Homeಮುಖಪುಟವಿರೋಧದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳಿಂದ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

ವಿರೋಧದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳಿಂದ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ

- Advertisement -
- Advertisement -

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಹಲವಾರು ವಿದ್ಯಾರ್ಥಿಗಳು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ಮೇಲಿನ ನಿಷೇಧಿತ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ನಡೆಸಿದರು. ವಿಶ್ವವಿದ್ಯಾನಿಲಯ ಆಡಳಿತ ಮಂಡಳಿಯ ಕಠಿಣ ಕ್ರಮದ ಎಚ್ಚರಿಕೆ ಸಲಹೆಯನ್ನು ಅವರು ಧಿಕ್ಕರಿಸಿದ್ದಾರೆ.

ಎಡ-ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿಗಳ ಫೆಡರೇಶನ್ (ಎಐಎಸ್‌ಎಫ್) ಆಯೋಜಿಸಿದ ಸ್ಕ್ರೀನಿಂಗ್ ಅನ್ನು ಆರಂಭದಲ್ಲಿ ಪ್ರೊಜೆಕ್ಟರ್‌ನಲ್ಲಿ ಪ್ರದರ್ಶಿಸಲು ಯೋಜಿಸಲಾಗಿತ್ತು.

ಆದರೆ, ಭದ್ರತಾ ಸಿಬ್ಬಂದಿ ಪ್ರೊಜೆಕ್ಟರ್‌ಗೆ ಹಾನಿ ಮಾಡಿದ್ದಾರೆ ಎಂದು ಸಂಘಟಕರು ಹೇಳಿದ್ದಾರೆ. ಪರಿಣಾಮವಾಗಿ, ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಗಂಗಾ ಧಾಬಾದಲ್ಲಿ ಲ್ಯಾಪ್‌ಟಾಪ್‌ನಲ್ಲಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಿದರು. ಅಲ್ಲಿ ಭದ್ರತಾ ಸಿಬ್ಬಂದಿಯ ಸಮ್ಮುಖದಲ್ಲಿ ಅದನ್ನು ವೀಕ್ಷಿಸಲು ಹಲವಾರು ವಿದ್ಯಾರ್ಥಿಗಳು ಜಮಾಯಿಸಿದರು.

ಸೋಮವಾರ, ಜೆಎನ್‌ಯು ಆಡಳಿತವು ವಿದ್ಯಾರ್ಥಿಗಳು ಸ್ಕ್ರೀನಿಂಗ್‌ನಲ್ಲಿ ಭಾಗವಹಿಸದಂತೆ ಎಚ್ಚರಿಕೆ ನೀಡಿ, ಕ್ಯಾಂಪಸ್‌ನಲ್ಲಿ ಕೋಮು ಸೌಹಾರ್ದತೆಗೆ ಭಂಗ ತರಬಹುದು ಎಂದು ಆಎಡಳಿತ ಮಂಡಳಿ ತಿಳಿಸಿತ್ತು. ನಿರ್ದೇಶನವನ್ನು ಉಲ್ಲಂಘಿಸಿದರೆ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವಿಶ್ವವಿದ್ಯಾಲಯವು ಎಚ್ಚರಿಸಿದೆ.

ಆಡಳಿತ ಮತ್ತು ಭದ್ರತಾ ಸಿಬ್ಬಂದಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲು ಯತ್ನಿಸುತ್ತಿದ್ದಾರೆ ಎಂದು ಎಐಎಸ್‌ಎಫ್ ಮುಖಂಡರು ಆರೋಪಿಸಿದ್ದಾರೆ.

“ಸೈಕ್ಲೋಪ್‌ಗಳು (ಜೆಎನ್‌ಯು ಭದ್ರತಾ ಸಿಬ್ಬಂದಿ) ವಿದ್ಯಾರ್ಥಿಗಳು ಮತ್ತು ಜೆಎನ್‌ಯು ಜಂಟಿ ಕಾರ್ಯದರ್ಶಿ ಸಾಜಿದ್ ಅವರನ್ನು ಹಿಂಸಿಸಿದರು. ಅವರು ಪ್ರೊಜೆಕ್ಟರ್ ಅನ್ನು ಹಾನಿಗೊಳಿಸಿದರು. ಆದರೆ, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಸಾಕ್ಷ್ಯಚಿತ್ರವನ್ನು ವೀಕ್ಷಿಸಿದರು. ಅವರು ಈ ದೌರ್ಜನ್ಯದ ಮುಂದೆ ಶರಣಾಗಲು ನಿರಾಕರಿಸಿದರು. ಅವರು ತಮ್ಮ ವಾಕ್ ಮತ್ತು ಪ್ರತಿಭಟನೆಯ ಸ್ವಾತಂತ್ರ್ಯದ ಹಕ್ಕುಗಳನ್ನು ಬಿಟ್ಟುಕೊಡಲು ನಿರಾಕರಿಸಿದರು” ಎಂದು ಎಐಎಸ್‌ಎಫ್ ಪ್ರತಿನಿಧಿ ಆರೋಪಿಸಿದರು.

ಜೆಎನ್‌ಯುಎಸ್‌ಯು ಹೇಳಿಕೆಯಲ್ಲಿ, ಯೂನಿವರ್ಸಿಟಿ ನೀಡಿದ ಸಲಹೆಯನ್ನು ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ಮೇಲಿನ ದಾಳಿ ಎಂದು ಖಂಡಿಸಿದೆ.

“ಸರ್ಕಾರವನ್ನು ಟೀಕಿಸುವ ಸಾಕ್ಷ್ಯಚಿತ್ರಗಳ ಪ್ರದರ್ಶನವನ್ನು ನಿಗ್ರಹಿಸಲು ಆಡಳಿತವು ಸತತವಾಗಿ ಪ್ರಯತ್ನಿಸುತ್ತಿರುವಾಗ, ಆರ್‌ಎಸ್‌ಎಸ್-ಬಿಜೆಪಿ ಅಜೆಂಡಾವನ್ನು ಪ್ರಚಾರ ಮಾಡುವ ಚಲನಚಿತ್ರಗಳಿಗೆ ಏಕಕಾಲದಲ್ಲಿ ಮುಕ್ತ ಹಸ್ತ ನೀಡಿರುವುದು ಆಳವಾದ ಬೂಟಾಟಿಕೆಯಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ದಿ ಕೇರಳ ಸ್ಟೋರಿ, ದಿ ಕಾಶ್ಮೀರ್ ಫೈಲ್ಸ್, ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ. ಮತ್ತು ದಿ ಸಬರಮತಿ ರಿಪೋರ್ಟ್ ನಂತಹ ವಿಭಜಕ, ಫ್ಯಾಸಿಸ್ಟ್ ಸಿದ್ಧಾಂತಗಳನ್ನು ಬಹಿರಂಗವಾಗಿ ಪ್ರಚಾರ ಮಾಡುವ ಚಲನಚಿತ್ರಗಳನ್ನು ಕ್ಯಾಂಪಸ್‌ನಲ್ಲಿ ಪ್ರಶ್ನಿಸಲು ಅನುಮತಿಸಲಾಗಿದೆ” ಎಂದು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

ಇದನ್ನೂ ಓದಿ; ‘ಮನರೇಗಾ ಪಾವತಿಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಬಾರದು..’; ಸಂಸದೀಯ ಸಮಿತಿಯು ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...