Homeಚಳವಳಿವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯು ಪ್ರಧಾನಿ ಮೋದಿಯ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶಿಸಿದ ಜೆಎನ್‌ಯು ವಿದ್ಯಾರ್ಥಿಗಳು!

ಪ್ರದರ್ಶನಕ್ಕೆ ತೊಂದರೆಯಾಗುವಂತೆ ವಿದ್ಯುತ್ ಕಟ್‌ ಮಾಡಿದ ವಿಶ್ವವಿದ್ಯಾಲಯದ ಆಡಳಿತ ಮಂಡಳಿ

- Advertisement -
- Advertisement -

ವಿಶ್ವವಿದ್ಯಾಲಯದ ಆಕ್ಷೇಪದ ನಡುವೆಯೂ ಜೆಎನ್‌ಯು ವಿದ್ಯಾರ್ಥಿಗಳು ಪ್ರಧಾನಿ ಮೋದಿ ಕುರಿತು ಬಿಬಿಸಿ ತಯಾರಿಸಿರುವ ‘ಇಂಡಿಯಾ – ದ ಮೋದಿ ಕ್ವಸ್ಚನ್’ ಸಾಕ್ಷ್ಯಚಿತ್ರವನ್ನು ಮಂಗಳವಾರ ರಾತ್ರಿ ಪ್ರದರ್ಶನ ಮಾಡಿದ್ದಾರೆ. ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನದಿಂದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ಉಂಟಾಗಬಹುದು, ಆದ್ದರಿಂದ ಪ್ರದರ್ಶನವನ್ನು ರದ್ದುಗೊಳಿಸಬೇಕು ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದರು.

ವಿದ್ಯಾರ್ಥಿ ಸಂಘವು ರಾತ್ರಿ ಒಂಬತ್ತು ಗಂಟೆಗೆ ಸಾಕ್ಷ್ಯಚಿತ್ರದ ಪ್ರದರ್ಶನ ಎಂದು ಹೇಳಿಕೊಂಡಿತ್ತು.‌ ಅದಕ್ಕಾಗಿ ವಿದ್ಯಾರ್ಥಿಗಳು ತಯಾರಿ ಕೂಡಾ ನಡೆಸಿದ್ದರು. ಆದರೆ, ಸುಮಾರು 8:30 ಕ್ಕೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ವಿಶ್ವವಿದ್ಯಾಲಯದ ವಿದ್ಯುತ್ ಕಡಿತ ಮಾಡಿತ್ತು.‌ ಹೀಗಾಗಿ ನೆರೆದಿದ್ದ ವಿದ್ಯಾರ್ಥಿಗಳು ತಮ್ಮ ತಮ್ಮ ಲ್ಯಾಪ್‌ಟಾಪ್ ಮೂಲಕ ಸ್ಥಳದಲ್ಲೇ ತಮ್ಮ ಸ್ನೇಹಿತರ ಗುಂಪಿನೊಂದಿಗೆ ಬಿಬಿಸಿ ಸಾಕ್ಷ್ಯಚಿತ್ರವನ್ನು ನೋಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಾಕ್ಷ್ಯಚಿತ್ರ ಪ್ರದರ್ಶನಕ್ಕೂ ಮೊದಲು ಮಾತನಾಡಿದ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್‌, “ಬಿಬಿಸಿ ತಯಾರಿಸಿರುವ ಸಾಕ್ಷ್ಯಚಿತ್ರ ಭಾರತದ ಯಾವ ಪ್ರದೇಶದಲ್ಲೂ ನಿಷೇಧವಾಗಿಲ್ಲ. ಸಾಮಾಜಿಕ ಮಾಧ್ಯಮಗಳಲ್ಲಿ ಅದನ್ನು ನೋಡಬಾರದು ಎಂದು ತಡೆಹಿಡಿದಿದ್ದು ಮಾತ್ರವಾಗಿದೆ. ಇದರರ್ಥ ಅದನ್ನು ನಿಷೇಧ ಎಂದಲ್ಲ. ಹೀಗಿರುವಾಗ ಸಾಕ್ಷ್ಯಚಿತ್ರವನ್ನು ಪ್ರದರ್ಶನ ಮಾಡಲು ಅನುಮತಿ ಯಾಕೆ ಪಡೆಯಬೇಕು?” ಎಂದು ಅವರು ಪ್ರಶ್ನಿಸಿದ್ದಾರೆ.

