Homeಮುಖಪುಟಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಕ್ಯಾಂಪಸ್‌ ತೆರೆದು 2020ರ ಬ್ಯಾಚ್ ವ್ಯಾಸಂಗಕ್ಕೆ ಅನುಮತಿ ನೀಡಲು ಜೆಎನ್‌ಯುಎಸ್‌ಯು ಒತ್ತಾಯ

ಸೌಲಭ್ಯಗಳ ಕೊರತೆಯಿಂದಾಗಿ ಬಹುತೇಕ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಗೆ ಹಾಜರಾಗುತ್ತಿಲ್ಲ. ಅನೇಕ ವಿದ್ಯಾರ್ಥಿಗಳು ವ್ಯಾಸಂಗವನ್ನು ತೊರೆದಿದ್ದಾರೆ ಎಂದು ಎಐಎಸ್‌ಎ ಕಾರ್ಯದರ್ಶಿ ಕುಂದು ಹೇಳಿದ್ದಾರೆ.

- Advertisement -
- Advertisement -

2020ರ ಬ್ಯಾಚಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ತೆರೆದು, ಕ್ಯಾಂಪಸ್ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು ಜವಹರಲಾಲ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಒಕ್ಕೂಟ (ಜೆಎನ್‌ಯುಎಸ್‌ಯು) ಒತ್ತಾಯಿಸಿದೆ. ವಿದ್ಯಾರ್ಥಿಗಳ ಡೀನ್ ಕಚೇರಿ ಎದುರು ಜೆಎನ್‌ಯುಎಸ್‌ಯು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದೆ.

ಸೆಪ್ಟೆಂಬರ್‌ 6ರಿಂದ ಮೊದಲ ಹಂತದ ತರಗತಿಗಳನ್ನು ಆರಂಭಿಸುವುದಾಗಿ ಜೆಎನ್‌ಯು ಮಾರ್ಗಸೂಚಿ ಬಿಡುಗಡೆ ಮಾಡಿತ್ತು. ಡಿಸೆಂಬರ್‌ 31ರೊಳಗೆ ಸಂಶೋಧನಾ ಪ್ರಬಂಧವನ್ನು ಸಲ್ಲಿಸಬೇಕಿರುವ ಸಂಶೋಧನಾರ್ಥಿಗಳ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎನ್ನಲಾಗಿತ್ತು ಎಂದು ಸಂಶೋಧನಾ ವಿದ್ಯಾರ್ಥಿಗಳು ತಿಳಿಸಿದ್ದಾರೆ.

ಬೋಧನಾ ಕಲಿಕಾ ಚಟುವಟಿಕೆಗಳು ಆನ್ಲೈನ್‌ನಲ್ಲೇ ಮುಂದುವರಿಯಲಿವೆ. ಡಾ.ಬಿ.ಆರ್.ಅಂಬೇಡ್ಕರ್‌ ಕೇಂದ್ರೀಯ ಗ್ರಂಥಾಲಯ ಹೊರತುಪಡಿಸಿ, ಇತರ ಕೇಂದ್ರೀಯ ಗ್ರಂಥಾಲಯಗಳು, ತರಗತಿಗಳು ನಡೆಯುವುದಿಲ್ಲ ಎಂದು ತಿಳಿಸಲಾಗಿತ್ತು.

ವಿದ್ಯಾರ್ಥಿಗಳು 72 ಗಂಟೆಗಳ ಒಳಗಿನ ಕೋವಿಡ್‌ ನೆಗೆಟಿವ್‌ ವರದಿ (ಆರ್ಟಿಪಿಸಿಆರ್) ತಂದು, ಸ್ವಯಂ ಘೋಷಣಾ ಪತ್ರದೊಂದಿಗೆ ಸಲ್ಲಿಸಬೇಕು ಎಂದು ವಿವಿಯ ಆಡಳಿತ ವಿಭಾಗ ಹೇಳಿದೆ. “ವಿದ್ಯಾರ್ಥಿಗಳ ಒತ್ತಡದಿಂದಾಗಿ ಕೇವಲ ಪೊಳ್ಳು ಭರವಸೆಗಳನ್ನು ನೀಡಲಾಗುತ್ತಿದೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

