Homeಚಳವಳಿಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ - ಜೆಎನ್‌ಯು ವಿದ್ಯಾರ್ಥಿಗಳ ಗುಡುಗು...

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ – ಜೆಎನ್‌ಯು ವಿದ್ಯಾರ್ಥಿಗಳ ಗುಡುಗು…

- Advertisement -
- Advertisement -

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ. ಸರ್ಕಾರದ ಜನವಿರೋಧಿ ನೀತಿಗಳನ್ನು ಮತ್ತಷ್ಟು ಪ್ರಶ್ನಿಸುತ್ತೇವೆ. ಶುಲ್ಕ ಹೆಚ್ಚಳದ ವಿರುದ್ಧ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿಕೊಳ್ಳಲು ಹೋರಾಡುತ್ತೇವೆ ಎಂದು ಜೆಎನ್‌ಯು ವಿದ್ಯಾರ್ಥಿಗಳು ಗುಡುಗಿದ್ದಾರೆ.

ಇಂದು ಸಬರಮತಿ ಹಾಸ್ಟೆಲ್‌ ಎದುರು ನಡೆದ ಜೆಎನ್‌ಯು ಪ್ರಾಧ್ಯಾಪಕರ ಸಂಘ ಮತ್ತು ವಿದ್ಯಾರ್ಥಿ ಸಂಘದ ಭಾರೀ ಸಭೆ ನಡೆಸಿ ಹೋರಾಟವನ್ನು ತೀವ್ರಗೊಳಿಸುವ ಸಂಕಲ್ಪ ತೊಟ್ಟಿದ್ದಾರೆ.

ಸಭೆಗೆ ಜೆನ್‌ಯು ಹಿರಿಯ ವಿದ್ಯಾರ್ಥಿಗಳಾದ ಯೋಗೇಂದ್ರ ಯಾದವ್‌, ಕವಿತಾ ಕೃಷ್ಣನ್‌, ಶಾ ಅಲಂ ಖಾನ್‌, ಕನ್ಹಯ್ಯ ಕುಮಾರ್‌ ಸೇರಿದಂತೆ ಹಲವರು ಭಾಗವಹಿಸಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇನ್ನೊಂದೆಡೆ ಸೀತಾರಾಮ್ ಯೆಚೂರಿ ಮಾತಾಡಿ, ಜೆಎನ್‌ಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಒಗ್ಗಟ್ಟನ್ನು ತೋರಿಸಲು ನಾನು ಬಂದಿದ್ದೇನೆ. ನಾನು JNU ಹಿಂಸಾಚಾರವನ್ನು ಖಂಡಿಸುತ್ತೇನೆ. ಇದರಿಂದ ಕುಲಪತಿಗಳು ವಿದ್ಯಾರ್ಥಿಗಳನ್ನು ಮೌನಗೊಳಿಸಬಹುದೆಂದು ಭಾವಿಸಿದರೆ ಅದು ಆಗುವುದಿಲ್ಲ. ಕೂಡಲೇ ಕುಲಪತಿಯನ್ನು ವಜಾ ಮಾಡುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಗುರುತಿಸಿ ಶಿಕ್ಷಿಸುವುದು ಮತ್ತು ಸರ್ಕಾರ ಶುಲ್ಕ ಹೆಚ್ಚಳದಿಂದ ಹಿಂದೆ ಸರಿಯಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ.

ಈ ಸರ್ಕಾರದ ವಕ್ತಾರನಾಗಿ ಜೆಎನ್‌ಯುನಲ್ಲಿ ವಿಸಿಯಾಗಿರುವ ಈ ಜಗದೀಶ್ ಕುಮಾರ್, ಒಂದು ವೇಳೆ ನ್ಯಾಯಯುತ ನೇಮಕಾತಿ ನಡೆದಲ್ಲಿ ಈತ ಗುಮಾಸ್ತನ ಕೆಲಸವನ್ನು ಸಹ ಪಡೆಯುವುದಿಲ್ಲ. ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಜೆಎನ್‌ಯುನಲ್ಲಿನ ಹಿಂಸಾಚಾರವು ‘ನೋವಿನಿಂದ ಕೂಡಿದೆ’ ಎಂದು ಜೆಎನ್‌ಯು ವಿಸಿ ಜಗದೀಶ್ ಕುಮಾರ್ ಹೇಳುತ್ತಾರೆ: ಹೌದು, ತುಂಬಾ ನೋವಿನಿಂದ ಕೂಡಿದೆ. ಆದರೆ ಅವರು ಇದುವರೆಗೂ ಗಾಯಗೊಂಡ ಯಾವುದೇ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಭೇಟಿ ಮಾಡಿಲ್ಲ. ಭಾನುವಾರ ಸಂಜೆ 4.30 ರಿಂದ 7.45 ರ ನಡುವೆ ಅವರು ಪೊಲೀಸರಿಗಾಗಿ ಅಥವಾ ಸಿಬ್ಬಂದಿಗೆ ಭದ್ರತೆಗಾಗಿ ಕರೆ ನೀಡದಿರುವುದು ತುಂಬಾ ನೋವಿನಿಂದ ಕೂಡಿದೆ! ನಾಚಿಕೆಯಾಗಬೇಕು ನಿಮಗೆ ಎಂದು ರಾಜ್‌ದೀಪ್‌ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾ ಅಲಂ ಖಾನ್‌ರವರು ಜೆಎನ್‌ಯುನಲ್ಲಿ ಮಾತನಾಡುತ್ತಾ, ಜೆಎನ್‌ಯು ಆಕ್ರಮಣಕ್ಕೆ ಒಳಗಾಗಿದೆ ಏಕೆಂದರೆ ಅದು ದುರಾಶೆ ಮತ್ತು ಮೂರ್ಖತನವನ್ನು ಪ್ರಶ್ನಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...