Homeಚಳವಳಿಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ...

ಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆಯಾಗಿ ಮೂರು ವರ್ಷಗಳ ನಂತರವೂ, ಆತನ ತಾಯಿ ಫಾತಿಮಾ ನಫೀಸ್ ತನ್ನ ಮಗನ ಹುಡುಕಾಟವನ್ನು ಮುಂದುವರೆಸಿದ್ದಾರೆ. ಪತ್ರಿಭಟನೆಯ ಅಂಗವಾಗಿ ತನ್ನ ಮಗ ಕಳೆದುಹೋದ ದಿನವಾದ ಅಕ್ಟೋಬರ್ 15 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬುಲಂದ್‌ಶಹರ್‌ನಲ್ಲಿ ಜನಸಮೂಹದಿಂದ ಕೊಲ್ಲಲ್ಪಟ್ಟ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ರಜನಿ ಸಿಂಗ್ ಸಹ ಹೆಜ್ಜೆ ಹಾಕಲಿದ್ದಾರೆ.

ನಾಗರಿಕ ಹಕ್ಕುಗಳ ಸಂಘಟನೆಯಾದ ಯುನೈಟೆಡ್ ಎಗೇನ್ಸ್ಟ್ ಹೇಟ್ (ಯುಎಹೆಚ್) ನ ಕಾರ್ಯಕರ್ತ ನದೀಮ್ ಖಾನ್ ಮಾತನಾಡಿ ಈ ವರ್ಷದ ಜೂನ್‌ನಲ್ಲಿ ಜಾರ್ಖಂಡ್‌ನಲ್ಲಿ ಹತ್ಯೆಗೀಡಾದ ತಬ್ರೆಜ್ ಅನ್ಸಾರಿ ಅವರ ಕುಟುಂಬ ಮತ್ತು 2017ರ ಸೆಪ್ಟೆಂಬರ್‌ನಲ್ಲಿ ಕೊಲೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಂಬಂಧಿಕರೂ ಮೆರವಣಿಗೆಯಲ್ಲಿ ಜೊತೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಜೀಬ್‌ ತಾಯಿ ಫಾತಿಮಾ ನಫೀಸ್

ನವದೆಹಲಿಯ ಪತ್ರಿಕಾ ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಜೀಬ್‌ ತಾಯಿ ಫಾತಿಮಾ  “ನನ್ನ ಎಲ್ಲಾ ಹಣಕಾಸಿನ ಉಳಿತಾಯಗಳು ಬರಿದಾಗಿವೆ, ಆದರೆ ನನ್ನ ಮಗ ಇನ್ನೋ ನನಗೆ ಸಿಕ್ಕಿಲ್ಲ” ಎಂದು ನೊಂದು ನುಡಿದಿದ್ದಾರೆ. ತನ್ನ ಮಗನಿಗಾಗಿ ಮೂರು ವರ್ಷದಿಂದ ಫಾತಿಮಾ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಹೈಕೋರ್ಟ್‌ನ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದಾಗ ದೆಹಲಿ ಪೊಲೀಸರಿಂದ 2017ರ ಅಕ್ಟೋಬರ್‌ನಲ್ಲಿ ಬಂಧನಕ್ಕೂ ಒಳಗಾಗಿದ್ದರು.

ತನ್ನ ಮಗನ ಪ್ರಕರಣವನ್ನು ಪೊಲೀಸರು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ, ಮೊದಲ ದಿನದಿಂದ ಪೊಲೀಸರು ನಮಗೆ ಮೋಸ ಮಾಡಿದ್ದಾರೆ ಎಂದು  ನಜೀಬ್ ಅವರ ತಾಯಿ ಫಾತಿಮಾ ಆರೋಪಿಸಿದ್ದಾರೆ.

ತಬ್ರೇಜ್ ಅನ್ಸಾರಿ ಕುಟುಂಬ

ನಜೀಬ್ ನಾಪತ್ತೆಯಾಗುವ ಒಂದು ದಿನದ ಮೊದಲು ರಾತ್ರಿ ವೇಳೆ ಅವನಿಗೂ ಮತ್ತು ಎಬಿವಿಪಿ ಸದಸ್ಯರ ನಡುವೆ ಜಗಳವಾಗಿತ್ತು. ತರುವಾಯ, ಜೆಎನ್‌ಯುವಿನ ಎ.ಪಿ.ದಿಮ್ರಿಯವರು ಎಬಿವಿಪಿ ವಿದ್ಯಾರ್ಥಿಗಳು ನಜೀಬ್‌ ಮೇಲೆ ಹಲ್ಲೆ ಮಾಡಿದ್ದನ್ನು ದೃಢಪಡಿಸಿದ್ದರು.

