HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...