HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...