರುದ್ಧವೂ ಪ್ರಕರಣ ದಾಖಲಿಸಲಿದೆ

ನಜೀಬ್‌ಗೆ ಐಸಿಸ್‌ನೊಂದಿಗೆ ಸಂಪರ್ಕವಿದೆ, ಅಥವಾ ಭಯೋತ್ಪಾದಕ ಸಂಘಟನೆಯಿಂದ ಪ್ರಭಾವಿತವಾಗಿದೆ ಎಂದು ಹಲವಾರು ಮಾಧ್ಯಮ ಸಂಸ್ಥೆಗಳು ಮಾರ್ಚ್ 2017 ರಲ್ಲಿ ಆರೋಪಿಸಿದ್ದವು. ಅಂತಹ ಆರೋಪಗಳನ್ನು ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟವಾಗಿ ನಿರಾಕರಿಸಿದ್ದರು. ಇದರಿಂದ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಫಾತಿಮಾರವರು ಪರಿಶೀಲನೆ ಮಾಡದೇ ಮಾಹಿತಿಯನ್ನು ವರದಿ ಮಾಡಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕ್ಷಮೆಯಾಚನೆ ಮತ್ತು ಪರಿಹಾರವನ್ನು ಕೇಳಿದ್ದಾರೆ.

ಮಾರ್ಚ್ 2019 ರಲ್ಲಿ ತಡವಾಗಿಯಾದರೂ ನಜೀಬ್ ಐಸಿಸ್‌ಗೆ ಸೇರ್ಪಡೆಗೊಂಡಿದ್ದಾನೆ ಎಂಬ ಫೇಕ್‌ ನ್ಯೂಸ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ವಾಸ್ತವವಾಗಿ, ಪೊಲೀಸರು ಇಂತಹ ಎಲ್ಲಾ ವರದಿಗಳನ್ನು ತಳ್ಳಿಹಾಕಿದರೂ, ಬಿಜೆಪಿಯ ಕಪಿಲ್ ಮಿಶ್ರಾ ಕಳೆದ ವಾರ ನಜೀಬ್ ಐಸಿಸ್ ಗೆ ಸೇರಿದ್ದಾರೆ ಎಂಬ ‘ವದಂತಿಗಳಿವೆ’ ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ದೆಹಲಿ ವಕ್ಫ್ ಮಂಡಳಿಯು ನಜೀಬ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಿದ ಪ್ರತಿಕ್ರಿಯೆಯಾಗಿ ಮಿಶ್ರಾ ಮತ್ತೆ ಕೆಟ್ಟದಾಗಿ ಟ್ವೀಟ್ ಮಾಡಿದ್ದರು.

“ನಜೀಬ್ ಐಸಿಸ್ ಸೇರಿಕೊಂಡಿದ್ದಾನೆ ಎಂದು ವದಂತಿಗಳು ಹೇಳುತ್ತವೆ.  ಆದರೂ “ಕಾಣೆಯಾದ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅವರ ಕುಟುಂಬಕ್ಕೆ ಕೇಜ್ರಿವಾಲ್ 5 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗವನ್ನು ನೀಡಿದ್ದಾರೆ.” ದೆಹಲಿಯಲ್ಲಿ ಪ್ರತಿ ವರ್ಷ 8,000 ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರು ಹಿಂದೂಗಳಾಗಿದ್ದರಿಂದ ಅವರಿಗೆ ಮಾತ್ರ ಪರಿಹಾರ ಹಣ ಸಿಗುತ್ತಿಲ್ಲ. ಅವರ ಹೆತ್ತವರು ಮಾಡಿದ ತಪ್ಪು ಏನು? ಕೇಜ್ರಿವಾಲ್ ಜಿಹಾದಿ ಮತ್ತು ನಕ್ಸಲರಿಗೆ ಮಾತ್ರ ಹಣವನ್ನು ನೀಡುತ್ತಾರೆಯೇ? ” ಎಂದು ಕಪಿಲ್‌ ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಅವರು ಶೀಘ್ರದಲ್ಲೇ ಕ್ಷಮೆಯಾಚಿಸದಿದ್ದರೆ ಫಾತಿಮಾ ಅವರು ಮಿಶ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸಿದ್ದಾರೆ.

ಸತ್ಯ ಏನೇಂದರೆ ದೆಹಲಿಯ ಅರವಿಂದ್‌ ಕೇಜ್ರಿವಾಲ್‌ರವರು ಮುಸ್ಲಿಂ ಕುಟುಂಬಗಳಿಗೆ ಮಾತ್ರವಲ್ಲದೇ ಅನಾಹುತ, ಅಪಘಾತಗಳಲ್ಲಿ ಮರಣ ಹೊಂದಿದೆ ಎಲ್ಲಾ ಧರ್ಮದ ಕುಟುಂಬಗಳಿಗೆ ಪರಿಹಾರ ಹಣ ನೀಡಿದ್ದರ ಬಗ್ಗೆ ಸಾಕ್ಷಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಆದರೂ ಬಿಜೆಪಿಯವರು ಕೇವಲ ರಾಜಕೀಯ ಮಾಡುವುದಕ್ಕಾಗಿ ಮುಸ್ಲಿಂರನ್ನು ಗುರಿಮಾಡುತ್ತಿದ್ದಾರೆ ಎಂದು ಆ ಸಂದರ್ಭದಲ್ಲಿ ಧೃವ್‌ರಾಠೀ ಸೇರಿದಂತೆ ಇತರರು ವಾದ ಮಾಡಿದ್ದರು.

ಆಧಾರ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...