Homeಚಳವಳಿಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ...

ಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆಯಾಗಿ ಮೂರು ವರ್ಷಗಳ ನಂತರವೂ, ಆತನ ತಾಯಿ ಫಾತಿಮಾ ನಫೀಸ್ ತನ್ನ ಮಗನ ಹುಡುಕಾಟವನ್ನು ಮುಂದುವರೆಸಿದ್ದಾರೆ. ಪತ್ರಿಭಟನೆಯ ಅಂಗವಾಗಿ ತನ್ನ ಮಗ ಕಳೆದುಹೋದ ದಿನವಾದ ಅಕ್ಟೋಬರ್ 15 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬುಲಂದ್‌ಶಹರ್‌ನಲ್ಲಿ ಜನಸಮೂಹದಿಂದ ಕೊಲ್ಲಲ್ಪಟ್ಟ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ರಜನಿ ಸಿಂಗ್ ಸಹ ಹೆಜ್ಜೆ ಹಾಕಲಿದ್ದಾರೆ.

ನಾಗರಿಕ ಹಕ್ಕುಗಳ ಸಂಘಟನೆಯಾದ ಯುನೈಟೆಡ್ ಎಗೇನ್ಸ್ಟ್ ಹೇಟ್ (ಯುಎಹೆಚ್) ನ ಕಾರ್ಯಕರ್ತ ನದೀಮ್ ಖಾನ್ ಮಾತನಾಡಿ ಈ ವರ್ಷದ ಜೂನ್‌ನಲ್ಲಿ ಜಾರ್ಖಂಡ್‌ನಲ್ಲಿ ಹತ್ಯೆಗೀಡಾದ ತಬ್ರೆಜ್ ಅನ್ಸಾರಿ ಅವರ ಕುಟುಂಬ ಮತ್ತು 2017ರ ಸೆಪ್ಟೆಂಬರ್‌ನಲ್ಲಿ ಕೊಲೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಂಬಂಧಿಕರೂ ಮೆರವಣಿಗೆಯಲ್ಲಿ ಜೊತೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಜೀಬ್‌ ತಾಯಿ ಫಾತಿಮಾ ನಫೀಸ್

ನವದೆಹಲಿಯ ಪತ್ರಿಕಾ ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಜೀಬ್‌ ತಾಯಿ ಫಾತಿಮಾ  “ನನ್ನ ಎಲ್ಲಾ ಹಣಕಾಸಿನ ಉಳಿತಾಯಗಳು ಬರಿದಾಗಿವೆ, ಆದರೆ ನನ್ನ ಮಗ ಇನ್ನೋ ನನಗೆ ಸಿಕ್ಕಿಲ್ಲ” ಎಂದು ನೊಂದು ನುಡಿದಿದ್ದಾರೆ. ತನ್ನ ಮಗನಿಗಾಗಿ ಮೂರು ವರ್ಷದಿಂದ ಫಾತಿಮಾ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಹೈಕೋರ್ಟ್‌ನ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದಾಗ ದೆಹಲಿ ಪೊಲೀಸರಿಂದ 2017ರ ಅಕ್ಟೋಬರ್‌ನಲ್ಲಿ ಬಂಧನಕ್ಕೂ ಒಳಗಾಗಿದ್ದರು.

ತನ್ನ ಮಗನ ಪ್ರಕರಣವನ್ನು ಪೊಲೀಸರು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ, ಮೊದಲ ದಿನದಿಂದ ಪೊಲೀಸರು ನಮಗೆ ಮೋಸ ಮಾಡಿದ್ದಾರೆ ಎಂದು  ನಜೀಬ್ ಅವರ ತಾಯಿ ಫಾತಿಮಾ ಆರೋಪಿಸಿದ್ದಾರೆ.

ತಬ್ರೇಜ್ ಅನ್ಸಾರಿ ಕುಟುಂಬ

ನಜೀಬ್ ನಾಪತ್ತೆಯಾಗುವ ಒಂದು ದಿನದ ಮೊದಲು ರಾತ್ರಿ ವೇಳೆ ಅವನಿಗೂ ಮತ್ತು ಎಬಿವಿಪಿ ಸದಸ್ಯರ ನಡುವೆ ಜಗಳವಾಗಿತ್ತು. ತರುವಾಯ, ಜೆಎನ್‌ಯುವಿನ ಎ.ಪಿ.ದಿಮ್ರಿಯವರು ಎಬಿವಿಪಿ ವಿದ್ಯಾರ್ಥಿಗಳು ನಜೀಬ್‌ ಮೇಲೆ ಹಲ್ಲೆ ಮಾಡಿದ್ದನ್ನು ದೃಢಪಡಿಸಿದ್ದರು.

