Homeಮುಖಪುಟಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಸೌಲಭ್ಯಗಳ ಕೊರತೆಯಿಂದಾಗಿ ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗುತ್ತಿಲ್ಲ. ಅನೇಕ ವಿದ್ಯಾರ್ಥಿಗಳು ವ್ಯಾಸಂಗವನ್ನು ತೊರೆದಿದ್ದಾರೆ ಎಂದು ಎಐಎಸ್‌ಎ ಕಾರ್ಯದರ್ಶಿ ಕುಂದು ಹೇಳಿದ್ದಾರೆ.

- Advertisement -
- Advertisement -

2020ರ ಬ್ಯಾಚಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ತೆರೆದು, ಕ್ಯಾಂಪಸ್ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಜವಹರಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು) ಒತ್ತಾಯಿಸಿದೆ. ವಿದ್ಯಾರ್ಥಿಗಳ ಡೀನ್ ಕಚೇರಿ ಎದುರು ಜೆಎನ್‌ಯುಎಸ್‌ಯು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ.

ಸೆಪ್ಟೆಂಬರ್‌ 6ರಿಂದ ಮೊದಲ ಹಂತದ ತರಗತಿಗಳನ್ನು ಆರಂಭಿಸುವುದಾಗಿ ಜೆಎನ್‌ಯು ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಡಿಸೆಂಬರ್‌ 31ರೊಳಗೆ ಸಂಶೋಧನಾ ಪ್ರಬಂಧವನ್ನು ಸಲ್ಲಿಸಬೇಕಿರುವ ಸಂಶೋಧನಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿತ್ತು ಎಂದು ಸಂಶೋಧನಾ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೋಧನಾ ಕಲಿಕಾ ಚಟುವಟಿಕೆಗಳು ಆನ್ಲೈನ್‌ನಲ್ಲೇ ಮುಂದುವರಿಯಲಿವೆ. ಡಾ.ಬಿ.ಆರ್.ಅಂಬೇಡ್ಕರ್‌ ಕೇಂದ್ರೀಯ ಗ್ರಂಥಾಲಯ ಹೊರತುಪಡಿಸಿ, ಇತರ ಕೇಂದ್ರೀಯ ಗ್ರಂಥಾಲಯಗಳು, ತರಗತಿಗಳು ನಡೆಯುವುದಿಲ್ಲ ಎಂದು ತಿಳಿಸಲಾಗಿತ್ತು.

ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಕೋವಿಡ್‌ ನೆಗೆಟಿವ್‌ ವರದಿ (ಆರ್ಟಿಪಿಸಿಆರ್) ತಂದು, ಸ್ವಯಂ ಘೋಷಣಾ ಪತ್ರದೊಂದಿಗೆ ಸಲ್ಲಿಸಬೇಕು ಎಂದು ವಿವಿಯ ಆಡಳಿತ ವಿಭಾಗ ಹೇಳಿದೆ. “ವಿದ್ಯಾರ್ಥಿಗಳ ಒತ್ತಡದಿಂದಾಗಿ ಕೇವಲ ಪೊಳ್ಳು ಭರವಸೆಗಳನ್ನು ನೀಡಲಾಗುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಅರ್ಥಪೂರ್ಣ ರೀತಿಯಲ್ಲಿ ಕ್ಯಾಂಪಸ್‌ಗೆ ಅವಕಾಶ ನೀಡುವುದೆಂದರೆ ಸಂಶೋಧನಾ ಪ್ರಬಂಧ ಸಲ್ಲಿಸಬೇಕಾಗಿರುವ ವಿದ್ಯಾರ್ಥಿಗಳಿಗಷ್ಟೇ ಅಲ್ಲದೇ ಎಲ್ಲ ವಿದ್ಯಾರ್ಥಿಗಳಿಗೂ ಅವಕಾಶ ನೀಡುವುದೇ ಆಗಿದೆ” ಎಂದು ಎಐಎಸ್‌ಎ ಕಾರ್ಯದರ್ಶಿ, ಎಂಫಿಎಲ್ ವಿದ್ಯಾರ್ಥಿ ಮಧುರಿಮಾ ಕುಂದು ಅಭಿಪ್ರಾಯಪಟ್ಟಿದ್ದಾರೆ.

ದಿ ವೈರ್‌ ಸುದ್ದಿ ಜಾಲತಾಣದೊಂದಿಗೆ ಮಾತನಾಡಿರುವ ಕುಂದು, “2020ರ ಬ್ಯಾಚಿನ ವಿದ್ಯಾರ್ಥಿಗಳು ಒಂದು ವರ್ಷ ಇಲ್ಲಿ ಪೂರೈಸಿದ್ದಾರೆ. ಕ್ಯಾಂಪಸ್‌ ಪ್ರವೇಶಕ್ಕಾಗಿ ಅವರು ಒಮ್ಮೆಯಾದರೂ ಕೋರಿಕೆ ಸಲ್ಲಿಸಿಲ್ಲ. ಆನ್ಲೈನ್‌ ತರಗತಿಗಳಲ್ಲಿ ಅವರು ಹಾಜರಾಗುತ್ತಿಲ್ಲ. ಅವರಿಗೆ ಹಾಸ್ಟೆಲ್‌ಗಳನ್ನೂ ನೀಡಲಾಗಿಲ್ಲ. ಎಷ್ಟು ದಿನಗಳ ಕಾಲ ಶೈಕ್ಷಣಿಕ ಚಟುವಟಿಕೆಗಳನ್ನು ಗೂಗಲ್ ಮೀಟ್ ನಲ್ಲೇ ನಡೆಯಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ಮುಂದುವರಿದು, “ಹಿಂದುಳಿದ ವರ್ಗದಿಂದ ಬಂದ ಹಾಗೂ ತಾಂತ್ರಿಕ ಸೌಲಭ್ಯಗಳಿಲ್ಲದ ವಿದ್ಯಾರ್ಥಿಗಳು ಆನ್ಲೈನ್ ತರಗತಿಗೂ ಹಾಜರಾಗುತ್ತಿಲ್ಲ. ಕಲಿಕೆಯಿಂದ ಹೊರಗುಳಿಯುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಎಲ್ಲ ಕೋರ್ಸ್‌ಗಳಲ್ಲೂ ಈ ಬೆಳವಣಿಗೆಯಾಗಿದೆ. ಬಹುಶಃ ಸಂಪನ್ಮೂಲದ ಕೊರತೆಯಿಂದಾಗಿ ಆ ವಿದ್ಯಾರ್ಥಿಗಳು ವ್ಯಾಸಂಗವನ್ನು ಮುಂದವರಿಸಲು ಸಾಧ್ಯವಾಗುತ್ತಿಲ್ಲ ಎನಿಸುತ್ತದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....