Homeಚಳವಳಿಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ...

ಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆಯಾಗಿ ಮೂರು ವರ್ಷಗಳ ನಂತರವೂ, ಆತನ ತಾಯಿ ಫಾತಿಮಾ ನಫೀಸ್ ತನ್ನ ಮಗನ ಹುಡುಕಾಟವನ್ನು ಮುಂದುವರೆಸಿದ್ದಾರೆ. ಪತ್ರಿಭಟನೆಯ ಅಂಗವಾಗಿ ತನ್ನ ಮಗ ಕಳೆದುಹೋದ ದಿನವಾದ ಅಕ್ಟೋಬರ್ 15 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬುಲಂದ್‌ಶಹರ್‌ನಲ್ಲಿ ಜನಸಮೂಹದಿಂದ ಕೊಲ್ಲಲ್ಪಟ್ಟ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ರಜನಿ ಸಿಂಗ್ ಸಹ ಹೆಜ್ಜೆ ಹಾಕಲಿದ್ದಾರೆ.

ನಾಗರಿಕ ಹಕ್ಕುಗಳ ಸಂಘಟನೆಯಾದ ಯುನೈಟೆಡ್ ಎಗೇನ್ಸ್ಟ್ ಹೇಟ್ (ಯುಎಹೆಚ್) ನ ಕಾರ್ಯಕರ್ತ ನದೀಮ್ ಖಾನ್ ಮಾತನಾಡಿ ಈ ವರ್ಷದ ಜೂನ್‌ನಲ್ಲಿ ಜಾರ್ಖಂಡ್‌ನಲ್ಲಿ ಹತ್ಯೆಗೀಡಾದ ತಬ್ರೆಜ್ ಅನ್ಸಾರಿ ಅವರ ಕುಟುಂಬ ಮತ್ತು 2017ರ ಸೆಪ್ಟೆಂಬರ್‌ನಲ್ಲಿ ಕೊಲೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಂಬಂಧಿಕರೂ ಮೆರವಣಿಗೆಯಲ್ಲಿ ಜೊತೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಜೀಬ್‌ ತಾಯಿ ಫಾತಿಮಾ ನಫೀಸ್

ನವದೆಹಲಿಯ ಪತ್ರಿಕಾ ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಜೀಬ್‌ ತಾಯಿ ಫಾತಿಮಾ  “ನನ್ನ ಎಲ್ಲಾ ಹಣಕಾಸಿನ ಉಳಿತಾಯಗಳು ಬರಿದಾಗಿವೆ, ಆದರೆ ನನ್ನ ಮಗ ಇನ್ನೋ ನನಗೆ ಸಿಕ್ಕಿಲ್ಲ” ಎಂದು ನೊಂದು ನುಡಿದಿದ್ದಾರೆ. ತನ್ನ ಮಗನಿಗಾಗಿ ಮೂರು ವರ್ಷದಿಂದ ಫಾತಿಮಾ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಹೈಕೋರ್ಟ್‌ನ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದಾಗ ದೆಹಲಿ ಪೊಲೀಸರಿಂದ 2017ರ ಅಕ್ಟೋಬರ್‌ನಲ್ಲಿ ಬಂಧನಕ್ಕೂ ಒಳಗಾಗಿದ್ದರು.

ತನ್ನ ಮಗನ ಪ್ರಕರಣವನ್ನು ಪೊಲೀಸರು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ, ಮೊದಲ ದಿನದಿಂದ ಪೊಲೀಸರು ನಮಗೆ ಮೋಸ ಮಾಡಿದ್ದಾರೆ ಎಂದು  ನಜೀಬ್ ಅವರ ತಾಯಿ ಫಾತಿಮಾ ಆರೋಪಿಸಿದ್ದಾರೆ.

ತಬ್ರೇಜ್ ಅನ್ಸಾರಿ ಕುಟುಂಬ

ನಜೀಬ್ ನಾಪತ್ತೆಯಾಗುವ ಒಂದು ದಿನದ ಮೊದಲು ರಾತ್ರಿ ವೇಳೆ ಅವನಿಗೂ ಮತ್ತು ಎಬಿವಿಪಿ ಸದಸ್ಯರ ನಡುವೆ ಜಗಳವಾಗಿತ್ತು. ತರುವಾಯ, ಜೆಎನ್‌ಯುವಿನ ಎ.ಪಿ.ದಿಮ್ರಿಯವರು ಎಬಿವಿಪಿ ವಿದ್ಯಾರ್ಥಿಗಳು ನಜೀಬ್‌ ಮೇಲೆ ಹಲ್ಲೆ ಮಾಡಿದ್ದನ್ನು ದೃಢಪಡಿಸಿದ್ದರು.

