Homeಚಳವಳಿಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ - ಜೆಎನ್‌ಯು ವಿದ್ಯಾರ್ಥಿಗಳ ಗುಡುಗು...

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ: ಮತ್ತಷ್ಟು ಪ್ರಶ್ನಿಸುತ್ತೇವೆ – ಜೆಎನ್‌ಯು ವಿದ್ಯಾರ್ಥಿಗಳ ಗುಡುಗು…

- Advertisement -
- Advertisement -

ಸಂಘಪರಿವಾರ, ಸರ್ಕಾರದ ದಾಳಿಗೆ ಹೆದರುವುದಿಲ್ಲ. ಸರ್ಕಾರದ ಜನವಿರೋಧಿ ನೀತಿಗಳನ್ನು ಮತ್ತಷ್ಟು ಪ್ರಶ್ನಿಸುತ್ತೇವೆ. ಶುಲ್ಕ ಹೆಚ್ಚಳದ ವಿರುದ್ಧ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿಕೊಳ್ಳಲು ಹೋರಾಡುತ್ತೇವೆ ಎಂದು ಜೆಎನ್‌ಯು ವಿದ್ಯಾರ್ಥಿಗಳು ಗುಡುಗಿದ್ದಾರೆ.

ಇಂದು ಸಬರಮತಿ ಹಾಸ್ಟೆಲ್‌ ಎದುರು ನಡೆದ ಜೆಎನ್‌ಯು ಪ್ರಾಧ್ಯಾಪಕರ ಸಂಘ ಮತ್ತು ವಿದ್ಯಾರ್ಥಿ ಸಂಘದ ಭಾರೀ ಸಭೆ ನಡೆಸಿ ಹೋರಾಟವನ್ನು ತೀವ್ರಗೊಳಿಸುವ ಸಂಕಲ್ಪ ತೊಟ್ಟಿದ್ದಾರೆ.

ಸಭೆಗೆ ಜೆನ್‌ಯು ಹಿರಿಯ ವಿದ್ಯಾರ್ಥಿಗಳಾದ ಯೋಗೇಂದ್ರ ಯಾದವ್‌, ಕವಿತಾ ಕೃಷ್ಣನ್‌, ಶಾ ಅಲಂ ಖಾನ್‌, ಕನ್ಹಯ್ಯ ಕುಮಾರ್‌ ಸೇರಿದಂತೆ ಹಲವರು ಭಾಗವಹಿಸಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇನ್ನೊಂದೆಡೆ ಸೀತಾರಾಮ್ ಯೆಚೂರಿ ಮಾತಾಡಿ, ಜೆಎನ್‌ಯು ಶಿಕ್ಷಕರು ಮತ್ತು ವಿದ್ಯಾರ್ಥಿಗಳೊಂದಿಗೆ ಒಗ್ಗಟ್ಟನ್ನು ತೋರಿಸಲು ನಾನು ಬಂದಿದ್ದೇನೆ. ನಾನು JNU ಹಿಂಸಾಚಾರವನ್ನು ಖಂಡಿಸುತ್ತೇನೆ. ಇದರಿಂದ ಕುಲಪತಿಗಳು ವಿದ್ಯಾರ್ಥಿಗಳನ್ನು ಮೌನಗೊಳಿಸಬಹುದೆಂದು ಭಾವಿಸಿದರೆ ಅದು ಆಗುವುದಿಲ್ಲ. ಕೂಡಲೇ ಕುಲಪತಿಯನ್ನು ವಜಾ ಮಾಡುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಗುರುತಿಸಿ ಶಿಕ್ಷಿಸುವುದು ಮತ್ತು ಸರ್ಕಾರ ಶುಲ್ಕ ಹೆಚ್ಚಳದಿಂದ ಹಿಂದೆ ಸರಿಯಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದಿದ್ದಾರೆ.

ಈ ಸರ್ಕಾರದ ವಕ್ತಾರನಾಗಿ ಜೆಎನ್‌ಯುನಲ್ಲಿ ವಿಸಿಯಾಗಿರುವ ಈ ಜಗದೀಶ್ ಕುಮಾರ್, ಒಂದು ವೇಳೆ ನ್ಯಾಯಯುತ ನೇಮಕಾತಿ ನಡೆದಲ್ಲಿ ಈತ ಗುಮಾಸ್ತನ ಕೆಲಸವನ್ನು ಸಹ ಪಡೆಯುವುದಿಲ್ಲ. ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಪ್ರಶಾಂತ್‌ ಭೂಷಣ್‌ ಅಭಿಪ್ರಾಯಪಟ್ಟಿದ್ದಾರೆ.

ಜೆಎನ್‌ಯುನಲ್ಲಿನ ಹಿಂಸಾಚಾರವು ‘ನೋವಿನಿಂದ ಕೂಡಿದೆ’ ಎಂದು ಜೆಎನ್‌ಯು ವಿಸಿ ಜಗದೀಶ್ ಕುಮಾರ್ ಹೇಳುತ್ತಾರೆ: ಹೌದು, ತುಂಬಾ ನೋವಿನಿಂದ ಕೂಡಿದೆ. ಆದರೆ ಅವರು ಇದುವರೆಗೂ ಗಾಯಗೊಂಡ ಯಾವುದೇ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಭೇಟಿ ಮಾಡಿಲ್ಲ. ಭಾನುವಾರ ಸಂಜೆ 4.30 ರಿಂದ 7.45 ರ ನಡುವೆ ಅವರು ಪೊಲೀಸರಿಗಾಗಿ ಅಥವಾ ಸಿಬ್ಬಂದಿಗೆ ಭದ್ರತೆಗಾಗಿ ಕರೆ ನೀಡದಿರುವುದು ತುಂಬಾ ನೋವಿನಿಂದ ಕೂಡಿದೆ! ನಾಚಿಕೆಯಾಗಬೇಕು ನಿಮಗೆ ಎಂದು ರಾಜ್‌ದೀಪ್‌ ಸರ್ದೇಸಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾ ಅಲಂ ಖಾನ್‌ರವರು ಜೆಎನ್‌ಯುನಲ್ಲಿ ಮಾತನಾಡುತ್ತಾ, ಜೆಎನ್‌ಯು ಆಕ್ರಮಣಕ್ಕೆ ಒಳಗಾಗಿದೆ ಏಕೆಂದರೆ ಅದು ದುರಾಶೆ ಮತ್ತು ಮೂರ್ಖತನವನ್ನು ಪ್ರಶ್ನಿಸುತ್ತದೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...