Homeಚಳವಳಿಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ...

ಜೆಎನ್‌ಯು ವಿದ್ಯಾಥಿ೯ ನಜೀಬ್ ನಾಪತ್ತೆಯಾಗಿ 3 ವರ್ಷ: ಆತನ ತಾಯಿಯಿಂದ ಅಮಿತ್ ಶಾ ಮನೆಗೆ ಪ್ರತಿಭಟನಾ ಮೆರವಣಿಗೆ

- Advertisement -
- Advertisement -

ಜೆಎನ್‌ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನಾಪತ್ತೆಯಾಗಿ ಮೂರು ವರ್ಷಗಳ ನಂತರವೂ, ಆತನ ತಾಯಿ ಫಾತಿಮಾ ನಫೀಸ್ ತನ್ನ ಮಗನ ಹುಡುಕಾಟವನ್ನು ಮುಂದುವರೆಸಿದ್ದಾರೆ. ಪತ್ರಿಭಟನೆಯ ಅಂಗವಾಗಿ ತನ್ನ ಮಗ ಕಳೆದುಹೋದ ದಿನವಾದ ಅಕ್ಟೋಬರ್ 15 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಗೆ ಮೆರವಣಿಗೆ ನಡೆಸಲಿದ್ದಾರೆ. ಅವರೊಂದಿಗೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಬುಲಂದ್‌ಶಹರ್‌ನಲ್ಲಿ ಜನಸಮೂಹದಿಂದ ಕೊಲ್ಲಲ್ಪಟ್ಟ ಇನ್ಸ್‌ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರ ಪತ್ನಿ ರಜನಿ ಸಿಂಗ್ ಸಹ ಹೆಜ್ಜೆ ಹಾಕಲಿದ್ದಾರೆ.

ನಾಗರಿಕ ಹಕ್ಕುಗಳ ಸಂಘಟನೆಯಾದ ಯುನೈಟೆಡ್ ಎಗೇನ್ಸ್ಟ್ ಹೇಟ್ (ಯುಎಹೆಚ್) ನ ಕಾರ್ಯಕರ್ತ ನದೀಮ್ ಖಾನ್ ಮಾತನಾಡಿ ಈ ವರ್ಷದ ಜೂನ್‌ನಲ್ಲಿ ಜಾರ್ಖಂಡ್‌ನಲ್ಲಿ ಹತ್ಯೆಗೀಡಾದ ತಬ್ರೆಜ್ ಅನ್ಸಾರಿ ಅವರ ಕುಟುಂಬ ಮತ್ತು 2017ರ ಸೆಪ್ಟೆಂಬರ್‌ನಲ್ಲಿ ಕೊಲೆಯಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಂಬಂಧಿಕರೂ ಮೆರವಣಿಗೆಯಲ್ಲಿ ಜೊತೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ನಜೀಬ್‌ ತಾಯಿ ಫಾತಿಮಾ ನಫೀಸ್

ನವದೆಹಲಿಯ ಪತ್ರಿಕಾ ಕ್ಲಬ್‌ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಜೀಬ್‌ ತಾಯಿ ಫಾತಿಮಾ  “ನನ್ನ ಎಲ್ಲಾ ಹಣಕಾಸಿನ ಉಳಿತಾಯಗಳು ಬರಿದಾಗಿವೆ, ಆದರೆ ನನ್ನ ಮಗ ಇನ್ನೋ ನನಗೆ ಸಿಕ್ಕಿಲ್ಲ” ಎಂದು ನೊಂದು ನುಡಿದಿದ್ದಾರೆ. ತನ್ನ ಮಗನಿಗಾಗಿ ಮೂರು ವರ್ಷದಿಂದ ಫಾತಿಮಾ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಹೈಕೋರ್ಟ್‌ನ ಹೊರಗೆ ಪ್ರತಿಭಟನೆಯಲ್ಲಿ ಕುಳಿತಿದ್ದಾಗ ದೆಹಲಿ ಪೊಲೀಸರಿಂದ 2017ರ ಅಕ್ಟೋಬರ್‌ನಲ್ಲಿ ಬಂಧನಕ್ಕೂ ಒಳಗಾಗಿದ್ದರು.

ತನ್ನ ಮಗನ ಪ್ರಕರಣವನ್ನು ಪೊಲೀಸರು ಎಂದಿಗೂ ಗಂಭೀರವಾಗಿ ಪರಿಗಣಿಸಿಲ್ಲ, ಮೊದಲ ದಿನದಿಂದ ಪೊಲೀಸರು ನಮಗೆ ಮೋಸ ಮಾಡಿದ್ದಾರೆ ಎಂದು  ನಜೀಬ್ ಅವರ ತಾಯಿ ಫಾತಿಮಾ ಆರೋಪಿಸಿದ್ದಾರೆ.