ಆತನನ್ನು ಒಂಬತ್ತು ಎಬಿವಿಪಿ ವಿದ್ಯಾರ್ಥಿಗಳು ಅಪಹರಿಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಆದರೆ ಅವರು ತನಿಖೆಯಲ್ಲಿ ವಿಫಲವಾದ ನಂತರ, ದೆಹಲಿ ಹೈಕೋರ್ಟ್ ಈ ಪ್ರಕರಣವನ್ನು ಮೇ 2017 ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಮಾರು ಒಂದೂವರೆ ವರ್ಷದ ನಂತರ, ಕೇಂದ್ರ ತನಿಖಾ ಸಂಸ್ಥೆ ಕೂಡ ಯಾವುದೇ ಪುರಾವೆಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಜೊತೆಗೆ ಅಕ್ಟೋಬರ್ 2018 ರಲ್ಲಿ ಪ್ರಕರಣವನ್ನು ಮುಚ್ಚುವ ವರದಿಯನ್ನು ಸಲ್ಲಿಸಿದೆ.

ಸುಭೋದ್‌ ಕುಮಾರ್‌ ಕುಟುಂಬ

“ಸಿಬಿಐನಿಂದ ಈ ಮಟ್ಟದ ಆಘಾತವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮಾನವ ಹಕ್ಕುಗಳ ಕಾನೂನು ಜಾಲದ ಸಂಸ್ಥಾಪಕ, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದ್ದಾರೆ. ಯುಎಹೆಚ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಅವರು ಹಲವು ತಿಂಗಳುಗಳ ನಂತರ ದೆಹಲಿ ಹೈಕೋರ್ಟ್‌ಗೆ ಬಂದು ಅಪರಾಧಿಗಳು ನಮಗೆ ಗೊತ್ತಿಲ್ಲ ಎಂದು ಹೇಳುವುದು ನಾಚಿಗೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕೆಂದು ಹೈಕೋರ್ಟ್ ಆದೇಶಿಸದಿರುವುದು ಹೆಚ್ಚು ದುಃಖಕರವಾಗಿದೆ” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ

ಗೌರಿ ಲಂಕೇಶ್ ಕುಟುಂಬ

ಸುದ್ದಿ ಮಾಧ್ಯಮ ಮತ್ತು ಬಿಜೆಪಿಯ ಕಪಿಲ್ ಮಿಶ್ರಾ ವಿರುದ್ಧವೂ ಪ್ರಕರಣ ದಾಖಲಿಸಲಿದೆ

ನಜೀಬ್‌ಗೆ ಐಸಿಸ್‌ನೊಂದಿಗೆ ಸಂಪರ್ಕವಿದೆ, ಅಥವಾ ಭಯೋತ್ಪಾದಕ ಸಂಘಟನೆಯಿಂದ ಪ್ರಭಾವಿತವಾಗಿದೆ ಎಂದು ಹಲವಾರು ಮಾಧ್ಯಮ ಸಂಸ್ಥೆಗಳು ಮಾರ್ಚ್ 2017 ರಲ್ಲಿ ಆರೋಪಿಸಿದ್ದವು. ಅಂತಹ ಆರೋಪಗಳನ್ನು ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟವಾಗಿ ನಿರಾಕರಿಸಿದ್ದರು. ಇದರಿಂದ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಫಾತಿಮಾರವರು ಪರಿಶೀಲನೆ ಮಾಡದೇ ಮಾಹಿತಿಯನ್ನು ವರದಿ ಮಾಡಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕ್ಷಮೆಯಾಚನೆ ಮತ್ತು ಪರಿಹಾರವನ್ನು ಕೇಳಿದ್ದಾರೆ.

