Homeಮುಖಪುಟಯುವಕನಿಂದ ತನ್ನ ನಾದಿನಿ ಮತ್ತು ಮಗುವಿನ ಕೊಲೆ..: ನಿರುದ್ಯೋಗವೇ ಕಾರಣ??

ಯುವಕನಿಂದ ತನ್ನ ನಾದಿನಿ ಮತ್ತು ಮಗುವಿನ ಕೊಲೆ..: ನಿರುದ್ಯೋಗವೇ ಕಾರಣ??

- Advertisement -
- Advertisement -

ಮಹಾರಾಷ್ಟ್ರದ ನವೀ ಮುಂಬಯಿಯಲ್ಲಿ ನಿರುದ್ಯೋಗಿ ಯುವಕನೊಬ್ಬ ತನ್ನ ನಾದಿನಿ ಮತ್ತು ಆಕೆಯ 2 ವರ್ಷದ ಮಗುವನ್ನು ಕೊಲೆ ಮಾಡಿ ಬಂಧನಕ್ಕೊಳಗಾಗಿರುವ ಘಟನೆ ಜರುಗಿದೆ.

29 ವರ್ಷದ ಸುರೇಶ್ ಚವಾಣ್ ಎಂಬುವವನೆ ಆರೋಪಿಯಾಗಿ ಜೈಲಿನಲ್ಲಿರುವ ಯುವಕನಾಗಿದ್ದಾನೆ. ಈತನಿಗೆ ಎಷ್ಟೇ ಹುಡುಕಿದ್ದರೂ ಸರಿಯಾದ ಉದ್ಯೋಗ ಸಿಕ್ಕಿರಲಿಲ್ಲ. ಆದರೆ ಈತನ ತಮ್ಮನಿಗೆ ಉದ್ಯೋಗ ಸಿಕ್ಕು ಆತ ಮದುವೆಯಾಗಿ ಮನೆ ಮಾಡಿಕೊಂಡಿದ್ದ. ಪನ್ವೆಲ್ ಸಿಟಿ ಮುನ್ಸಿಪಲ್ ಕಾರ್ಪೊರೇಷನ್ (ಪಿಸಿಎಂಸಿ) ವ್ಯಾಪ್ತಿಯಲ್ಲಿರುವ ಮನೆಯಲ್ಲಿಯೇ ಸುರೇಶ್ ಸಹ ಇದ್ದುಕೊಂಡು ಕಾಲ ಕಳೆಯುತ್ತಿದ್ದ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಸುರೇಶ್ ನಿರುದ್ಯೋಗಿಯಾಗಿದ್ದರಿಂದ ಸಹೋದರರ ನಡುವಿನ ಸಂಬಂಧವು ಬಿಗಡಾಯಿಸಿದೆ. ಜಗಳವಾಗಿ ಸುರೇಶ್ ನನ್ನು ಆತನ ತಮ್ಮ ಮನೆಯಿಂದ ಓಡಿಸಿದ್ದಾನೆ. ಇದರಿಂದ ಖಿನ್ನತೆಗೊಳಗಾಗಿದ್ದ ಸುರೇಶ್ ಹಲವಾರು ಕಡೆ ಅಲೆದಾಡಿ ಉದ್ಯೋಗ ಸಿಗದೇ ಅದೇ ಕೋಪದಲ್ಲಿ ತನ್ನ ತಮ್ಮನ ಮನೆಗೆ ಸೋಮವಾರ ರಾತ್ರಿ ಮತ್ತೆ ಬಂದಿದ್ದಾನೆ.

ಆ ಸಂದರ್ಭದಲ್ಲಿ ತನ್ನ ತಮ್ಮ ಕೆಲಸಕ್ಕೆ ಹೋಗಿದ್ದು ಮನೆಯಲ್ಲಿದ್ದು ತನ್ನ ನಾದಿನಿ ಜೈಶ್ರೀಯೊಂದಿಗೆ ಜಗಳವಾಗಿ ಆಕೆಯನ್ನು ಮತ್ತು ಆಕೆಯ ಎರಡು ವರ್ಷದ ಪುತ್ರ ಅವಿನಾಶ್ ಅವರನ್ನು ಒಬ್ಬರ ನಂತರ ಒಬ್ಬರಂತೆ ದಿಂಬಿನಿಂದ ಮುಖಮುಚ್ಚಿ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ರಾತ್ರಿ 11:30ರ ಸುಮಾರಿಗೆ ತನ್ನ ಕಿರಿಯ ಸಹೋದರ ಕಚೇರಿಯಿಂದ ಮನೆಗೆ ಮರಳುವವರೆಗೂ ಆರೋಪಿ ಸುರೇಶ್ ಶವಗಳ ಪಕ್ಕದಲ್ಲಿ ಕುಳಿತಿದ್ದರು” ಎಂದು ಪೊಲೀಸ್ ಅಧಿಕಾರಿ ದೇವಿದಾಸ್ ಸೋನವಾನೆ ಹೇಳಿದ್ದಾರೆ. ಅವನ ತಮ್ಮ ಪೊಲೀಸರಿಗೆ ತಿಳಿಸಿದ ನಂತರ, ಸುರೇಶ್ ಅವರನ್ನು ಮಂಗಳವಾರ ಆ ಫ್ಲ್ಯಾಟ್‌ನಿಂದ ಬಂಧಿಸಲಾಗಿದೆ.

ತನ್ನ ಸಹೋದರನು ಜೀವನಕ್ಕಾಗಿ ಸ್ವಂತ ಹಣ ಸಂಪಾದಿಸದ ಕಾರಣಕ್ಕಾಗಿ ಅವನನ್ನು ತನ್ನ ಫ್ಲ್ಯಾಟ್‌ನಿಂದ ಓಡಿಸಿದ್ದರಿಂದ ಆರೋಪಿ ಸುರೇಶ್ ನಿರಾಶೆಗೊಂಡಿದ್ದಾನೆಂದು ತೋರುತ್ತದೆ, ಇದೇ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿ ಸೋನವಾನೆ ಹೇಳಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎನ್ನುತ್ತಿದ್ದಾರೆ.

ಮೂಲ: ಎನ್.ಡಿ.ಟಿ.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...