Homeಮುಖಪುಟಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

ಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಉಪಕುಲಪತಿಗಳಿಗೆ ವಿಭಾಗಗಳ ಅಧ್ಯಕ್ಷರನ್ನು ನೇಮಿಸುವ ಅಧಿಕಾರವಿಲ್ಲ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ, ವಿವಿಧ ವಿಭಾಗಗಳಿಗೆ ಉಪಕುಲಪತಿ ಪ್ರೊ.ಎಂ.ಜಗದೇಶ್ ಕುಮಾರ್ ಅವರು ನೇಮಿಸಿದ್ದ ಒಂಬತ್ತು ಅಧ್ಯಕ್ಷರುಗಳು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕೋರ್ಟ್‌ ನಿರ್ಬಂಧ ಹೇರಿದೆ.

ನ್ಯಾಯಮೂರ್ತಿ ರಾಜೀವ್ ಶಕ್ಧೇರ್ ಮತ್ತು ನ್ಯಾಯಮೂರ್ತಿ ತಲವಂತ್ ಸಿಂಗ್ ಅವರ ವಿಭಾಗೀಯ ಪೀಠವು, ಅಧ್ಯಕ್ಷರನ್ನು ನೇಮಿಸುವ ಅಧಿಕಾರವು ಕಾರ್ಯಕಾರಿ ಮಂಡಳಿಗೆ ಮಾತ್ರ ಇದೆಯೇ ಹೊರತು ಉಪಕುಲಪತಿಗಳಿಗೆ ಇಲ್ಲ. ಹೀಗಾಗಿ ಉಪ ಕುಲಪತಿಗಳಿಂದ ನೇಮಕವಾಗಿರುವವರು, ಆಯ್ಕೆ ಸಮಿತಿಗಳ ಸಭೆ ನಡೆಸುವುದು, ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ.

ಪ್ರೊಫೆಸರ್ ಅತುಲ್ ಸೂದ್ ಅವರು ಕುಲಪತಿಗಳು ಮಾಡಿದ ಒಂಬತ್ತು ನೇಮಕಾತಿಗಳಿಗೆ ಕಾರ್ಯಕಾರಿ ಮಂಡಳಿಯ ಅನುಮೋದನೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ, ಉಪ ಕುಲಪತಿಗಳು ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಅಧ್ಯಕ್ಷರನ್ನಾಗಿ ಪ್ರಾಧ್ಯಾಪಕರನ್ನು ನೇಮಿಸುವ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯ ಶಾಸನ 4 (5) ರ ಅಡಿಯಲ್ಲಿ ಕುಲಪತಿಗಳು ಅಧಿಕಾರವನ್ನು ಚಲಾಯಿಸಿದ್ದಾರೆ ಎಂದು ವಿವಿಯು ವಾದಿಸಿತ್ತು. ಆದರೆ ಈ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. “ತುರ್ತು ಪರಿಸ್ಥಿತಿಯ ಕಾರಣದಲ್ಲಿ” ತಕ್ಷಣದ ಕ್ರಮ ಅಗತ್ಯವಿದ್ದಾಗ ಮಾತ್ರ ವಿಸಿ ಅಂತಹ ಅಧಿಕಾರವನ್ನು ಚಲಾಯಿಸಬಹುದು ಎಂದು ಕೋರ್ಟ್‌ ಹೇಳಿದೆ.

ಕಾರ್ಯಕಾರಿ ಮಂಡಳಿಯ 296ನೇ ಸಭೆಯ ಕಾರ್ಯಸೂಚಿಗೆ ಸೂದ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಗಮನಿಸಿದ ನ್ಯಾಯಾಲಯ, ವಿಸಿ ಅವರು ಮಾಡಿರುವ ನೇಮಕದಲ್ಲಿ ದೋಷವಿದೆ ಎಂದು ಹೇಳಿದೆ.

ವಿಸಿ ಮಾಡಿದ ಒಂಬತ್ತು ನೇಮಕಾತಿಗಳಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್‌ನ ಏಕ ಪೀಠ ನಿರಾಕರಿಸಿದ ನಂತರ, ಅಕ್ಟೋಬರ್ 08 ರಂದು ಸ್ಪ್ಯಾನಿಷ್, ಪೋರ್ಚುಗೀಸ್, ಇಟಾಲಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ಸ್ಟಡೀಸ್/ಸ್ಕೂಲ್ ಆಫ್ ಲ್ಯಾಂಗ್ವೇಜ್, ಸಾಹಿತ್ಯ ಮತ್ತು ಸಾಂಸ್ಕೃತಿಕ ಅಧ್ಯಯನಗಳ ಕೇಂದ್ರದ ಅಧ್ಯಕ್ಷರಾಗಿ ಇನ್ನೊಬ್ಬ ವ್ಯಕ್ತಿಯನ್ನು ನೇಮಿಸಲು ಅವರು ಮುಂದಾದರು ಎಂದು ಸೂದ್ ಅವರ ವಕೀಲ ಅಭಿಕ್ ಚಿಮ್ನಿ ಸಲ್ಲಿಸಿದ ಸಲ್ಲಿಕೆಯನ್ನು ವಿಭಾಗೀಯ ಪೀಠವು ಗಮನಿಸಿದೆ.

ಏಕ ನ್ಯಾಯಾಧೀಶರ ಮುಂದೆ ವಿಷಯ ಬಾಕಿ ಇರುವ ಕಾರಣ, ಸೂದ್ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ನವೆಂಬರ್ 10 ರಂದು ನಡೆಯುವ ವಿಚಾರಣೆಗೆ ಆ ವಿಷಯವನ್ನೂ ನ್ಯಾಯಾಲಯದ ಮುಂದೆ ನಿರ್ದೇಶನಕ್ಕಾಗಿ ಪಟ್ಟಿ ಮಾಡಿದೆ.


ಇದನ್ನೂ ಓದಿ: ದೇಶದಲ್ಲಿ ಕೋವಿಡ್ ಇಳಿಮುಖ: ಕಳೆದ 24 ಗಂಟೆಗಳಲ್ಲಿ 10,423 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...