ಮಾರ್ಚ್ 2019 ರಲ್ಲಿ ತಡವಾಗಿಯಾದರೂ ನಜೀಬ್ ಐಸಿಸ್‌ಗೆ ಸೇರ್ಪಡೆಗೊಂಡಿದ್ದಾನೆ ಎಂಬ ಫೇಕ್‌ ನ್ಯೂಸ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ವಾಸ್ತವವಾಗಿ, ಪೊಲೀಸರು ಇಂತಹ ಎಲ್ಲಾ ವರದಿಗಳನ್ನು ತಳ್ಳಿಹಾಕಿದರೂ, ಬಿಜೆಪಿಯ ಕಪಿಲ್ ಮಿಶ್ರಾ ಕಳೆದ ವಾರ ನಜೀಬ್ ಐಸಿಸ್ ಗೆ ಸೇರಿದ್ದಾರೆ ಎಂಬ ‘ವದಂತಿಗಳಿವೆ’ ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ದೆಹಲಿ ವಕ್ಫ್ ಮಂಡಳಿಯು ನಜೀಬ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಿದ ಪ್ರತಿಕ್ರಿಯೆಯಾಗಿ ಮಿಶ್ರಾ ಮತ್ತೆ ಕೆಟ್ಟದಾಗಿ ಟ್ವೀಟ್ ಮಾಡಿದ್ದರು.

“ನಜೀಬ್ ಐಸಿಸ್ ಸೇರಿಕೊಂಡಿದ್ದಾನೆ ಎಂದು ವದಂತಿಗಳು ಹೇಳುತ್ತವೆ.  ಆದರೂ “ಕಾಣೆಯಾದ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅವರ ಕುಟುಂಬಕ್ಕೆ ಕೇಜ್ರಿವಾಲ್ 5 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗವನ್ನು ನೀಡಿದ್ದಾರೆ.” ದೆಹಲಿಯಲ್ಲಿ ಪ್ರತಿ ವರ್ಷ 8,000 ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರು ಹಿಂದೂಗಳಾಗಿದ್ದರಿಂದ ಅವರಿಗೆ ಮಾತ್ರ ಪರಿಹಾರ ಹಣ ಸಿಗುತ್ತಿಲ್ಲ. ಅವರ ಹೆತ್ತವರು ಮಾಡಿದ ತಪ್ಪು ಏನು? ಕೇಜ್ರಿವಾಲ್ ಜಿಹಾದಿ ಮತ್ತು ನಕ್ಸಲರಿಗೆ ಮಾತ್ರ ಹಣವನ್ನು ನೀಡುತ್ತಾರೆಯೇ? ” ಎಂದು ಕಪಿಲ್‌ ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಅವರು ಶೀಘ್ರದಲ್ಲೇ ಕ್ಷಮೆಯಾಚಿಸದಿದ್ದರೆ ಫಾತಿಮಾ ಅವರು ಮಿಶ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸಿದ್ದಾರೆ.

ಸತ್ಯ ಏನೇಂದರೆ ದೆಹಲಿಯ ಅರವಿಂದ್‌ ಕೇಜ್ರಿವಾಲ್‌ರವರು ಮುಸ್ಲಿಂ ಕುಟುಂಬಗಳಿಗೆ ಮಾತ್ರವಲ್ಲದೇ ಅನಾಹುತ, ಅಪಘಾತಗಳಲ್ಲಿ ಮರಣ ಹೊಂದಿದೆ ಎಲ್ಲಾ ಧರ್ಮದ ಕುಟುಂಬಗಳಿಗೆ ಪರಿಹಾರ ಹಣ ನೀಡಿದ್ದರ ಬಗ್ಗೆ ಸಾಕ್ಷಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಆದರೂ ಬಿಜೆಪಿಯವರು ಕೇವಲ ರಾಜಕೀಯ ಮಾಡುವುದಕ್ಕಾಗಿ ಮುಸ್ಲಿಂರನ್ನು ಗುರಿಮಾಡುತ್ತಿದ್ದಾರೆ ಎಂದು ಆ ಸಂದರ್ಭದಲ್ಲಿ ಧೃವ್‌ರಾಠೀ ಸೇರಿದಂತೆ ಇತರರು ವಾದ ಮಾಡಿದ್ದರು.

ಆಧಾರ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...