Homeಮುಖಪುಟಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

ಮೂರು ದಶಕಗಳ ಬಳಿಕ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ದಲಿತ ಅಧ್ಯಕ್ಷರ ಆಯ್ಕೆ

- Advertisement -
- Advertisement -

ದೆಹಲಿಯ ಪ್ರತಿಷ್ಠಿತ ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಡರಂಗದ ವಿದ್ಯಾರ್ಥಿ ಸಂಘಟನೆಗಳು ಗೆಲುವನ್ನು ಸಾಧಿಸಿದ್ದು, ಜೆಎನ್‌ಯು ವಿದ್ಯಾರ್ಥಿ ಸಂಘಟನೆಗೆ ಮೂರು ದಶಕಗಳ ಬಳಿಕ ದಲಿತ ಅಧ್ಯಕ್ಷರೋರ್ವರನ್ನು ಆಯ್ಕೆ ಮಾಡಲಾಗಿದೆ.

4 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಶನ್‌ನ ಧನಂಜಯ್ ಅವರು ಜವಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಪ್ರತಿಸ್ಪರ್ಧಿ ಎಬಿವಿಪಿಯ ಉಮೇಶ್ ಚಂದ್ರ ಅಜ್ಮೀರಾ ಅವರಿಗಿಂತ 922 ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಎಐಎಸ್‌ಎನ ಧನಂಜಯ್ ಅವರು 2,598 ಮತಗಳನ್ನು ಪಡೆದಿದ್ದು, ಉಮೇಶ್ ಸಿ ಅಜ್ಮೀರಾ 1,676 ಮತಗಳನ್ನು ಪಡೆದಿದ್ದಾರೆ.

ಧನಂಜಯ್ ಬಿಹಾರದ ಗಯಾ ಮೂಲದವರಾಗಿದ್ದು, 1996-97ರಲ್ಲಿ ಚುನಾಯಿತರಾದ ಬಟ್ಟಿ ಲಾಲ್ ಬೈರ್ವಾ ನಂತರ ಎಡಪಕ್ಷದಿಂದ ಆಯ್ಕೆಯಾದ ಮೊದಲ ದಲಿತ ಅಧ್ಯಕ್ಷರಾಗಿದ್ದಾರೆ. ಧನಂಜಯ್ ಅವರು ಸ್ಕೂಲ್ ಆಫ್ ಆರ್ಟ್ಸ್ ಮತ್ತು ಸೌಂದರ್ಯಶಾಸ್ತ್ರದ ಪಿಎಚ್‌ಡಿ ವಿದ್ಯಾರ್ಥಿಯಾಗಿದ್ದಾರೆ.

ಗೆಲುವಿನ ನಂತರ ಪಿಟಿಐ ಜೊತೆ ಮಾತನಾಡಿದ ಧನಂಜಯ್, ಈ ಗೆಲುವು ಜೆಎನ್‌ಯು ವಿದ್ಯಾರ್ಥಿಗಳು ದ್ವೇಷ ಮತ್ತು ಹಿಂಸಾಚಾರದ ರಾಜಕೀಯವನ್ನು ತಿರಸ್ಕರಿಸುವ ಜನಾಭಿಪ್ರಾಯವಾಗಿದೆ. ವಿದ್ಯಾರ್ಥಿಗಳು ಮತ್ತೊಮ್ಮೆ ನಮ್ಮ ಮೇಲೆ ವಿಶ್ವಾಸವನ್ನು ತೋರಿಸಿದ್ದಾರೆ. ನಾವು ಅವರ ಹಕ್ಕುಗಳಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿವಿ ಆವರಣದಲ್ಲಿ ವಿದ್ಯಾರ್ಥಿನಿಯರಿಗೆ ಸುರಕ್ಷತೆ, ಶುಲ್ಕ ಕಡಿತ, ವಿದ್ಯಾರ್ಥಿ ವೇತನ ಹೆಚ್ಚಳ, ಮೂಲಸೌಕರ್ಯ ಅಭಿವೃದ್ಧಿ ಮತ್ತು ನೀರಿನ ಸಮಸ್ಯೆ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗಾಗಿ ವಿದ್ಯಾರ್ಥಿ ಸಂಘಟನೆ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.

ಎಸ್‌ಎಫ್‌ಐ ಅವಿಜಿತ್‌ ಘೋಷ್‌ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಅವರು ಎಬಿವಿಪಿಯ ದೀಪಿಕಾ ಶರ್ಮಾ ಅವರನ್ನು 927 ಮತಗಳ ಅಂತರದಿಂದ ಸೋಲಿಸಿದ್ದಾರೆ. ಘೋಷ್‌ 2,409 ಮತಗಳನ್ನು ಪಡೆದರೆ, ದೀಪಿಕಾಗೆ 1,482 ಮತಗಳು ದೊರೆತಿವೆ.

ಬಿರ್ಸಾ ಅಂಬೇಡ್ಕರ್‌ ಫುಲೆ ವಿದ್ಯಾರ್ಥಿ ಸಂಘಟನೆಯ (ಬಿಎಪಿಎಸ್‌ಎ) ಅಭ್ಯರ್ಥಿ ಪ್ರಿಯಾಂಶಿ ಆರ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಆರ್ಯ ಒಟ್ಟು 2,887 ಮತ ಪಡೆದಿದ್ದಾರೆ, ಅವರ ಪ್ರತಿಸ್ಪರ್ಧಿ ಅರ್ಜುನ್‌ ಆನಂದ್‌ 1961 ಮತಗಳನ್ನು ಪಡೆದಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎಡ ಸಂಘಟನೆಗಳ ಮೊಹಮ್ಮದ್‌ ಸಾಜಿದ್‌ ಆಯ್ಕೆಯಾಗಿದ್ದಾರೆ. ಲಾಲ್ ಸಲಾಂ ಮತ್ತು ಜೈ ಭೀಮ್ ಘೋಷಣೆಗಳ ನಡುವೆ ವಿಜೇತ ವಿದ್ಯಾರ್ಥಿಗಳನ್ನು ಅವರ ಬೆಂಬಲಿಗರು ಶ್ಲಾಘಿಸಿದ್ದಾರೆ.

ಇದನ್ನು ಓದಿ: ಲೋಕಸಭಾ ಚುನಾವಣೆ 2024: ವಿರೋಧಕ್ಕೆ ಮಣಿದು ಜೈಪುರ ಅಭ್ಯರ್ಥಿಯನ್ನು ಬದಲಾಯಿಸಿದ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...