HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...