Homeಮುಖಪುಟಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

ಜೆಎನ್‌ಯು ಉಪಕುಲಪತಿಗಳು ಅಧಿಕಾರವಿಲ್ಲದೆ ನೇಮಕಾತಿ ಮಾಡಿದ್ದಾರೆ: ದೆಹಲಿ ಹೈಕೋರ್ಟ್

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ (ಜೆಎನ್‌ಯು)ದ ಉಪಕುಲಪತಿಗಳಿಗೆ ವಿಭಾಗಗಳ ಅಧ್ಯಕ್ಷರನ್ನು ನೇಮಿಸುವ ಅಧಿಕಾರವಿಲ್ಲ ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹೀಗಾಗಿ, ವಿವಿಧ ವಿಭಾಗಗಳಿಗೆ ಉಪಕುಲಪತಿ ಪ್ರೊ.ಎಂ.ಜಗದೇಶ್ ಕುಮಾರ್ ಅವರು ನೇಮಿಸಿದ್ದ ಒಂಬತ್ತು ಅಧ್ಯಕ್ಷರುಗಳು ಯಾವುದೇ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಕೋರ್ಟ್‌ ನಿರ್ಬಂಧ ಹೇರಿದೆ.

ನ್ಯಾಯಮೂರ್ತಿ ರಾಜೀವ್ ಶಕ್ಧೇರ್ ಮತ್ತು ನ್ಯಾಯಮೂರ್ತಿ ತಲವಂತ್ ಸಿಂಗ್ ಅವರ ವಿಭಾಗೀಯ ಪೀಠವು, ಅಧ್ಯಕ್ಷರನ್ನು ನೇಮಿಸುವ ಅಧಿಕಾರವು ಕಾರ್ಯಕಾರಿ ಮಂಡಳಿಗೆ ಮಾತ್ರ ಇದೆಯೇ ಹೊರತು ಉಪಕುಲಪತಿಗಳಿಗೆ ಇಲ್ಲ. ಹೀಗಾಗಿ ಉಪ ಕುಲಪತಿಗಳಿಂದ ನೇಮಕವಾಗಿರುವವರು, ಆಯ್ಕೆ ಸಮಿತಿಗಳ ಸಭೆ ನಡೆಸುವುದು, ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವಂತಿಲ್ಲ ಎಂದು ಹೇಳಿದೆ.

ಪ್ರೊಫೆಸರ್ ಅತುಲ್ ಸೂದ್ ಅವರು ಕುಲಪತಿಗಳು ಮಾಡಿದ ಒಂಬತ್ತು ನೇಮಕಾತಿಗಳಿಗೆ ಕಾರ್ಯಕಾರಿ ಮಂಡಳಿಯ ಅನುಮೋದನೆಯನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ, ಉಪ ಕುಲಪತಿಗಳು ವಿಭಾಗಗಳು ಅಥವಾ ವಿಶೇಷ ವಿಭಾಗಗಳಿಗೆ ಅಧ್ಯಕ್ಷರನ್ನಾಗಿ ಪ್ರಾಧ್ಯಾಪಕರನ್ನು ನೇಮಿಸುವ ಕುರಿತು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ವಿಶ್ವವಿದ್ಯಾನಿಲಯ ಶಾಸನ 4 (5) ರ ಅಡಿಯಲ್ಲಿ ಕುಲಪತಿಗಳು ಅಧಿಕಾರವನ್ನು ಚಲಾಯಿಸಿದ್ದಾರೆ ಎಂದು ವಿವಿಯು ವಾದಿಸಿತ್ತು. ಆದರೆ ಈ ವಾದವನ್ನು ನ್ಯಾಯಾಲಯ ತಳ್ಳಿಹಾಕಿದೆ. “ತುರ್ತು ಪರಿಸ್ಥಿತಿಯ ಕಾರಣದಲ್ಲಿ” ತಕ್ಷಣದ ಕ್ರಮ ಅಗತ್ಯವಿದ್ದಾಗ ಮಾತ್ರ ವಿಸಿ ಅಂತಹ ಅಧಿಕಾರವನ್ನು ಚಲಾಯಿಸಬಹುದು ಎಂದು ಕೋರ್ಟ್‌ ಹೇಳಿದೆ.

ಕಾರ್ಯಕಾರಿ ಮಂಡಳಿಯ 296ನೇ ಸಭೆಯ ಕಾರ್ಯಸೂಚಿಗೆ ಸೂದ್ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಗಮನಿಸಿದ ನ್ಯಾಯಾಲಯ, ವಿಸಿ ಅವರು ಮಾಡಿರುವ ನೇಮಕದಲ್ಲಿ ದೋಷವಿದೆ ಎಂದು ಹೇಳಿದೆ.

ವಿಸಿ ಮಾಡಿದ ಒಂಬತ್ತು ನೇಮಕಾತಿಗಳಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್‌ನ ಏಕ ಪೀಠ ನಿರಾಕರಿಸಿದ ನಂತರ, ಅಕ್ಟೋಬರ್ 08 ರಂದು ಸ್ಪ್ಯಾನಿಷ್, ಪೋರ್ಚುಗೀಸ್, ಇಟಾಲಿಯನ್ ಮತ್ತು ಲ್ಯಾಟಿನ್ ಅಮೇರಿಕನ್ ಸ್ಟಡೀಸ್/ಸ್ಕೂಲ್ ಆಫ್ ಲ್ಯಾಂಗ್ವೇಜ್, ಸಾಹಿತ್ಯ ಮತ್ತು ಸಾಂಸ್ಕೃತಿಕ ಅಧ್ಯಯನಗಳ ಕೇಂದ್ರದ ಅಧ್ಯಕ್ಷರಾಗಿ ಇನ್ನೊಬ್ಬ ವ್ಯಕ್ತಿಯನ್ನು ನೇಮಿಸಲು ಅವರು ಮುಂದಾದರು ಎಂದು ಸೂದ್ ಅವರ ವಕೀಲ ಅಭಿಕ್ ಚಿಮ್ನಿ ಸಲ್ಲಿಸಿದ ಸಲ್ಲಿಕೆಯನ್ನು ವಿಭಾಗೀಯ ಪೀಠವು ಗಮನಿಸಿದೆ.

ಏಕ ನ್ಯಾಯಾಧೀಶರ ಮುಂದೆ ವಿಷಯ ಬಾಕಿ ಇರುವ ಕಾರಣ, ಸೂದ್ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ. ನವೆಂಬರ್ 10 ರಂದು ನಡೆಯುವ ವಿಚಾರಣೆಗೆ ಆ ವಿಷಯವನ್ನೂ ನ್ಯಾಯಾಲಯದ ಮುಂದೆ ನಿರ್ದೇಶನಕ್ಕಾಗಿ ಪಟ್ಟಿ ಮಾಡಿದೆ.


ಇದನ್ನೂ ಓದಿ: ದೇಶದಲ್ಲಿ ಕೋವಿಡ್ ಇಳಿಮುಖ: ಕಳೆದ 24 ಗಂಟೆಗಳಲ್ಲಿ 10,423 ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...