Homeಚಳವಳಿವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಪ್ರದರ್ಶನಕ್ಕೆ ತೊಂದರೆಯಾಗುವಂತೆ ವಿದ್ಯುತ್ ಕಟ್‌ ಮಾಡಿದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ

- Advertisement -
- Advertisement -

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಕುರಿತು ಬಿಬಿಸಿ ತಯಾರಿಸಿರುವ ‘ಇಂಡಿಯಾ – ದ ಮೋದಿ ಕ್ವಸ್ಚನ್’ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ಪ್ರದರ್ಶನ ಮಾಡಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದಿಂದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟಾಗಬಹುದು, ಆದ್ದರಿಂದ ಪ್ರದರ್ಶನವನ್ನು ರದ್ದುಗೊಳಿಸಬೇಕು ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದರು.

ವಿದ್ಯಾರ್ಥಿ ಸಂಘವು ರಾತ್ರಿ ಒಂಬತ್ತು ಗಂಟೆಗೆ ಸಾಕ್ಷ್ಯಚಿತ್ರದ ಪ್ರದರ್ಶನ ಎಂದು ಹೇಳಿಕೊಂಡಿತ್ತು.‌ ಅದಕ್ಕಾಗಿ ವಿದ್ಯಾರ್ಥಿಗಳು ತಯಾರಿ ಕೂಡಾ ನಡೆಸಿದ್ದರು. ಆದರೆ, ಸುಮಾರು 8:30 ಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ವಿದ್ಯುತ್ ಕಡಿತ ಮಾಡಿತ್ತು.‌ ಹೀಗಾಗಿ ನೆರೆದಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಲ್ಯಾಪ್‌ಟಾಪ್ ಮೂಲಕ ಸ್ಥಳದಲ್ಲೇ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಬಿಬಿಸಿ ಸಾಕ್ಷ್ಯಚಿತ್ರವನ್ನು ನೋಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷ್ಯಚಿತ್ರ ಪ್ರದರ್ಶನಕ್ಕೂ ಮೊದಲು ಮಾತನಾಡಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌, “ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಭಾರತದ ಯಾವ ಪ್ರದೇಶದಲ್ಲೂ ನಿಷೇಧವಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ನೋಡಬಾರದು ಎಂದು ತಡೆಹಿಡಿದಿದ್ದು ಮಾತ್ರವಾಗಿದೆ. ಇದರರ್ಥ ಅದನ್ನು ನಿಷೇಧ ಎಂದಲ್ಲ. ಹೀಗಿರುವಾಗ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲು ಅನುಮತಿ ಯಾಕೆ ಪಡೆಯಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ದೇಶದಲ್ಲಿ ಇರುವ ನಮಗೆ ಸಾಕ್ಷ್ಯಚಿತ್ರವೊಂದನ್ನು ನೋಡುವ ಹಕ್ಕಿಲ್ಲವೆ? ಪ್ರಜಾಪ್ರಭುತ್ವದ ಮೂಲವೇ ಜೆಎನ್‌ಯು ವಿಶ್ವವಿದ್ಯಾಲಯದಂತಹ ಸ್ಥಳವಾಗಿದೆ. ಇಲ್ಲೇ ಪ್ರಜಾಪ್ರಭುತ್ವವನ್ನು ಯಾಕೆ ತುಳಿಯುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ನೋಡುತ್ತಿದ್ದ ವೇಳೆ ಬಿಜೆಪಿಯ ವಿದ್ಯಾರ್ಥಿಯ ಸಂಘಟನೆಯಾದ ಎಬಿವಿಪಿ ಗೂಂಡಗಳು ಕಲ್ಲೆಸತ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ವಿದ್ಯಾರ್ಥಿಗಳ ಮೇಲೆ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿ ಸಂಘವು ಸಾಕ್ಷ್ಯಚಿತ್ರದ ಪ್ರದರ್ಶನ ನಡೆಸುತ್ತಿದೆ ಎಂದು ಘೋಷಿಸುತ್ತಿದ್ದಂತೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಜೆಎನ್‌ಯು ಆಡಳಿತ, “ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಆಡಳಿತದಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ. ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು. ಹೀಗಾಗಿ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು. ಅದು ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಟ್ಟುನಿಟ್ಟಾದ ಶಿಸ್ತು ಕ್ರಮವನ್ನು ಪ್ರಾರಂಭಿಸಬಹುದು” ಎಂದು ಎಚ್ಚರಿಸಿತ್ತು.

ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯು ಅದನ್ನು ಪರಿಗಣಿಸದೆ ಅಧ್ಯಕ್ಷೆ ಐಷೆ ಘೋಷ್‌ ಅವರು,“ಅತಿದೊಡ್ಡ ‘ಪ್ರಜಾಪ್ರಭುತ್ವ’ದ ‘ಚುನಾಯಿತ ಸರ್ಕಾರ’ವು ‘ನಿಷೇಧಿಸಿದ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ.” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರೆ.

2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಕೇಂದ್ರದ CAA ನಂತಹ ಕೆಲವು ನೀತಿಗಳನ್ನು ಒಳಗೊಂಡಿರುವ ಬಗ್ಗೆ “ಭಾರತ: ಮೋದಿ ಪ್ರಶ್ನೆ” ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವು ಚರ್ಚಿಸಿದೆ. ಸಾಕ್ಷ್ಯಚಿತ್ರದ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ಸಾಕ್ಷ್ಯಚಿತ್ರವು ಪಕ್ಷಪಾತದಿಂದ ಕೂಡಿದ್ದು, ವಸ್ತುನಿಷ್ಠತೆಯ ಕೊರತೆ ಮತ್ತು ಇನ್ನೂ ಮುಂದುವರಿದ ವಸಾಹತುಶಾಹಿ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿತ್ತು.

ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...