“ಪ್ರಜಾಪ್ರಭುತ್ವ ದೇಶದಲ್ಲಿ ಇರುವ ನಮಗೆ ಸಾಕ್ಷ್ಯಚಿತ್ರವೊಂದನ್ನು ನೋಡುವ ಹಕ್ಕಿಲ್ಲವೆ? ಪ್ರಜಾಪ್ರಭುತ್ವದ ಮೂಲವೇ ಜೆಎನ್‌ಯು ವಿಶ್ವವಿದ್ಯಾಲಯದಂತಹ ಸ್ಥಳವಾಗಿದೆ. ಇಲ್ಲೇ ಪ್ರಜಾಪ್ರಭುತ್ವವನ್ನು ಯಾಕೆ ತುಳಿಯುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.

ವಿದ್ಯಾರ್ಥಿಗಳು ಸಾಕ್ಷ್ಯಚಿತ್ರ ನೋಡುತ್ತಿದ್ದ ವೇಳೆ ಬಿಜೆಪಿಯ ವಿದ್ಯಾರ್ಥಿಯ ಸಂಘಟನೆಯಾದ ಎಬಿವಿಪಿ ಗೂಂಡಗಳು ಕಲ್ಲೆಸತ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ವಿದ್ಯಾರ್ಥಿಗಳ ಮೇಲೆ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.

ವಿದ್ಯಾರ್ಥಿ ಸಂಘವು ಸಾಕ್ಷ್ಯಚಿತ್ರದ ಪ್ರದರ್ಶನ ನಡೆಸುತ್ತಿದೆ ಎಂದು ಘೋಷಿಸುತ್ತಿದ್ದಂತೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಜೆಎನ್‌ಯು ಆಡಳಿತ, “ವಿದ್ಯಾರ್ಥಿ ಸಂಘದ ಹೆಸರಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಕರಪತ್ರವನ್ನು ಬಿಡುಗಡೆ ಮಾಡಿರುವುದು ಆಡಳಿತದ ಗಮನಕ್ಕೆ ಬಂದಿದೆ. ಈ ಕಾರ್ಯಕ್ರಮಕ್ಕೆ ಆಡಳಿತದಿಂದ ಯಾವುದೇ ಪೂರ್ವಾನುಮತಿ ಪಡೆದಿಲ್ಲ. ಇಂತಹ ಅನಧಿಕೃತ ಚಟುವಟಿಕೆಯು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಶಾಂತಿ ಮತ್ತು ಸಾಮರಸ್ಯವನ್ನು ಕದಡಬಹುದು. ಹೀಗಾಗಿ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸಬೇಕು. ಅದು ವಿಫಲವಾದರೆ ವಿಶ್ವವಿದ್ಯಾನಿಲಯದ ನಿಯಮಗಳ ಪ್ರಕಾರ ಕಟ್ಟುನಿಟ್ಟಾದ ಶಿಸ್ತು ಕ್ರಮವನ್ನು ಪ್ರಾರಂಭಿಸಬಹುದು” ಎಂದು ಎಚ್ಚರಿಸಿತ್ತು.

ಆದರೆ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯು ಅದನ್ನು ಪರಿಗಣಿಸದೆ ಅಧ್ಯಕ್ಷೆ ಐಷೆ ಘೋಷ್‌ ಅವರು,“ಅತಿದೊಡ್ಡ ‘ಪ್ರಜಾಪ್ರಭುತ್ವ’ದ ‘ಚುನಾಯಿತ ಸರ್ಕಾರ’ವು ‘ನಿಷೇಧಿಸಿದ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕಾಗಿ ನಮ್ಮೊಂದಿಗೆ ಸೇರಿ.” ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರೆ.

2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಡಿಯಲ್ಲಿ ಕೇಂದ್ರದ CAA ನಂತಹ ಕೆಲವು ನೀತಿಗಳನ್ನು ಒಳಗೊಂಡಿರುವ ಬಗ್ಗೆ “ಭಾರತ: ಮೋದಿ ಪ್ರಶ್ನೆ” ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರವು ಚರ್ಚಿಸಿದೆ. ಸಾಕ್ಷ್ಯಚಿತ್ರದ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ಸಾಕ್ಷ್ಯಚಿತ್ರವು ಪಕ್ಷಪಾತದಿಂದ ಕೂಡಿದ್ದು, ವಸ್ತುನಿಷ್ಠತೆಯ ಕೊರತೆ ಮತ್ತು ಇನ್ನೂ ಮುಂದುವರಿದ ವಸಾಹತುಶಾಹಿ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸುತ್ತದೆ” ಎಂದು ಹೇಳಿತ್ತು.

ಇದನ್ನೂ ಓದಿ: ಜೆಎನ್‌ಯು ವಿದ್ಯಾರ್ಥಿ ಸಂಘದಿಂದ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ; ರದ್ದು ಮಾಡಿ ಎಂದ ವಿಶ್ವವಿದ್ಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...