HomeಚಳವಳಿJNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

JNU ಚುನಾವಣೆ: ಎಲ್ಲಾ ಸ್ಥಾನಗಳಲ್ಲೂ ಮುನ್ನಡೆ ಸಾಧಿಸಿದ ಎಡ ಒಕ್ಕೂಟ, ಸೆ.17ರವರೆಗೆ ಫಲಿತಾಂಶ ಘೋಷಿಸುವಂತಿಲ್ಲ..

- Advertisement -
- Advertisement -

ನಿನ್ನೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಚುನಾವಣೆಯ ಮತಗಳನ್ನು ಎಣಿಕೆ ಮಾಡಲಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಎಂಬ ನಾಲ್ಕು ಕೇಂದ್ರ ಸಮಿತಿ ಸ್ಥಾನಗಳಲ್ಲಿ ನಾಲ್ಕರಲ್ಲಿಯೂ ಎಡ ಒಕ್ಕೂಟವು ಬೃಹತ್ ಮುನ್ನಡೆ ಸಾಧಿಸಿದೆ. ಆದರೆ ದೆಹಲಿ ಹೈಕೋರ್ಟ್ ಆದೇಶದ ಅನ್ವಯ ಸೆಪ್ಟೆಂಬರ್ 17 ರವರೆಗೆ ಫಲಿತಾಂಶದ ಘೋಷಣೆಯನ್ನು ತಡೆಹಿಡಿಯಲಾಗಿದೆ.

ಆರ್.ಎಸ್.ಎಸ್ ಸಂಯೋಜಿತ ಎಬಿವಿಪಿ ಮತ್ತು ಬಿರ್ಸಾ ಅಂಬೇಡ್ಕರ್ ಫುಲೆ ವಿದ್ಯಾರ್ಥಿ ಸಂಘ (ಬಾಪ್ಸಾ) ಎರಡನೇ ಮತ್ತು ಮೂರನೇ ಸ್ಥಾನಗಳಿಗಾಗಿ ತೀವ್ರ ಪೈಪೋಟಿ ನಡೆಸಿವೆ.

ಫಲಿತಾಂಶ ಘೋಷಣೆ ಯಾಕಿಲ್ಲ?

ಜೆಎನ್‌ಯುಎಸ್‌ಯುನಲ್ಲಿ ಕೌನ್ಸಿಲರ್‌ಗಳ ಚುನಾವಣೆಗೆ ತಮ್ಮ ನಾಮಪತ್ರಗಳನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಇಬ್ಬರು ವಿದ್ಯಾರ್ಥಿಗಳು ದೆಹಲಿ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ ಕಾರಣದಿಂದಾಗಿ ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 6 ರ ಶುಕ್ರವಾರದಂದು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿದೆ.

“ಅಂತಿಮ ಫಲಿತಾಂಶಗಳ ಘೋಷಣೆಯು ಈ ನ್ಯಾಯಾಲಯವು ಅಂಗೀಕರಿಸಬೇಕಾದ ಮುಂದಿನ ವಿಚಾರಣೆಯ ನಂತರವೇ ಘೋಷಿಸಬೇಕು ಎಂದು ಕೋರ್ಟ್ ಹೇಳಿದ್ದು,  ಮುಂದಿನ ವಿಚಾರಣೆಯು ಸೆಪ್ಟೆಂಬರ್ 17 ರಂದು ನಡೆಯಲಿದೆ. ಹಾಗಾಗಿ ಅಧಿಕೃತ ಫಲಿತಾಂಶ ಅಂದು ಹೊರಬೀಳಲಿದೆ. ಏನೇ ಆದರೂ ಎಡ ಒಕ್ಕೂಟ ಜಯಿಸಿರುವುದು ನಿನ್ನೆಯ ಮತ ಎಣಿಕೆಯಲ್ಲಿ ಸ್ಪಷ್ಟವಾಗಿದೆ.

ಮೇಲಿನ ಹೈಕೋರ್ಟ್ ಆದೇಶವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸ್ಥಾನಗಳ ಮತ ಎಣಿಕೆಯಲ್ಲಿ ಕೊನೆಯ 150 ಮತಗಳು ಮತ್ತು ಕೌನ್ಸಿಲರ್‌ಗಳ ಸ್ಥಾನಗಳ ಕೊನೆಯ 50 ಮತಗಳನ್ನು ಎಣಿಸಿಲ್ಲ ಮತ್ತು ಘೋಷಿಸಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ.

ಎಡ ಒಕ್ಕೂಟದಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ), ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಫೆಡರೇಶನ್ (ಡಿಎಸ್ಎಫ್) ಮತ್ತು ಅಖಿಲ ಭಾರತ ವಿದ್ಯಾರ್ಥಿಗಳ ಒಕ್ಕೂಟ (ಎಐಎಸ್ಎಫ್) ವಿದ್ಯಾರ್ಥಿ ಸಂಘಟನೆಗಳಿವೆ. ಆಯಿಶಿ ಘೋಷ್ ಅವರು ಅಧ್ಯಕ್ಷ ಸ್ಥಾನಕ್ಕೆ, ಸಾಕೇತ್ ಮೂನ್ ಉಪಾಧ್ಯಕ್ಷ ಸ್ಥಾನಕ್ಕೆ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸತೀಶ್ ಚಂದ್ರ ಯಾದವ್, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಂಡಿ ದ್ಯಾನಿಷ್ ಅವರ ಆಯ್ಕೆ ಬಹುತೇಕ ಖಚಿತವಾಗಿದೆ.

ಈ ಭಾರಿ ಶೇಕಡಾ 67.9 ರಷ್ಟು ಮತದಾನ ದಾಖಲಾಗಿದ್ದು, ಇದು ಏಳು ವರ್ಷಗಳಲ್ಲಿ ಅತಿ ಹೆಚ್ಚು ಎಂದು ಹೇಳಲಾಗಿದೆ. ಕೇಸರಿ ನಿಲುವಂಗಿಯನ್ನು ಧರಿಸಿ ಜೆಎನ್‌ಯುನ ಯೋಗಿ ಎಂದು ಕರೆಯಲ್ಪಡುತ್ತಿದ್ದ ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ಮಿಶ್ರಾ ಅವರು ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುತ್ತಿದ್ದರು. ಆದರೆ ಅತ್ಯಂತ ಕಡಿಮೆ ಮತ ಪಡೆಯುವ ಮೂಲಕ ಮುಖಭಂಗ ಅನುಭವಿಸಿದ್ದಾರೆ.

ಇನ್ನು ಎಬಿವಿಪಿ ಈ ಬಾರಿಯಾದರೂ ಗೆಲ್ಲಲೇಬೇಕೆಂದು ಏನೆಲ್ಲಾ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ಎಡ ಒಕ್ಕೂಟ ಪಡೆದ ಅರ್ಧದಷ್ಟು ಮತಗಳನ್ನು ಮಾತ್ರ ಪಡೆಯಲು ಎಬಿವಿಪಿ ಶಕ್ತವಾಗಿದ್ದು ಮತ್ತೆ ಮುಗ್ಗರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...