Homeಚಳವಳಿಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ - ಜೆಎನ್‌ಯು ವಿದ್ಯಾರ್ಥಿಗಳ ಗುಡುಗು...

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ – ಜೆಎನ್‌ಯು ವಿದ್ಯಾರ್ಥಿಗಳ ಗುಡುಗು…

- Advertisement -
- Advertisement -

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ. ಸರ್ಕಾರದ ಜನವಿರೋಧಿ ನೀತಿಗಳನ್ನು ಮತ್ತಷ್ಟು ಪ್ರಶ್ನಿಸುತ್ತೇವೆ. ಶುಲ್ಕ ಹೆಚ್ಚಳದ ವಿರುದ್ಧ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿಕೊಳ್ಳಲು ಹೋರಾಡುತ್ತೇವೆ ಎಂದು ಜೆಎನ್‌ಯು ವಿದ್ಯಾರ್ಥಿಗಳು ಗುಡುಗಿದ್ದಾರೆ.

ಇಂದು ಸಬರಮತಿ ಹಾಸ್ಟೆಲ್‌ ಎದುರು ನಡೆದ ಜೆಎನ್‌ಯು ಪ್ರಾಧ್ಯಾಪಕರ ಸಂಘ ಮತ್ತು ವಿದ್ಯಾರ್ಥಿ ಸಂಘದ ಭಾರೀ ಸಭೆ ನಡೆಸಿ ಹೋರಾಟವನ್ನು ತೀವ್ರಗೊಳಿಸುವ ಸಂಕಲ್ಪ ತೊಟ್ಟಿದ್ದಾರೆ.

ಸಭೆಗೆ ಜೆನ್‌ಯು ಹಿರಿಯ ವಿದ್ಯಾರ್ಥಿಗಳಾದ ಯೋಗೇಂದ್ರ ಯಾದವ್‌, ಕವಿತಾ ಕೃಷ್ಣನ್‌, ಶಾ ಅಲಂ ಖಾನ್‌, ಕನ್ಹಯ್ಯ ಕುಮಾರ್‌ ಸೇರಿದಂತೆ ಹಲವರು ಭಾಗವಹಿಸಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇನ್ನೊಂದೆಡೆ ಸೀತಾರಾಮ್ ಯೆಚೂರಿ ಮಾತಾಡಿ, ಜೆಎನ್‌ಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಒಗ್ಗಟ್ಟನ್ನು ತೋರಿಸಲು ನಾನು ಬಂದಿದ್ದೇನೆ. ನಾನು JNU ಹಿಂಸಾಚಾರವನ್ನು ಖಂಡಿಸುತ್ತೇನೆ. ಇದರಿಂದ ಕುಲಪತಿಗಳು ವಿದ್ಯಾರ್ಥಿಗಳನ್ನು ಮೌನಗೊಳಿಸಬಹುದೆಂದು ಭಾವಿಸಿದರೆ ಅದು ಆಗುವುದಿಲ್ಲ. ಕೂಡಲೇ ಕುಲಪತಿಯನ್ನು ವಜಾ ಮಾಡುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಗುರುತಿಸಿ ಶಿಕ್ಷಿಸುವುದು ಮತ್ತು ಸರ್ಕಾರ ಶುಲ್ಕ ಹೆಚ್ಚಳದಿಂದ ಹಿಂದೆ ಸರಿಯಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ.

ಈ ಸರ್ಕಾರದ ವಕ್ತಾರನಾಗಿ ಜೆಎನ್‌ಯುನಲ್ಲಿ ವಿಸಿಯಾಗಿರುವ ಈ ಜಗದೀಶ್ ಕುಮಾರ್, ಒಂದು ವೇಳೆ ನ್ಯಾಯಯುತ ನೇಮಕಾತಿ ನಡೆದಲ್ಲಿ ಈತ ಗುಮಾಸ್ತನ ಕೆಲಸವನ್ನು ಸಹ ಪಡೆಯುವುದಿಲ್ಲ. ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಜೆಎನ್‌ಯುನಲ್ಲಿನ ಹಿಂಸಾಚಾರವು ‘ನೋವಿನಿಂದ ಕೂಡಿದೆ’ ಎಂದು ಜೆಎನ್‌ಯು ವಿಸಿ ಜಗದೀಶ್ ಕುಮಾರ್ ಹೇಳುತ್ತಾರೆ: ಹೌದು, ತುಂಬಾ ನೋವಿನಿಂದ ಕೂಡಿದೆ. ಆದರೆ ಅವರು ಇದುವರೆಗೂ ಗಾಯಗೊಂಡ ಯಾವುದೇ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಭೇಟಿ ಮಾಡಿಲ್ಲ. ಭಾನುವಾರ ಸಂಜೆ 4.30 ರಿಂದ 7.45 ರ ನಡುವೆ ಅವರು ಪೊಲೀಸರಿಗಾಗಿ ಅಥವಾ ಸಿಬ್ಬಂದಿಗೆ ಭದ್ರತೆಗಾಗಿ ಕರೆ ನೀಡದಿರುವುದು ತುಂಬಾ ನೋವಿನಿಂದ ಕೂಡಿದೆ! ನಾಚಿಕೆಯಾಗಬೇಕು ನಿಮಗೆ ಎಂದು ರಾಜ್‌ದೀಪ್‌ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾ ಅಲಂ ಖಾನ್‌ರವರು ಜೆಎನ್‌ಯುನಲ್ಲಿ ಮಾತನಾಡುತ್ತಾ, ಜೆಎನ್‌ಯು ಆಕ್ರಮಣಕ್ಕೆ ಒಳಗಾಗಿದೆ ಏಕೆಂದರೆ ಅದು ದುರಾಶೆ ಮತ್ತು ಮೂರ್ಖತನವನ್ನು ಪ್ರಶ್ನಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...