“ಅರ್ಥಪೂರ್ಣ ರೀತಿಯಲ್ಲಿ ಕ್ಯಾಂಪಸ್‌ಗೆ ಅವಕಾಶ ನೀಡುವುದೆಂದರೆ ಸಂಶೋಧನಾ ಪ್ರಬಂಧ ಸಲ್ಲಿಸಬೇಕಾಗಿರುವ ವಿದ್ಯಾರ್ಥಿಗಳಿಗಷ್ಟೇ ಅಲ್ಲದೇ ಎಲ್ಲ ವಿದ್ಯಾರ್ಥಿಗಳಿಗೂ ಅವಕಾಶ ನೀಡುವುದೇ ಆಗಿದೆ” ಎಂದು ಎಐಎಸ್‌ಎ ಕಾರ್ಯದರ್ಶಿ, ಎಂಫಿಎಲ್ ವಿದ್ಯಾರ್ಥಿ ಮಧುರಿಮಾ ಕುಂದು ಅಭಿಪ್ರಾಯಪಟ್ಟಿದ್ದಾರೆ.

ದಿ ವೈರ್‌ ಸುದ್ದಿ ಜಾಲತಾಣದೊಂದಿಗೆ ಮಾತನಾಡಿರುವ ಕುಂದು, “2020ರ ಬ್ಯಾಚಿನ ವಿದ್ಯಾರ್ಥಿಗಳು ಒಂದು ವರ್ಷ ಇಲ್ಲಿ ಪೂರೈಸಿದ್ದಾರೆ. ಕ್ಯಾಂಪಸ್‌ ಪ್ರವೇಶಕ್ಕಾಗಿ ಅವರು ಒಮ್ಮೆಯಾದರೂ ಕೋರಿಕೆ ಸಲ್ಲಿಸಿಲ್ಲ. ಆನ್ಲೈನ್‌ ತರಗತಿಗಳಲ್ಲಿ ಅವರು ಹಾಜರಾಗುತ್ತಿಲ್ಲ. ಅವರಿಗೆ ಹಾಸ್ಟೆಲ್‌ಗಳನ್ನೂ ನೀಡಲಾಗಿಲ್ಲ. ಎಷ್ಟು ದಿನಗಳ ಕಾಲ ಶೈಕ್ಷಣಿಕ ಚಟುವಟಿಕೆಗಳನ್ನು ಗೂಗಲ್ ಮೀಟ್ ನಲ್ಲೇ ನಡೆಯಲು ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಜೆಎನ್‍ಯು ಘಟನೆ: ಸಂಪೂರ್ಣ ಹಿನ್ನೆಲೆ ಮತ್ತು ಉತ್ತರವಿಲ್ಲದ ಪ್ರಶ್ನೆಗಳು – ಪ್ರೊ. ಪುರುಷೋತ್ತಮ ಬಿಳಿಮಲೆ

ಮುಂದುವರಿದು, “ಹಿಂದುಳಿದ ವರ್ಗದಿಂದ ಬಂದ ಹಾಗೂ ತಾಂತ್ರಿಕ ಸೌಲಭ್ಯಗಳಿಲ್ಲದ ವಿದ್ಯಾರ್ಥಿಗಳು ಆನ್ಲೈನ್ ತರಗತಿಗೂ ಹಾಜರಾಗುತ್ತಿಲ್ಲ. ಕಲಿಕೆಯಿಂದ ಹೊರಗುಳಿಯುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಎಲ್ಲ ಕೋರ್ಸ್‌ಗಳಲ್ಲೂ ಈ ಬೆಳವಣಿಗೆಯಾಗಿದೆ. ಬಹುಶಃ ಸಂಪನ್ಮೂಲದ ಕೊರತೆಯಿಂದಾಗಿ ಆ ವಿದ್ಯಾರ್ಥಿಗಳು ವ್ಯಾಸಂಗವನ್ನು ಮುಂದವರಿಸಲು ಸಾಧ್ಯವಾಗುತ್ತಿಲ್ಲ ಎನಿಸುತ್ತದೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...