Homeಮುಖಪುಟಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

ಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಉಪಕುಲಪತಿಗಳಿಗೆ ವಿಭಾಗಗಳ ಅಧ್ಯಕ್ಷರನ್ನು ನೇಮಿಸುವ ಅಧಿಕಾರವಿಲ್ಲ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ, ವಿವಿಧ ವಿಭಾಗಗಳಿಗೆ ಉಪಕುಲಪತಿ ಪ್ರೊ.ಎಂ.ಜಗದೇಶ್ ಕುಮಾರ್ ಅವರು ನೇಮಿಸಿದ್ದ ಒಂಬತ್ತು ಅಧ್ಯಕ್ಷರುಗಳು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕೋರ್ಟ್‌ ನಿರ್ಬಂಧ ಹೇರಿದೆ.

ನ್ಯಾಯಮೂರ್ತಿ ರಾಜೀವ್ ಶಕ್ಧೇರ್ ಮತ್ತು ನ್ಯಾಯಮೂರ್ತಿ ತಲವಂತ್ ಸಿಂಗ್ ಅವರ ವಿಭಾಗೀಯ ಪೀಠವು, ಅಧ್ಯಕ್ಷರನ್ನು ನೇಮಿಸುವ ಅಧಿಕಾರವು ಕಾರ್ಯಕಾರಿ ಮಂಡಳಿಗೆ ಮಾತ್ರ ಇದೆಯೇ ಹೊರತು ಉಪಕುಲಪತಿಗಳಿಗೆ ಇಲ್ಲ. ಹೀಗಾಗಿ ಉಪ ಕುಲಪತಿಗಳಿಂದ ನೇಮಕವಾಗಿರುವವರು, ಆಯ್ಕೆ ಸಮಿತಿಗಳ ಸಭೆ ನಡೆಸುವುದು, ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ.

ಪ್ರೊಫೆಸರ್ ಅತುಲ್ ಸೂದ್ ಅವರು ಕುಲಪತಿಗಳು ಮಾಡಿದ ಒಂಬತ್ತು ನೇಮಕಾತಿಗಳಿಗೆ ಕಾರ್ಯಕಾರಿ ಮಂಡಳಿಯ ಅನುಮೋದನೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ, ಉಪ ಕುಲಪತಿಗಳು ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಅಧ್ಯಕ್ಷರನ್ನಾಗಿ ಪ್ರಾಧ್ಯಾಪಕರನ್ನು ನೇಮಿಸುವ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯ ಶಾಸನ 4 (5) ರ ಅಡಿಯಲ್ಲಿ ಕುಲಪತಿಗಳು ಅಧಿಕಾರವನ್ನು ಚಲಾಯಿಸಿದ್ದಾರೆ ಎಂದು ವಿವಿಯು ವಾದಿಸಿತ್ತು. ಆದರೆ ಈ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. “ತುರ್ತು ಪರಿಸ್ಥಿತಿಯ ಕಾರಣದಲ್ಲಿ” ತಕ್ಷಣದ ಕ್ರಮ ಅಗತ್ಯವಿದ್ದಾಗ ಮಾತ್ರ ವಿಸಿ ಅಂತಹ ಅಧಿಕಾರವನ್ನು ಚಲಾಯಿಸಬಹುದು ಎಂದು ಕೋರ್ಟ್‌ ಹೇಳಿದೆ.

ಕಾರ್ಯಕಾರಿ ಮಂಡಳಿಯ 296ನೇ ಸಭೆಯ ಕಾರ್ಯಸೂಚಿಗೆ ಸೂದ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಗಮನಿಸಿದ ನ್ಯಾಯಾಲಯ, ವಿಸಿ ಅವರು ಮಾಡಿರುವ ನೇಮಕದಲ್ಲಿ ದೋಷವಿದೆ ಎಂದು ಹೇಳಿದೆ.

ವಿಸಿ ಮಾಡಿದ ಒಂಬತ್ತು ನೇಮಕಾತಿಗಳಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್‌ನ ಏಕ ಪೀಠ ನಿರಾಕರಿಸಿದ ನಂತರ, ಅಕ್ಟೋಬರ್ 08 ರಂದು ಸ್ಪ್ಯಾನಿಷ್, ಪೋರ್ಚುಗೀಸ್, ಇಟಾಲಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ಸ್ಟಡೀಸ್/ಸ್ಕೂಲ್ ಆಫ್ ಲ್ಯಾಂಗ್ವೇಜ್, ಸಾಹಿತ್ಯ ಮತ್ತು ಸಾಂಸ್ಕೃತಿಕ ಅಧ್ಯಯನಗಳ ಕೇಂದ್ರದ ಅಧ್ಯಕ್ಷರಾಗಿ ಇನ್ನೊಬ್ಬ ವ್ಯಕ್ತಿಯನ್ನು ನೇಮಿಸಲು ಅವರು ಮುಂದಾದರು ಎಂದು ಸೂದ್ ಅವರ ವಕೀಲ ಅಭಿಕ್ ಚಿಮ್ನಿ ಸಲ್ಲಿಸಿದ ಸಲ್ಲಿಕೆಯನ್ನು ವಿಭಾಗೀಯ ಪೀಠವು ಗಮನಿಸಿದೆ.

ಏಕ ನ್ಯಾಯಾಧೀಶರ ಮುಂದೆ ವಿಷಯ ಬಾಕಿ ಇರುವ ಕಾರಣ, ಸೂದ್ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ನವೆಂಬರ್ 10 ರಂದು ನಡೆಯುವ ವಿಚಾರಣೆಗೆ ಆ ವಿಷಯವನ್ನೂ ನ್ಯಾಯಾಲಯದ ಮುಂದೆ ನಿರ್ದೇಶನಕ್ಕಾಗಿ ಪಟ್ಟಿ ಮಾಡಿದೆ.


ಇದನ್ನೂ ಓದಿ: ದೇಶದಲ್ಲಿ ಕೋವಿಡ್ ಇಳಿಮುಖ: ಕಳೆದ 24 ಗಂಟೆಗಳಲ್ಲಿ 10,423 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...