Homeಚಳವಳಿಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ - ಜೆಎನ್‌ಯು ವಿದ್ಯಾರ್ಥಿಗಳ ಗುಡುಗು...

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ – ಜೆಎನ್‌ಯು ವಿದ್ಯಾರ್ಥಿಗಳ ಗುಡುಗು…

- Advertisement -
- Advertisement -

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ. ಸರ್ಕಾರದ ಜನವಿರೋಧಿ ನೀತಿಗಳನ್ನು ಮತ್ತಷ್ಟು ಪ್ರಶ್ನಿಸುತ್ತೇವೆ. ಶುಲ್ಕ ಹೆಚ್ಚಳದ ವಿರುದ್ಧ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿಕೊಳ್ಳಲು ಹೋರಾಡುತ್ತೇವೆ ಎಂದು ಜೆಎನ್‌ಯು ವಿದ್ಯಾರ್ಥಿಗಳು ಗುಡುಗಿದ್ದಾರೆ.

ಇಂದು ಸಬರಮತಿ ಹಾಸ್ಟೆಲ್‌ ಎದುರು ನಡೆದ ಜೆಎನ್‌ಯು ಪ್ರಾಧ್ಯಾಪಕರ ಸಂಘ ಮತ್ತು ವಿದ್ಯಾರ್ಥಿ ಸಂಘದ ಭಾರೀ ಸಭೆ ನಡೆಸಿ ಹೋರಾಟವನ್ನು ತೀವ್ರಗೊಳಿಸುವ ಸಂಕಲ್ಪ ತೊಟ್ಟಿದ್ದಾರೆ.

ಸಭೆಗೆ ಜೆನ್‌ಯು ಹಿರಿಯ ವಿದ್ಯಾರ್ಥಿಗಳಾದ ಯೋಗೇಂದ್ರ ಯಾದವ್‌, ಕವಿತಾ ಕೃಷ್ಣನ್‌, ಶಾ ಅಲಂ ಖಾನ್‌, ಕನ್ಹಯ್ಯ ಕುಮಾರ್‌ ಸೇರಿದಂತೆ ಹಲವರು ಭಾಗವಹಿಸಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇನ್ನೊಂದೆಡೆ ಸೀತಾರಾಮ್ ಯೆಚೂರಿ ಮಾತಾಡಿ, ಜೆಎನ್‌ಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಒಗ್ಗಟ್ಟನ್ನು ತೋರಿಸಲು ನಾನು ಬಂದಿದ್ದೇನೆ. ನಾನು JNU ಹಿಂಸಾಚಾರವನ್ನು ಖಂಡಿಸುತ್ತೇನೆ. ಇದರಿಂದ ಕುಲಪತಿಗಳು ವಿದ್ಯಾರ್ಥಿಗಳನ್ನು ಮೌನಗೊಳಿಸಬಹುದೆಂದು ಭಾವಿಸಿದರೆ ಅದು ಆಗುವುದಿಲ್ಲ. ಕೂಡಲೇ ಕುಲಪತಿಯನ್ನು ವಜಾ ಮಾಡುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಗುರುತಿಸಿ ಶಿಕ್ಷಿಸುವುದು ಮತ್ತು ಸರ್ಕಾರ ಶುಲ್ಕ ಹೆಚ್ಚಳದಿಂದ ಹಿಂದೆ ಸರಿಯಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ.

ಈ ಸರ್ಕಾರದ ವಕ್ತಾರನಾಗಿ ಜೆಎನ್‌ಯುನಲ್ಲಿ ವಿಸಿಯಾಗಿರುವ ಈ ಜಗದೀಶ್ ಕುಮಾರ್, ಒಂದು ವೇಳೆ ನ್ಯಾಯಯುತ ನೇಮಕಾತಿ ನಡೆದಲ್ಲಿ ಈತ ಗುಮಾಸ್ತನ ಕೆಲಸವನ್ನು ಸಹ ಪಡೆಯುವುದಿಲ್ಲ. ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಜೆಎನ್‌ಯುನಲ್ಲಿನ ಹಿಂಸಾಚಾರವು ‘ನೋವಿನಿಂದ ಕೂಡಿದೆ’ ಎಂದು ಜೆಎನ್‌ಯು ವಿಸಿ ಜಗದೀಶ್ ಕುಮಾರ್ ಹೇಳುತ್ತಾರೆ: ಹೌದು, ತುಂಬಾ ನೋವಿನಿಂದ ಕೂಡಿದೆ. ಆದರೆ ಅವರು ಇದುವರೆಗೂ ಗಾಯಗೊಂಡ ಯಾವುದೇ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಭೇಟಿ ಮಾಡಿಲ್ಲ. ಭಾನುವಾರ ಸಂಜೆ 4.30 ರಿಂದ 7.45 ರ ನಡುವೆ ಅವರು ಪೊಲೀಸರಿಗಾಗಿ ಅಥವಾ ಸಿಬ್ಬಂದಿಗೆ ಭದ್ರತೆಗಾಗಿ ಕರೆ ನೀಡದಿರುವುದು ತುಂಬಾ ನೋವಿನಿಂದ ಕೂಡಿದೆ! ನಾಚಿಕೆಯಾಗಬೇಕು ನಿಮಗೆ ಎಂದು ರಾಜ್‌ದೀಪ್‌ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾ ಅಲಂ ಖಾನ್‌ರವರು ಜೆಎನ್‌ಯುನಲ್ಲಿ ಮಾತನಾಡುತ್ತಾ, ಜೆಎನ್‌ಯು ಆಕ್ರಮಣಕ್ಕೆ ಒಳಗಾಗಿದೆ ಏಕೆಂದರೆ ಅದು ದುರಾಶೆ ಮತ್ತು ಮೂರ್ಖತನವನ್ನು ಪ್ರಶ್ನಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...