ಆತನನ್ನು ಒಂಬತ್ತು ಎಬಿವಿಪಿ ವಿದ್ಯಾರ್ಥಿಗಳು ಅಪಹರಿಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಆದರೆ ಅವರು ತನಿಖೆಯಲ್ಲಿ ವಿಫಲವಾದ ನಂತರ, ದೆಹಲಿ ಹೈಕೋರ್ಟ್ ಈ ಪ್ರಕರಣವನ್ನು ಮೇ 2017 ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಮಾರು ಒಂದೂವರೆ ವರ್ಷದ ನಂತರ, ಕೇಂದ್ರ ತನಿಖಾ ಸಂಸ್ಥೆ ಕೂಡ ಯಾವುದೇ ಪುರಾವೆಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಜೊತೆಗೆ ಅಕ್ಟೋಬರ್ 2018 ರಲ್ಲಿ ಪ್ರಕರಣವನ್ನು ಮುಚ್ಚುವ ವರದಿಯನ್ನು ಸಲ್ಲಿಸಿದೆ.

ಸುಭೋದ್‌ ಕುಮಾರ್‌ ಕುಟುಂಬ

“ಸಿಬಿಐನಿಂದ ಈ ಮಟ್ಟದ ಆಘಾತವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮಾನವ ಹಕ್ಕುಗಳ ಕಾನೂನು ಜಾಲದ ಸಂಸ್ಥಾಪಕ, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದ್ದಾರೆ. ಯುಎಹೆಚ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಅವರು ಹಲವು ತಿಂಗಳುಗಳ ನಂತರ ದೆಹಲಿ ಹೈಕೋರ್ಟ್‌ಗೆ ಬಂದು ಅಪರಾಧಿಗಳು ನಮಗೆ ಗೊತ್ತಿಲ್ಲ ಎಂದು ಹೇಳುವುದು ನಾಚಿಗೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕೆಂದು ಹೈಕೋರ್ಟ್ ಆದೇಶಿಸದಿರುವುದು ಹೆಚ್ಚು ದುಃಖಕರವಾಗಿದೆ” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ

ಗೌರಿ ಲಂಕೇಶ್ ಕುಟುಂಬ

ಸುದ್ದಿ ಮಾಧ್ಯಮ ಮತ್ತು ಬಿಜೆಪಿಯ ಕಪಿಲ್ ಮಿಶ್ರಾ ವಿರುದ್ಧವೂ ಪ್ರಕರಣ ದಾಖಲಿಸಲಿದೆ

ನಜೀಬ್‌ಗೆ ಐಸಿಸ್‌ನೊಂದಿಗೆ ಸಂಪರ್ಕವಿದೆ, ಅಥವಾ ಭಯೋತ್ಪಾದಕ ಸಂಘಟನೆಯಿಂದ ಪ್ರಭಾವಿತವಾಗಿದೆ ಎಂದು ಹಲವಾರು ಮಾಧ್ಯಮ ಸಂಸ್ಥೆಗಳು ಮಾರ್ಚ್ 2017 ರಲ್ಲಿ ಆರೋಪಿಸಿದ್ದವು. ಅಂತಹ ಆರೋಪಗಳನ್ನು ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟವಾಗಿ ನಿರಾಕರಿಸಿದ್ದರು. ಇದರಿಂದ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಫಾತಿಮಾರವರು ಪರಿಶೀಲನೆ ಮಾಡದೇ ಮಾಹಿತಿಯನ್ನು ವರದಿ ಮಾಡಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕ್ಷಮೆಯಾಚನೆ ಮತ್ತು ಪರಿಹಾರವನ್ನು ಕೇಳಿದ್ದಾರೆ.

