Homeಮುಖಪುಟಯುವಕನಿಂದ ತನ್ನ ನಾದಿನಿ ಮತ್ತು ಮಗುವಿನ ಕೊಲೆ..: ನಿರುದ್ಯೋಗವೇ ಕಾರಣ??

ಯುವಕನಿಂದ ತನ್ನ ನಾದಿನಿ ಮತ್ತು ಮಗುವಿನ ಕೊಲೆ..: ನಿರುದ್ಯೋಗವೇ ಕಾರಣ??

- Advertisement -
- Advertisement -

ಮಹಾರಾಷ್ಟ್ರದ ನವೀ ಮುಂಬಯಿಯಲ್ಲಿ ನಿರುದ್ಯೋಗಿ ಯುವಕನೊಬ್ಬ ತನ್ನ ನಾದಿನಿ ಮತ್ತು ಆಕೆಯ 2 ವರ್ಷದ ಮಗುವನ್ನು ಕೊಲೆ ಮಾಡಿ ಬಂಧನಕ್ಕೊಳಗಾಗಿರುವ ಘಟನೆ ಜರುಗಿದೆ.

29 ವರ್ಷದ ಸುರೇಶ್ ಚವಾಣ್ ಎಂಬುವವನೆ ಆರೋಪಿಯಾಗಿ ಜೈಲಿನಲ್ಲಿರುವ ಯುವಕನಾಗಿದ್ದಾನೆ. ಈತನಿಗೆ ಎಷ್ಟೇ ಹುಡುಕಿದ್ದರೂ ಸರಿಯಾದ ಉದ್ಯೋಗ ಸಿಕ್ಕಿರಲಿಲ್ಲ. ಆದರೆ ಈತನ ತಮ್ಮನಿಗೆ ಉದ್ಯೋಗ ಸಿಕ್ಕು ಆತ ಮದುವೆಯಾಗಿ ಮನೆ ಮಾಡಿಕೊಂಡಿದ್ದ. ಪನ್ವೆಲ್ ಸಿಟಿ ಮುನ್ಸಿಪಲ್ ಕಾರ್ಪೊರೇಷನ್ (ಪಿಸಿಎಂಸಿ) ವ್ಯಾಪ್ತಿಯಲ್ಲಿರುವ ಮನೆಯಲ್ಲಿಯೇ ಸುರೇಶ್ ಸಹ ಇದ್ದುಕೊಂಡು ಕಾಲ ಕಳೆಯುತ್ತಿದ್ದ ಎಂದು ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಸುರೇಶ್ ನಿರುದ್ಯೋಗಿಯಾಗಿದ್ದರಿಂದ ಸಹೋದರರ ನಡುವಿನ ಸಂಬಂಧವು ಬಿಗಡಾಯಿಸಿದೆ. ಜಗಳವಾಗಿ ಸುರೇಶ್ ನನ್ನು ಆತನ ತಮ್ಮ ಮನೆಯಿಂದ ಓಡಿಸಿದ್ದಾನೆ. ಇದರಿಂದ ಖಿನ್ನತೆಗೊಳಗಾಗಿದ್ದ ಸುರೇಶ್ ಹಲವಾರು ಕಡೆ ಅಲೆದಾಡಿ ಉದ್ಯೋಗ ಸಿಗದೇ ಅದೇ ಕೋಪದಲ್ಲಿ ತನ್ನ ತಮ್ಮನ ಮನೆಗೆ ಸೋಮವಾರ ರಾತ್ರಿ ಮತ್ತೆ ಬಂದಿದ್ದಾನೆ.

ಆ ಸಂದರ್ಭದಲ್ಲಿ ತನ್ನ ತಮ್ಮ ಕೆಲಸಕ್ಕೆ ಹೋಗಿದ್ದು ಮನೆಯಲ್ಲಿದ್ದು ತನ್ನ ನಾದಿನಿ ಜೈಶ್ರೀಯೊಂದಿಗೆ ಜಗಳವಾಗಿ ಆಕೆಯನ್ನು ಮತ್ತು ಆಕೆಯ ಎರಡು ವರ್ಷದ ಪುತ್ರ ಅವಿನಾಶ್ ಅವರನ್ನು ಒಬ್ಬರ ನಂತರ ಒಬ್ಬರಂತೆ ದಿಂಬಿನಿಂದ ಮುಖಮುಚ್ಚಿ ಉಸಿರುಗಟ್ಟಿಸಿ ಸಾಯಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ರಾತ್ರಿ 11:30ರ ಸುಮಾರಿಗೆ ತನ್ನ ಕಿರಿಯ ಸಹೋದರ ಕಚೇರಿಯಿಂದ ಮನೆಗೆ ಮರಳುವವರೆಗೂ ಆರೋಪಿ ಸುರೇಶ್ ಶವಗಳ ಪಕ್ಕದಲ್ಲಿ ಕುಳಿತಿದ್ದರು” ಎಂದು ಪೊಲೀಸ್ ಅಧಿಕಾರಿ ದೇವಿದಾಸ್ ಸೋನವಾನೆ ಹೇಳಿದ್ದಾರೆ. ಅವನ ತಮ್ಮ ಪೊಲೀಸರಿಗೆ ತಿಳಿಸಿದ ನಂತರ, ಸುರೇಶ್ ಅವರನ್ನು ಮಂಗಳವಾರ ಆ ಫ್ಲ್ಯಾಟ್‌ನಿಂದ ಬಂಧಿಸಲಾಗಿದೆ.

ತನ್ನ ಸಹೋದರನು ಜೀವನಕ್ಕಾಗಿ ಸ್ವಂತ ಹಣ ಸಂಪಾದಿಸದ ಕಾರಣಕ್ಕಾಗಿ ಅವನನ್ನು ತನ್ನ ಫ್ಲ್ಯಾಟ್‌ನಿಂದ ಓಡಿಸಿದ್ದರಿಂದ ಆರೋಪಿ ಸುರೇಶ್ ನಿರಾಶೆಗೊಂಡಿದ್ದಾನೆಂದು ತೋರುತ್ತದೆ, ಇದೇ ಕೊಲೆಗೆ ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿ ಸೋನವಾನೆ ಹೇಳಿದ್ದಾರೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ ಎನ್ನುತ್ತಿದ್ದಾರೆ.

ಮೂಲ: ಎನ್.ಡಿ.ಟಿ.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...