Homeಮುಖಪುಟಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

ಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಉಪಕುಲಪತಿಗಳಿಗೆ ವಿಭಾಗಗಳ ಅಧ್ಯಕ್ಷರನ್ನು ನೇಮಿಸುವ ಅಧಿಕಾರವಿಲ್ಲ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ, ವಿವಿಧ ವಿಭಾಗಗಳಿಗೆ ಉಪಕುಲಪತಿ ಪ್ರೊ.ಎಂ.ಜಗದೇಶ್ ಕುಮಾರ್ ಅವರು ನೇಮಿಸಿದ್ದ ಒಂಬತ್ತು ಅಧ್ಯಕ್ಷರುಗಳು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕೋರ್ಟ್‌ ನಿರ್ಬಂಧ ಹೇರಿದೆ.

ನ್ಯಾಯಮೂರ್ತಿ ರಾಜೀವ್ ಶಕ್ಧೇರ್ ಮತ್ತು ನ್ಯಾಯಮೂರ್ತಿ ತಲವಂತ್ ಸಿಂಗ್ ಅವರ ವಿಭಾಗೀಯ ಪೀಠವು, ಅಧ್ಯಕ್ಷರನ್ನು ನೇಮಿಸುವ ಅಧಿಕಾರವು ಕಾರ್ಯಕಾರಿ ಮಂಡಳಿಗೆ ಮಾತ್ರ ಇದೆಯೇ ಹೊರತು ಉಪಕುಲಪತಿಗಳಿಗೆ ಇಲ್ಲ. ಹೀಗಾಗಿ ಉಪ ಕುಲಪತಿಗಳಿಂದ ನೇಮಕವಾಗಿರುವವರು, ಆಯ್ಕೆ ಸಮಿತಿಗಳ ಸಭೆ ನಡೆಸುವುದು, ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ.

ಪ್ರೊಫೆಸರ್ ಅತುಲ್ ಸೂದ್ ಅವರು ಕುಲಪತಿಗಳು ಮಾಡಿದ ಒಂಬತ್ತು ನೇಮಕಾತಿಗಳಿಗೆ ಕಾರ್ಯಕಾರಿ ಮಂಡಳಿಯ ಅನುಮೋದನೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ, ಉಪ ಕುಲಪತಿಗಳು ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಅಧ್ಯಕ್ಷರನ್ನಾಗಿ ಪ್ರಾಧ್ಯಾಪಕರನ್ನು ನೇಮಿಸುವ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯ ಶಾಸನ 4 (5) ರ ಅಡಿಯಲ್ಲಿ ಕುಲಪತಿಗಳು ಅಧಿಕಾರವನ್ನು ಚಲಾಯಿಸಿದ್ದಾರೆ ಎಂದು ವಿವಿಯು ವಾದಿಸಿತ್ತು. ಆದರೆ ಈ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. “ತುರ್ತು ಪರಿಸ್ಥಿತಿಯ ಕಾರಣದಲ್ಲಿ” ತಕ್ಷಣದ ಕ್ರಮ ಅಗತ್ಯವಿದ್ದಾಗ ಮಾತ್ರ ವಿಸಿ ಅಂತಹ ಅಧಿಕಾರವನ್ನು ಚಲಾಯಿಸಬಹುದು ಎಂದು ಕೋರ್ಟ್‌ ಹೇಳಿದೆ.

ಕಾರ್ಯಕಾರಿ ಮಂಡಳಿಯ 296ನೇ ಸಭೆಯ ಕಾರ್ಯಸೂಚಿಗೆ ಸೂದ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಗಮನಿಸಿದ ನ್ಯಾಯಾಲಯ, ವಿಸಿ ಅವರು ಮಾಡಿರುವ ನೇಮಕದಲ್ಲಿ ದೋಷವಿದೆ ಎಂದು ಹೇಳಿದೆ.

ವಿಸಿ ಮಾಡಿದ ಒಂಬತ್ತು ನೇಮಕಾತಿಗಳಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್‌ನ ಏಕ ಪೀಠ ನಿರಾಕರಿಸಿದ ನಂತರ, ಅಕ್ಟೋಬರ್ 08 ರಂದು ಸ್ಪ್ಯಾನಿಷ್, ಪೋರ್ಚುಗೀಸ್, ಇಟಾಲಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ಸ್ಟಡೀಸ್/ಸ್ಕೂಲ್ ಆಫ್ ಲ್ಯಾಂಗ್ವೇಜ್, ಸಾಹಿತ್ಯ ಮತ್ತು ಸಾಂಸ್ಕೃತಿಕ ಅಧ್ಯಯನಗಳ ಕೇಂದ್ರದ ಅಧ್ಯಕ್ಷರಾಗಿ ಇನ್ನೊಬ್ಬ ವ್ಯಕ್ತಿಯನ್ನು ನೇಮಿಸಲು ಅವರು ಮುಂದಾದರು ಎಂದು ಸೂದ್ ಅವರ ವಕೀಲ ಅಭಿಕ್ ಚಿಮ್ನಿ ಸಲ್ಲಿಸಿದ ಸಲ್ಲಿಕೆಯನ್ನು ವಿಭಾಗೀಯ ಪೀಠವು ಗಮನಿಸಿದೆ.

ಏಕ ನ್ಯಾಯಾಧೀಶರ ಮುಂದೆ ವಿಷಯ ಬಾಕಿ ಇರುವ ಕಾರಣ, ಸೂದ್ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ನವೆಂಬರ್ 10 ರಂದು ನಡೆಯುವ ವಿಚಾರಣೆಗೆ ಆ ವಿಷಯವನ್ನೂ ನ್ಯಾಯಾಲಯದ ಮುಂದೆ ನಿರ್ದೇಶನಕ್ಕಾಗಿ ಪಟ್ಟಿ ಮಾಡಿದೆ.


ಇದನ್ನೂ ಓದಿ: ದೇಶದಲ್ಲಿ ಕೋವಿಡ್ ಇಳಿಮುಖ: ಕಳೆದ 24 ಗಂಟೆಗಳಲ್ಲಿ 10,423 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...