ಮಾರ್ಚ್ 2019 ರಲ್ಲಿ ತಡವಾಗಿಯಾದರೂ ನಜೀಬ್ ಐಸಿಸ್‌ಗೆ ಸೇರ್ಪಡೆಗೊಂಡಿದ್ದಾನೆ ಎಂಬ ಫೇಕ್‌ ನ್ಯೂಸ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ವಾಸ್ತವವಾಗಿ, ಪೊಲೀಸರು ಇಂತಹ ಎಲ್ಲಾ ವರದಿಗಳನ್ನು ತಳ್ಳಿಹಾಕಿದರೂ, ಬಿಜೆಪಿಯ ಕಪಿಲ್ ಮಿಶ್ರಾ ಕಳೆದ ವಾರ ನಜೀಬ್ ಐಸಿಸ್ ಗೆ ಸೇರಿದ್ದಾರೆ ಎಂಬ ‘ವದಂತಿಗಳಿವೆ’ ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ದೆಹಲಿ ವಕ್ಫ್ ಮಂಡಳಿಯು ನಜೀಬ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಿದ ಪ್ರತಿಕ್ರಿಯೆಯಾಗಿ ಮಿಶ್ರಾ ಮತ್ತೆ ಕೆಟ್ಟದಾಗಿ ಟ್ವೀಟ್ ಮಾಡಿದ್ದರು.

“ನಜೀಬ್ ಐಸಿಸ್ ಸೇರಿಕೊಂಡಿದ್ದಾನೆ ಎಂದು ವದಂತಿಗಳು ಹೇಳುತ್ತವೆ.  ಆದರೂ “ಕಾಣೆಯಾದ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅವರ ಕುಟುಂಬಕ್ಕೆ ಕೇಜ್ರಿವಾಲ್ 5 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗವನ್ನು ನೀಡಿದ್ದಾರೆ.” ದೆಹಲಿಯಲ್ಲಿ ಪ್ರತಿ ವರ್ಷ 8,000 ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರು ಹಿಂದೂಗಳಾಗಿದ್ದರಿಂದ ಅವರಿಗೆ ಮಾತ್ರ ಪರಿಹಾರ ಹಣ ಸಿಗುತ್ತಿಲ್ಲ. ಅವರ ಹೆತ್ತವರು ಮಾಡಿದ ತಪ್ಪು ಏನು? ಕೇಜ್ರಿವಾಲ್ ಜಿಹಾದಿ ಮತ್ತು ನಕ್ಸಲರಿಗೆ ಮಾತ್ರ ಹಣವನ್ನು ನೀಡುತ್ತಾರೆಯೇ? ” ಎಂದು ಕಪಿಲ್‌ ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಅವರು ಶೀಘ್ರದಲ್ಲೇ ಕ್ಷಮೆಯಾಚಿಸದಿದ್ದರೆ ಫಾತಿಮಾ ಅವರು ಮಿಶ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸಿದ್ದಾರೆ.

ಸತ್ಯ ಏನೇಂದರೆ ದೆಹಲಿಯ ಅರವಿಂದ್‌ ಕೇಜ್ರಿವಾಲ್‌ರವರು ಮುಸ್ಲಿಂ ಕುಟುಂಬಗಳಿಗೆ ಮಾತ್ರವಲ್ಲದೇ ಅನಾಹುತ, ಅಪಘಾತಗಳಲ್ಲಿ ಮರಣ ಹೊಂದಿದೆ ಎಲ್ಲಾ ಧರ್ಮದ ಕುಟುಂಬಗಳಿಗೆ ಪರಿಹಾರ ಹಣ ನೀಡಿದ್ದರ ಬಗ್ಗೆ ಸಾಕ್ಷಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಆದರೂ ಬಿಜೆಪಿಯವರು ಕೇವಲ ರಾಜಕೀಯ ಮಾಡುವುದಕ್ಕಾಗಿ ಮುಸ್ಲಿಂರನ್ನು ಗುರಿಮಾಡುತ್ತಿದ್ದಾರೆ ಎಂದು ಆ ಸಂದರ್ಭದಲ್ಲಿ ಧೃವ್‌ರಾಠೀ ಸೇರಿದಂತೆ ಇತರರು ವಾದ ಮಾಡಿದ್ದರು.

ಆಧಾರ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...