HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...