HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...