ತಬ್ರೇಜ್ ಅನ್ಸಾರಿ ಕುಟುಂಬ

ನಜೀಬ್ ನಾಪತ್ತೆಯಾಗುವ ಒಂದು ದಿನದ ಮೊದಲು ರಾತ್ರಿ ವೇಳೆ ಅವನಿಗೂ ಮತ್ತು ಎಬಿವಿಪಿ ಸದಸ್ಯರ ನಡುವೆ ಜಗಳವಾಗಿತ್ತು. ತರುವಾಯ, ಜೆಎನ್‌ಯುವಿನ ಎ.ಪಿ.ದಿಮ್ರಿಯವರು ಎಬಿವಿಪಿ ವಿದ್ಯಾರ್ಥಿಗಳು ನಜೀಬ್‌ ಮೇಲೆ ಹಲ್ಲೆ ಮಾಡಿದ್ದನ್ನು ದೃಢಪಡಿಸಿದ್ದರು.

ಆತನನ್ನು ಒಂಬತ್ತು ಎಬಿವಿಪಿ ವಿದ್ಯಾರ್ಥಿಗಳು ಅಪಹರಿಸಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದರು. ಆದರೆ ಅವರು ತನಿಖೆಯಲ್ಲಿ ವಿಫಲವಾದ ನಂತರ, ದೆಹಲಿ ಹೈಕೋರ್ಟ್ ಈ ಪ್ರಕರಣವನ್ನು ಮೇ 2017 ರಲ್ಲಿ ಸಿಬಿಐಗೆ ವರ್ಗಾಯಿಸಿತು. ಆದರೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸುಮಾರು ಒಂದೂವರೆ ವರ್ಷದ ನಂತರ, ಕೇಂದ್ರ ತನಿಖಾ ಸಂಸ್ಥೆ ಕೂಡ ಯಾವುದೇ ಪುರಾವೆಗಳನ್ನು ಕಂಡುಹಿಡಿಯುವಲ್ಲಿ ವಿಫಲವಾಗಿದೆ. ಜೊತೆಗೆ ಅಕ್ಟೋಬರ್ 2018 ರಲ್ಲಿ ಪ್ರಕರಣವನ್ನು ಮುಚ್ಚುವ ವರದಿಯನ್ನು ಸಲ್ಲಿಸಿದೆ.

ಸುಭೋದ್‌ ಕುಮಾರ್‌ ಕುಟುಂಬ

“ಸಿಬಿಐನಿಂದ ಈ ಮಟ್ಟದ ಆಘಾತವನ್ನು ನಾವು ನಿರೀಕ್ಷಿಸಿರಲಿಲ್ಲ ಎಂದು ಮಾನವ ಹಕ್ಕುಗಳ ಕಾನೂನು ಜಾಲದ ಸಂಸ್ಥಾಪಕ, ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್ ಹೇಳಿದ್ದಾರೆ. ಯುಎಹೆಚ್ ಬಿಡುಗಡೆ ಮಾಡಿದ ಸಾಕ್ಷ್ಯಚಿತ್ರದಲ್ಲಿ ಮಾತನಾಡಿರುವ ಅವರು ಹಲವು ತಿಂಗಳುಗಳ ನಂತರ ದೆಹಲಿ ಹೈಕೋರ್ಟ್‌ಗೆ ಬಂದು ಅಪರಾಧಿಗಳು ನಮಗೆ ಗೊತ್ತಿಲ್ಲ ಎಂದು ಹೇಳುವುದು ನಾಚಿಗೆಗೇಡಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ಮಾಡಬೇಕೆಂದು ಹೈಕೋರ್ಟ್ ಆದೇಶಿಸದಿರುವುದು ಹೆಚ್ಚು ದುಃಖಕರವಾಗಿದೆ” ಎಂದು ಗೊನ್ಸಾಲ್ವೆಸ್ ಹೇಳಿದ್ದಾರೆ

ಗೌರಿ ಲಂಕೇಶ್ ಕುಟುಂಬ

ಸುದ್ದಿ ಮಾಧ್ಯಮ ಮತ್ತು ಬಿಜೆಪಿಯ ಕಪಿಲ್ ಮಿಶ್ರಾ ವಿರುದ್ಧವೂ ಪ್ರಕರಣ ದಾಖಲಿಸಲಿದೆ

ನಜೀಬ್‌ಗೆ ಐಸಿಸ್‌ನೊಂದಿಗೆ ಸಂಪರ್ಕವಿದೆ, ಅಥವಾ ಭಯೋತ್ಪಾದಕ ಸಂಘಟನೆಯಿಂದ ಪ್ರಭಾವಿತವಾಗಿದೆ ಎಂದು ಹಲವಾರು ಮಾಧ್ಯಮ ಸಂಸ್ಥೆಗಳು ಮಾರ್ಚ್ 2017 ರಲ್ಲಿ ಆರೋಪಿಸಿದ್ದವು. ಅಂತಹ ಆರೋಪಗಳನ್ನು ಯಾವುದೇ ಪುರಾವೆಗಳಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟವಾಗಿ ನಿರಾಕರಿಸಿದ್ದರು. ಇದರಿಂದ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದ ಫಾತಿಮಾರವರು ಪರಿಶೀಲನೆ ಮಾಡದೇ ಮಾಹಿತಿಯನ್ನು ವರದಿ ಮಾಡಿದ ಮಾಧ್ಯಮ ಸಂಸ್ಥೆಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದು, ಕ್ಷಮೆಯಾಚನೆ ಮತ್ತು ಪರಿಹಾರವನ್ನು ಕೇಳಿದ್ದಾರೆ.