ಆತನನ್ನು ಒಂಬತ್ತು ಎಬಿವಿಪಿ ವಿದ್ಯಾರ್ಥಿಗಳು ಅಪಹರಿಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಆದರೆ ಅವರು ತನಿಖೆಯಲ್ಲಿ ವಿಫಲವಾದ ನಂತರ, ದೆಹಲಿ ಹೈಕೋರ್ಟ್ ಈ ಪ್ರಕರಣವನ್ನು ಮೇ 2017 ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಮಾರು ಒಂದೂವರೆ ವರ್ಷದ ನಂತರ, ಕೇಂದ್ರ ತನಿಖಾ ಸಂಸ್ಥೆ ಕೂಡ ಯಾವುದೇ ಪುರಾವೆಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಜೊತೆಗೆ ಅಕ್ಟೋಬರ್ 2018 ರಲ್ಲಿ ಪ್ರಕರಣವನ್ನು ಮುಚ್ಚುವ ವರದಿಯನ್ನು ಸಲ್ಲಿಸಿದೆ.

ಸುಭೋದ್‌ ಕುಮಾರ್‌ ಕುಟುಂಬ

“ಸಿಬಿಐನಿಂದ ಈ ಮಟ್ಟದ ಆಘಾತವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮಾನವ ಹಕ್ಕುಗಳ ಕಾನೂನು ಜಾಲದ ಸಂಸ್ಥಾಪಕ, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದ್ದಾರೆ. ಯುಎಹೆಚ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಅವರು ಹಲವು ತಿಂಗಳುಗಳ ನಂತರ ದೆಹಲಿ ಹೈಕೋರ್ಟ್‌ಗೆ ಬಂದು ಅಪರಾಧಿಗಳು ನಮಗೆ ಗೊತ್ತಿಲ್ಲ ಎಂದು ಹೇಳುವುದು ನಾಚಿಗೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕೆಂದು ಹೈಕೋರ್ಟ್ ಆದೇಶಿಸದಿರುವುದು ಹೆಚ್ಚು ದುಃಖಕರವಾಗಿದೆ” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ

ಗೌರಿ ಲಂಕೇಶ್ ಕುಟುಂಬ

ಸುದ್ದಿ ಮಾಧ್ಯಮ ಮತ್ತು ಬಿಜೆಪಿಯ ಕಪಿಲ್ ಮಿಶ್ರಾ ವಿರುದ್ಧವೂ ಪ್ರಕರಣ ದಾಖಲಿಸಲಿದೆ

ನಜೀಬ್‌ಗೆ ಐಸಿಸ್‌ನೊಂದಿಗೆ ಸಂಪರ್ಕವಿದೆ, ಅಥವಾ ಭಯೋತ್ಪಾದಕ ಸಂಘಟನೆಯಿಂದ ಪ್ರಭಾವಿತವಾಗಿದೆ ಎಂದು ಹಲವಾರು ಮಾಧ್ಯಮ ಸಂಸ್ಥೆಗಳು ಮಾರ್ಚ್ 2017 ರಲ್ಲಿ ಆರೋಪಿಸಿದ್ದವು. ಅಂತಹ ಆರೋಪಗಳನ್ನು ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟವಾಗಿ ನಿರಾಕರಿಸಿದ್ದರು. ಇದರಿಂದ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಫಾತಿಮಾರವರು ಪರಿಶೀಲನೆ ಮಾಡದೇ ಮಾಹಿತಿಯನ್ನು ವರದಿ ಮಾಡಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕ್ಷಮೆಯಾಚನೆ ಮತ್ತು ಪರಿಹಾರವನ್ನು ಕೇಳಿದ್ದಾರೆ.

