HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...