ಮಾರ್ಚ್ 2019 ರಲ್ಲಿ ತಡವಾಗಿಯಾದರೂ ನಜೀಬ್ ಐಸಿಸ್‌ಗೆ ಸೇರ್ಪಡೆಗೊಂಡಿದ್ದಾನೆ ಎಂಬ ಫೇಕ್‌ ನ್ಯೂಸ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದವು. ವಾಸ್ತವವಾಗಿ, ಪೊಲೀಸರು ಇಂತಹ ಎಲ್ಲಾ ವರದಿಗಳನ್ನು ತಳ್ಳಿಹಾಕಿದರೂ, ಬಿಜೆಪಿಯ ಕಪಿಲ್ ಮಿಶ್ರಾ ಕಳೆದ ವಾರ ನಜೀಬ್ ಐಸಿಸ್ ಗೆ ಸೇರಿದ್ದಾರೆ ಎಂಬ ‘ವದಂತಿಗಳಿವೆ’ ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ದೆಹಲಿ ವಕ್ಫ್ ಮಂಡಳಿಯು ನಜೀಬ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರವನ್ನು ನೀಡಿದ ಪ್ರತಿಕ್ರಿಯೆಯಾಗಿ ಮಿಶ್ರಾ ಮತ್ತೆ ಕೆಟ್ಟದಾಗಿ ಟ್ವೀಟ್ ಮಾಡಿದ್ದರು.

“ನಜೀಬ್ ಐಸಿಸ್ ಸೇರಿಕೊಂಡಿದ್ದಾನೆ ಎಂದು ವದಂತಿಗಳು ಹೇಳುತ್ತವೆ.  ಆದರೂ “ಕಾಣೆಯಾದ ಜೆಎನ್‌ಯು ವಿದ್ಯಾರ್ಥಿ ನಜೀಬ್ ಅವರ ಕುಟುಂಬಕ್ಕೆ ಕೇಜ್ರಿವಾಲ್ 5 ಲಕ್ಷ ರೂ. ಮತ್ತು ಸರ್ಕಾರಿ ಉದ್ಯೋಗವನ್ನು ನೀಡಿದ್ದಾರೆ.” ದೆಹಲಿಯಲ್ಲಿ ಪ್ರತಿ ವರ್ಷ 8,000 ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರು ಹಿಂದೂಗಳಾಗಿದ್ದರಿಂದ ಅವರಿಗೆ ಮಾತ್ರ ಪರಿಹಾರ ಹಣ ಸಿಗುತ್ತಿಲ್ಲ. ಅವರ ಹೆತ್ತವರು ಮಾಡಿದ ತಪ್ಪು ಏನು? ಕೇಜ್ರಿವಾಲ್ ಜಿಹಾದಿ ಮತ್ತು ನಕ್ಸಲರಿಗೆ ಮಾತ್ರ ಹಣವನ್ನು ನೀಡುತ್ತಾರೆಯೇ? ” ಎಂದು ಕಪಿಲ್‌ ಮಿಶ್ರಾ ಟ್ವೀಟ್ ಮಾಡಿದ್ದಾರೆ.

ಅವರು ಶೀಘ್ರದಲ್ಲೇ ಕ್ಷಮೆಯಾಚಿಸದಿದ್ದರೆ ಫಾತಿಮಾ ಅವರು ಮಿಶ್ರಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸಿದ್ದಾರೆ.

ಸತ್ಯ ಏನೇಂದರೆ ದೆಹಲಿಯ ಅರವಿಂದ್‌ ಕೇಜ್ರಿವಾಲ್‌ರವರು ಮುಸ್ಲಿಂ ಕುಟುಂಬಗಳಿಗೆ ಮಾತ್ರವಲ್ಲದೇ ಅನಾಹುತ, ಅಪಘಾತಗಳಲ್ಲಿ ಮರಣ ಹೊಂದಿದೆ ಎಲ್ಲಾ ಧರ್ಮದ ಕುಟುಂಬಗಳಿಗೆ ಪರಿಹಾರ ಹಣ ನೀಡಿದ್ದರ ಬಗ್ಗೆ ಸಾಕ್ಷಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಆದರೂ ಬಿಜೆಪಿಯವರು ಕೇವಲ ರಾಜಕೀಯ ಮಾಡುವುದಕ್ಕಾಗಿ ಮುಸ್ಲಿಂರನ್ನು ಗುರಿಮಾಡುತ್ತಿದ್ದಾರೆ ಎಂದು ಆ ಸಂದರ್ಭದಲ್ಲಿ ಧೃವ್‌ರಾಠೀ ಸೇರಿದಂತೆ ಇತರರು ವಾದ ಮಾಡಿದ್ದರು.

ಆಧಾರ: ದಿಪ್ರಿಂಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....