ಮಾರ್ಚ್ 2019 ರಲ್ಲಿ ತಡವಾಗಿಯಾದರೂ ನಜೀಬ್ ಐಸಿಸ್‌ಗೆ ಸೇರ್ಪಡೆಗೊಂಡಿದ್ದಾನೆ ಎಂಬ ಫೇಕ್‌ ನ್ಯೂಸ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ವಾಸ್ತವವಾಗಿ, ಪೊಲೀಸರು ಇಂತಹ ಎಲ್ಲಾ ವರದಿಗಳನ್ನು ತಳ್ಳಿಹಾಕಿದರೂ, ಬಿಜೆಪಿಯ ಕಪಿಲ್ ಮಿಶ್ರಾ ಕಳೆದ ವಾರ ನಜೀಬ್ ಐಸಿಸ್ ಗೆ ಸೇರಿದ್ದಾರೆ ಎಂಬ ‘ವದಂತಿಗಳಿವೆ’ ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ದೆಹಲಿ ವಕ್ಫ್ ಮಂಡಳಿಯು ನಜೀಬ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಿದ ಪ್ರತಿಕ್ರಿಯೆಯಾಗಿ ಮಿಶ್ರಾ ಮತ್ತೆ ಕೆಟ್ಟದಾಗಿ ಟ್ವೀಟ್ ಮಾಡಿದ್ದರು.

“ನಜೀಬ್ ಐಸಿಸ್ ಸೇರಿಕೊಂಡಿದ್ದಾನೆ ಎಂದು ವದಂತಿಗಳು ಹೇಳುತ್ತವೆ.  ಆದರೂ “ಕಾಣೆಯಾದ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅವರ ಕುಟುಂಬಕ್ಕೆ ಕೇಜ್ರಿವಾಲ್ 5 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗವನ್ನು ನೀಡಿದ್ದಾರೆ.” ದೆಹಲಿಯಲ್ಲಿ ಪ್ರತಿ ವರ್ಷ 8,000 ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರು ಹಿಂದೂಗಳಾಗಿದ್ದರಿಂದ ಅವರಿಗೆ ಮಾತ್ರ ಪರಿಹಾರ ಹಣ ಸಿಗುತ್ತಿಲ್ಲ. ಅವರ ಹೆತ್ತವರು ಮಾಡಿದ ತಪ್ಪು ಏನು? ಕೇಜ್ರಿವಾಲ್ ಜಿಹಾದಿ ಮತ್ತು ನಕ್ಸಲರಿಗೆ ಮಾತ್ರ ಹಣವನ್ನು ನೀಡುತ್ತಾರೆಯೇ? ” ಎಂದು ಕಪಿಲ್‌ ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಅವರು ಶೀಘ್ರದಲ್ಲೇ ಕ್ಷಮೆಯಾಚಿಸದಿದ್ದರೆ ಫಾತಿಮಾ ಅವರು ಮಿಶ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸಿದ್ದಾರೆ.

ಸತ್ಯ ಏನೇಂದರೆ ದೆಹಲಿಯ ಅರವಿಂದ್‌ ಕೇಜ್ರಿವಾಲ್‌ರವರು ಮುಸ್ಲಿಂ ಕುಟುಂಬಗಳಿಗೆ ಮಾತ್ರವಲ್ಲದೇ ಅನಾಹುತ, ಅಪಘಾತಗಳಲ್ಲಿ ಮರಣ ಹೊಂದಿದೆ ಎಲ್ಲಾ ಧರ್ಮದ ಕುಟುಂಬಗಳಿಗೆ ಪರಿಹಾರ ಹಣ ನೀಡಿದ್ದರ ಬಗ್ಗೆ ಸಾಕ್ಷಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಆದರೂ ಬಿಜೆಪಿಯವರು ಕೇವಲ ರಾಜಕೀಯ ಮಾಡುವುದಕ್ಕಾಗಿ ಮುಸ್ಲಿಂರನ್ನು ಗುರಿಮಾಡುತ್ತಿದ್ದಾರೆ ಎಂದು ಆ ಸಂದರ್ಭದಲ್ಲಿ ಧೃವ್‌ರಾಠೀ ಸೇರಿದಂತೆ ಇತರರು ವಾದ ಮಾಡಿದ್ದರು.

ಆಧಾರ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...