HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...