HomeಮುಖಪುಟJNU ಮೇಲೆ ದಾಳಿ ಮಾಡಿದ್ದು ನಾವೇ: ಹಿಂದೂ ರಕ್ಷಾ ದಳದ ಪಿಂಕಿ ಚೌಧರಿ...

JNU ಮೇಲೆ ದಾಳಿ ಮಾಡಿದ್ದು ನಾವೇ: ಹಿಂದೂ ರಕ್ಷಾ ದಳದ ಪಿಂಕಿ ಚೌಧರಿ…

- Advertisement -
- Advertisement -

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲಿನ ದಾಳಿಯ ಜವಾಬ್ದಾರಿಯನ್ನು ಹಿಂದೂ ರಕ್ಷಾ ದಳ ಎಂಬ ಅಪರಿಚಿತ ಗುಂಪು ವಹಿಸಿಕೊಂಡಿದೆ. ಗುಂಪಿನ ನಾಯಕ ಪಿಂಕಿ ಚೌಧರಿ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದಾರೆ.

“ಜೆಎನ್‌ಯು ರಾಷ್ಟ್ರ ವಿರೋಧಿ ಚಟುವಟಿಕೆಗಳ ಕೇಂದ್ರವಾಗಿದೆ, ಇದನ್ನು ನಾವು ಸಹಿಸುವುದಿಲ್ಲ. ಜೆಎನ್‌ಯುನಲ್ಲಿ ನಡೆದ ದಾಳಿಯ ಸಂಪೂರ್ಣ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ ಮತ್ತು ದಾಳಿ ಮಾಡಿದವರು ನಮ್ಮ ಕಾರ್ಯಕರ್ತರು ಎಂದು ಹೇಳಲು ಬಯಸುತ್ತೇವೆ” ಎಂದು ಚೌಧರಿ ವೀಡಿಯೊದಲ್ಲಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ವಿಡಿಯೋ ನೋಡಿ…

ಚೌಧರಿಯವರ ಹೇಳಿಕೆ ಆಧಾರದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರು ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ಗುರುತಿಸಲು ವಿಡಿಯೋ ತುಣುಕುಗಳ ಆಧಾರದಲ್ಲಿ ಮುಖ ಗುರುತಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಭಾನುವಾರ ನಡೆದ ಹಿಂಸಾಚಾರದಲ್ಲಿ JNUSU ಅಧ್ಯಕ್ಷ ಐಶಾ ಘೋಷ್‌ ಸೇರಿದಂತೆ 34 ಜನ ಗಾಯಗೊಂಡಿದ್ದರು. ಆ ಸಂದರ್ಭದಲ್ಲಿ ಹಿಂಸಾಚಾರವನ್ನು ತಡೆಯಲು ಪೊಲೀಸರು ಏನೂ ಮಾಡಿಲ್ಲ ಎಂದು ಕೆಲವು ವಿದ್ಯಾರ್ಥಿಗಳು ಆರೋಪಿಸಿದರು.

ದಾಳಿಯನ್ನು ಎಬಿವಿಪಿ ಕಾರ್ಯಕರ್ತರು ಮಾಡಿದ್ದಾರೆ ಎಂದು ವಿದ್ಯಾರ್ಥಿ ಸಂಘ ಆರೋಪಿಸಿತ್ತು. ಅದಕ್ಕೆ ಹಲವು ಫೋಟೊಗಳು, ವಿಡಿಯೋಗಳು ಮತ್ತು ವಾಟ್ಸಾಪ್‌ ಚಾಟ್‌ಗಳ ಸ್ಕ್ರೀನ್‌ ಶಾಟ್‌ಗಳಲ್ಲಿ ಸಾಕ್ಷಿಯಾಗಿ ತೋರಿಸಿತ್ತು. ಆದರೆ ಎಬಿವಿಪಿ ಅದನ್ನು ನಿರಾಕರಿಸಿ JNUSU ಮೇಲೆ ಆರೋಪ ಮಾಡಿತ್ತು.

ಇದನ್ನೂ ಓದಿ: ಮುಸುಕುಧಾರಿಗಳು ನಮ್ಮವರು, ಆತ್ಮರಕ್ಷಣೆಗಾಗಿ ಸಶ್ತ್ರಗಳನ್ನು ಹೊಂದಿದ್ದರು : ಒಪ್ಪಿಕೊಂಡ ABVP ದೆಹಲಿ ಜಂಟಿ ಕಾರ್ಯದರ್ಶಿ!

ಜೆಎನ್‌ಯು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರವನ್ನು ಖಂಡಿಸಿ ಸೋಮವಾರ ಭಾರತದಾದ್ಯಂತ ಪ್ರತಿಭಟನೆ ದಾಖಲಾಗಿದೆ. ಸಾವಿರಾರು ಪ್ರದೇಶಗಲ್ಲಿ ಹೋರಾಟ ನಡೆದರೆ ಮುಂಬೈನಲ್ಲಿ 1,000 ಕ್ಕೂ ಹೆಚ್ಚು ಜನರು ದಿನವೀಡಿ ಪ್ರತಿಭಟನೆ ನಡೆಸಿದ್ದಾರೆ. ಬಾಲಿವುಡ್‌ನ ಖ್ಯಾತನಾಮರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸತ್ಯ‌ವನ್ನು ಜನರಿಗೆ ತಲುಪಿಸುವ ಹೊಣೆಗಾರಿಕೆ ಈ ಪತ್ರಿಕೆಯ ಮೂಲಾಧಾರ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...