Homeಚಳವಳಿಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ...

ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ

‘ಸೌಹಾರ್ದ ಹಾಳಾಗುತ್ತದೆ’ ಎಂಬ ಆಡಳಿತ ಮಂಡಳಿಯ ಆಕ್ಷೇಪಣೆಗೆ ಆರೆಸ್ಸಸ್ಸೆಸ್‌ ಮತ್ತು ಗೂಂಡಾಗಳು ಸೌಹಾರ್ದತೆಯ ಬಗ್ಗೆ ಮಾತನಾಡಬಾರದು, ನಾವು ಪ್ರದರ್ಶನ ಮಾಡಿಯೇ ತೀರುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ

- Advertisement -
- Advertisement -

ಆಡಳಿತ ಮಂಡಳಿಯ ಆಕ್ಷೇಪಣೆಯ ಹೊರತಾಗಿಯು ಜವಾಹರಲಾಲ್‌ ನೆಹರೂ ವಿಶ್ವವಿದ್ಯಾನಿಯಯದ ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು)ವು ಬಾಬರಿ ಮಸೀದಿ ಧ್ವಂಸ ಘಟನೆಯ ಬಗ್ಗೆ ನಿರ್ಮಿಸಲಾಗಿರುವ ‘ರಾಮ್‌‌ ಕೆ ನಾಮ್‌’ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡಿಯೇ ತೀರುತ್ತೇವೆ ಎಂದು ಹೇಳಿದೆ. ಡಿಸೆಂಬರ್‌ 4 ರ ಶನಿವಾರ (ಇಂದು)ದಂದು ರಾತ್ರಿ 9:30 ಕ್ಕೆ ಸಾಕ್ಷ್ಯ ಚಿತ್ರವು ಜೆಎನ್‌ಯುವಿನಲ್ಲಿ ವಿದ್ಯಾರ್ಥಿ ಒಕ್ಕೂಟವು ಪ್ರದರ್ಶನ ಮಾಡಲಿದೆ.

ಆದರೆ, ಪ್ರದರ್ಶನಕ್ಕಾಗಿ ಕರಪತ್ರವನ್ನು ಬಿಡುಗಡೆ ಮಾಡಿದ ವಿದ್ಯಾರ್ಥಿ ಒಕ್ಕೂಟದ ಹೆಸರಿನಲ್ಲಿ, ವಿದ್ಯಾರ್ಥಿಗಳ ಗುಂಪು ಪೂರ್ವಾನುಮತಿ ಪಡೆದಿಲ್ಲ ಎಂದು ಜೆಎನ್‌ಯು ಆಡಳಿತವು ಹೇಳಿದೆ. ಈ ಬಗ್ಗೆ ಎಚ್ಚರಿಕೆ ನೀಡಿ ಸುತ್ತೋಲೆಯನ್ನು ಬಿಡುಗಡೆ ಮಾಡಿದೆ.

ಇದನ್ನೂ ಓದಿ:ಅಯೋಧ್ಯೆ: ಬಾಬರಿಗಿಂತ 4 ಪಟ್ಟು ದೊಡ್ಡ ಮಸೀದಿ – ಮಸೀದಿಗಿಂತ 6 ಪಟ್ಟು ದೊಡ್ಡ ಆಸ್ಪತ್ರೆ!

ವಿಶ್ವವಿದ್ಯಾಲಯ ತನ್ನ ಸುತ್ತೋಲೆಯಲ್ಲಿ, “ಇಂತಹ ಅನಧಿಕೃತ ಚಟುವಟಿಕೆಯು ಕೋಮು ಸೌಹಾರ್ದತೆ ಮತ್ತು ಕ್ಯಾಂಪಸ್‌ನ ಶಾಂತಿಯುತ ವಾತಾವರಣವನ್ನು ಕದಡಬಹುದು. ಘಟನೆಗೆ ಕಾರಣರಾದವರ ವಿರುದ್ಧ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳು ಪ್ರಚೋದನೆಗೆ ಒಳಗಾಗಬಾರದು. ಕರಪತ್ರವು ಅನಧಿಕೃತವಾಗಿದೆ” ಎಂದು ಹೇಳಿದೆ.

