Homeಮುಖಪುಟಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

- Advertisement -
- Advertisement -

ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡರಂಗದ ವಿದ್ಯಾರ್ಥಿ ಸಂಘಟನೆಗಳು ಗೆಲುವನ್ನು ಸಾಧಿಸಿದ್ದು, ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ಮೂರು ದಶಕಗಳ ಬಳಿಕ ದಲಿತ ಅಧ್ಯಕ್ಷರೋರ್ವರನ್ನು ಆಯ್ಕೆ ಮಾಡಲಾಗಿದೆ.

4 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಶನ್‌ನ ಧನಂಜಯ್ ಅವರು ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಚಂದ್ರ ಅಜ್ಮೀರಾ ಅವರಿಗಿಂತ 922 ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಎಐಎಸ್‌ಎನ ಧನಂಜಯ್ ಅವರು 2,598 ಮತಗಳನ್ನು ಪಡೆದಿದ್ದು, ಉಮೇಶ್ ಸಿ ಅಜ್ಮೀರಾ 1,676 ಮತಗಳನ್ನು ಪಡೆದಿದ್ದಾರೆ.

ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದು, 1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈರ್ವಾ ನಂತರ ಎಡಪಕ್ಷದಿಂದ ಆಯ್ಕೆಯಾದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ. ಧನಂಜಯ್ ಅವರು ಸ್ಕೂಲ್ ಆಫ್ ಆರ್ಟ್ಸ್ ಮತ್ತು ಸೌಂದರ್ಯಶಾಸ್ತ್ರದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದಾರೆ.

ಗೆಲುವಿನ ನಂತರ ಪಿಟಿಐ ಜೊತೆ ಮಾತನಾಡಿದ ಧನಂಜಯ್, ಈ ಗೆಲುವು ಜೆಎನ್‌ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿವಿ ಆವರಣದಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ, ಶುಲ್ಕ ಕಡಿತ, ವಿದ್ಯಾರ್ಥಿ ವೇತನ ಹೆಚ್ಚಳ, ಮೂಲಸೌಕರ್ಯ ಅಭಿವೃದ್ಧಿ ಮತ್ತು ನೀರಿನ ಸಮಸ್ಯೆ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗಾಗಿ ವಿದ್ಯಾರ್ಥಿ ಸಂಘಟನೆ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಎಸ್‌ಎಫ್‌ಐ ಅವಿಜಿತ್‌ ಘೋಷ್‌ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅವರು ಎಬಿವಿಪಿಯ ದೀಪಿಕಾ ಶರ್ಮಾ ಅವರನ್ನು 927 ಮತಗಳ ಅಂತರದಿಂದ ಸೋಲಿಸಿದ್ದಾರೆ. ಘೋಷ್‌ 2,409 ಮತಗಳನ್ನು ಪಡೆದರೆ, ದೀಪಿಕಾಗೆ 1,482 ಮತಗಳು ದೊರೆತಿವೆ.

ಬಿರ್ಸಾ ಅಂಬೇಡ್ಕರ್‌ ಫುಲೆ ವಿದ್ಯಾರ್ಥಿ ಸಂಘಟನೆಯ (ಬಿಎಪಿಎಸ್‌ಎ) ಅಭ್ಯರ್ಥಿ ಪ್ರಿಯಾಂಶಿ ಆರ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆರ್ಯ ಒಟ್ಟು 2,887 ಮತ ಪಡೆದಿದ್ದಾರೆ, ಅವರ ಪ್ರತಿಸ್ಪರ್ಧಿ ಅರ್ಜುನ್‌ ಆನಂದ್‌ 1961 ಮತಗಳನ್ನು ಪಡೆದಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಡ ಸಂಘಟನೆಗಳ ಮೊಹಮ್ಮದ್‌ ಸಾಜಿದ್‌ ಆಯ್ಕೆಯಾಗಿದ್ದಾರೆ. ಲಾಲ್ ಸಲಾಂ ಮತ್ತು ಜೈ ಭೀಮ್ ಘೋಷಣೆಗಳ ನಡುವೆ ವಿಜೇತ ವಿದ್ಯಾರ್ಥಿಗಳನ್ನು ಅವರ ಬೆಂಬಲಿಗರು ಶ್ಲಾಘಿಸಿದ್ದಾರೆ.

ಇದನ್ನು ಓದಿ: ಲೋಕಸಭಾ ಚುನಾವಣೆ 2024: ವಿರೋಧಕ್ಕೆ ಮಣಿದು ಜೈಪುರ ಅಭ್ಯರ್ಥಿಯನ್ನು ಬದಲಾಯಿಸಿದ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...