ಉದ್ದೇಶಿತ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸುವಂತೆ ಸಂಬಂಧಪಟ್ಟ ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಜೆಎನ್‌ಯು ತಿಳಿಸಿದೆ.

ವಿಶ್ವವಿದ್ಯಾಲಯದ ಸುತ್ತೋಲೆಗೆ ಪ್ರತಿಕ್ರಿಯಿಸಿರುವ ಜೆಎನ್‌ಯುಎಸ್‌ಯು ಅಧ್ಯಕ್ಷೆ ಐಶೆ ಘೋಷ್‌‌, ಚಿತ್ರ ಪ್ರದರ್ಶನವನ್ನು ಮಾಡಿಯೇ ತೀರುತ್ತೇವೆ, ಆರೆಸ್ಸೆಸ್‌ ಮತ್ತು ಅದರ ಗೂಂಡಾಗಳು ಕೋಮು ಸೌಹಾರ್ದದ ಬಗ್ಗೆ ಮಾತನಾಡಬಾರದು ಎಂದು ಆಕ್ರೊಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಡಿಸೆಂಬರ್‌ ಚಳಿಯ ಒಂದು ದಿನ ಬಾಬರಿ ಮಸೀದಿ ಸ್ವಯಂ ಸ್ಫೋಟಗೊಂಡಿತು: ತೀರ್ಪು ವಿರುದ್ದ ಟ್ವಿಟ್ಟರ್‌‌ನಲ್ಲಿ ಆಕ್ರೋಶ

ಈ ಬಗ್ಗೆ ಟ್ವೀಟ್ ಮಾಡಿರುವ ಐಶೆ ಘೋಷ್‌, “ಆರ್‌ಎಸ್‌ಎಸ್ ಮತ್ತು ಅದರ ಗೂಂಡಾಗಳು ಕೋಮು ಸೌಹಾರ್ದದ ಬಗ್ಗೆ ಮಾತನಾಡಬಾರದು. ಜೆಎನ್‌ಯುಎಸ್‌ಯು ‘ರಾಮ್ ಕೇ ನಾಮ್’ ಪ್ರದರ್ಶನ ಮಾಡೇ ಮಾಡುತ್ತದೆ. ಈ ದೇಶದಲ್ಲಿ ಕೋಮು ಸೌಹಾರ್ದತೆ ಕದಡುತ್ತಿರುವುದು ಬಲಪಂಥೀಯ ಮೂಲಭೂತವಾದಿಗಳು. ಅವರು ನಮ್ಮನ್ನು ಬೆದರಿಸಿದಾಗೆಲ್ಲಾ ಹೀಗೆ ಬೆತ್ತಲಾಗುತ್ತಾ ಹೋಗುತ್ತಾರೆ” ಎಂದು ಬರೆದಿದ್ದಾರೆ.

‘ರಾಮ್ ಕೆ ನಾಮ್’ 1992 ರ ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್ ಅವರ ನಿರ್ಮಿಸಿದ ಸಾಕ್ಷ್ಯಚಿತ್ರವಾಗಿದೆ. ಅಯೋಧ್ಯೆಯಲ್ಲಿ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮ ಮಂದಿರವನ್ನು ನಿರ್ಮಿಸಲು ಬಿಜೆಪಿ ಬೆಂಬಲಿತ ಬಲಪಂಥೀಯ ಸಂಘಟನೆ ವಿಎಚ್‌ಪಿ ನಡೆಸಿದ ಅಭಿಯಾನವನ್ನು ಈ ಚಿತ್ರವು ಪರಿಶೋಧಿಸುತ್ತದೆ. ಚಲನಚಿತ್ರವು ಅತ್ಯುತ್ತಮ ಸಾಕ್ಷ್ಯಚಿತ್ರಕ್ಕಾಗಿ ಹಲವಾರು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದೆ.

ಇದನ್ನೂ ಓದಿ:ರಾಮ ಮಂದಿರದ ’ಭೂಮಿ ಪೂಜೆ’ಗೆ ಬಾಬರಿ ಮಸೀದಿ ಧ್ವಂಸಗೊಳಿಸಿದವರನ್ನು ಆಹ್ವಾನಿಸಿ: ದುಬೆ

ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರವನ್ನು ಇಲ್ಲಿಯು ನೋಡಬಹುದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...